ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಚಿಂತನಾ ಸಭೆಯಲ್ಲಿ ಕನ್ನಡ ಶಾಲೆಗಳನ್ನು ಉಳಿಸಲು ಎರಡು ಪ್ರಮುಖ ನಿರ್ಣಯಗಳನ್ನು ತೆಗೆದು ಕೊಳ್ಳಲಾಯಿತು. ಅದರಲ್ಲಿ ಕನ್ನಡ ಶಾಲೆಗಳನ್ನು ಉಳಿಸ ಬೇಕು, ಅವುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸ ಬೇಕು , ಅಗತ್ಯಕ್ಕೆ ತಕ್ಕಷ್ಟು ಶಿಕ್ಷಕರನ್ನು ನೇಮಕ ಮಾಡ ಬೇಕು ಎಂಬ ಅಗತ್ಯಗಳನ್ನು ಅನುಸರಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸಲ್ಲಿಸ ಬೇಕು ಎಂದು ಸಭೆ ನಿರ್ಣಯಿಸಿತು. ಇದಕ್ಕೆ ಪಾಲಾದಾರರಾಗಲು ಸಭೆಯಲ್ಲಿದ್ದವರೆಲ್ಲರೂ ಒಮ್ಮೆತದಿಂದ ಒಪ್ಪಿಗೆಯನ್ನು ಸೂಚಿಸಿದರು. ಈ ಕುರಿತು ಸೂಕ್ತ ನಿರ್ಣಯವನ್ನು ತೆಗೆದು ಕೊಳ್ಳಲು ತಜ್ಞರ ಸಮಿತಿಯೊಂದನ್ನು ನೇಮಿಸಲು ಸಭೆಯಲ್ಲಿ ತೀರ್ಮಾನವನ್ನು ತೆಗೆದು ಕೊಳ್ಳಲಾಯಿತು.


COMMERCIAL BREAK
SCROLL TO CONTINUE READING

 ಕನ್ನಡ ಶಾಲೆಗಳು ಉಳಿಯಬೇಕು. ಕನ್ನಡ ಅನ್ನದ ಭಾಷೆಯಾಗಬೇಕು ಎನ್ನುವುದು ಕನ್ನಡಿಗರ ಮೂಲ ಬೇಡಿಕೆಯಾಗಿದೆ. ಇದುವರೆಗೆ ಕನ್ನಡಿಗರಿಗೆ, ಕನ್ನಡ ಭಾಷೆ, ಕನ್ನಡ ಶಾಲೆಗಳ ಉಳಿವಿಗೆ ನಡೆಸಿದ ನ್ಯಾಯಯುತ ಹೋರಾಟಕ್ಕ ಜಯ ಎನ್ನುವುದು ಮರೀಚಿಕೆಯಾಗಿದೆ. ಹಾಗಂದು ರಾಜ್ಯದಲ್ಲಿ ಕನ್ನಡ ಉಳಿಯ ಬೇಕು, ಕನ್ನಡ ಬೆಳೆಯಬೇಕು ಎನ್ನುವ ದೀಕ್ಷೆ ತೊಟ್ಟ ಕನ್ನಡ ಸಾಹಿತ್ಯ ಪರಿಷತ್ತು  ಕನ್ನಡ ಶಾಲೆಗಳನ್ನು ಉಳಿಸುವುದಕ್ಕೆ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಇದಕ್ಕೆ ಸಮಸ್ತ ಕನ್ನಡಿಗರ ಒಪ್ಪಿಗೆ ಸಿಕ್ಕದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತಿಳಿಸಿದರು.


ಇದನ್ನೂ ಓದಿ: ಪೂಜಾ ಗಾಂಧಿ ತಂಗಿ ಯಾರು ಗೊತ್ತೇ, ಇವರು ಕೂಡ ಕನ್ನಡದ ಟಾಪ್‌ ನಟಿ! 


“ಕನ್ನಡ ಶಾಲೆಗಳನ್ನು ಉಳಿಸಿ, ಕನ್ನಡವನ್ನು ಬೆಳೆಸುವ” ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಈಡೇರಿಕೆಗಾಗಿ, ಮುಂದಿನ ಸೂಕ್ತ ಕ್ರಮಕೈಗೊಳ್ಳುವುದರ ಬಗ್ಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ಪಡೆದುಕೊಳ್ಳುವ ನಿಟ್ಟಿನಲ್ಲಿ ಇಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಉನ್ನತ ಮಟ್ಟದ “ಚಿಂತನಾ ಸಭೆ”ಯ ಅದ್ಯಕ್ಷತೆಯನ್ನು  ವಹಿಸಿ ಮಾತನಾಡಿದರು. ಭಾರತ ಎದುರಿಸುವ ಹತ್ತಾರು ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ. ಆದರೆ ಕನ್ನಡ ಶಾಲೆಗಳ ಸ್ಥಿತಿ ಕಂಡಾಗ  ದು:ಖವಾಗುತ್ತದೆ. ಕನ್ನಡ ಶಾಲೆಗಳ ಉಳಿವಿಗೆ ಪರಿಷತ್ತು ನಡೆಸುವ ನ್ಯಾಯಾಂಗ ಹೋರಾಟಕ್ಕೆ ಸಮಸ್ತ ಕನ್ನಡಿಗರ ಬೆಂಬಲ ಸಿಕ್ಕಿರುವುದು ನಮಗೆ ಆನೆ ಬಲ ಬಂದಂತಾಗಿದೆ  ಎಂದು ನಾಡೋಜ ಡಾ. ಮಹೇಶ್‌ ಜೋಶಿ ಅಭಿಪ್ರಾಯ ವ್ಯಕ್ತ ಪಡಿಸಿದರು.ʻಬ್ಯಾಚುಲರ್ ಪಾರ್ಟಿʼ ಕೊಡಲು ರೆಡಿಯಾದ ರಕ್ಷಿತ್ ಶೆಟ್ಟಿ! 


ಮಾಜಿ ಸಚಿವೆ ರಾಣಿ ಸತೀಶ್‌ ಮಾತನಾಡಿ ಕನ್ನಡ ಉಳಿಸುವುದಕ್ಕೆ ವಿಧಾನ ಸೌಧ ಸುತ್ತಿದರೆ ಸಾಲದು. ಮುಖ್ಯವಾಗಿ ಕನ್ನಡ ಶಾಲೆಗಳ ಉಳಿವಿಗೆ ಆರ್ಥಿಕ ಬೆಂಬಲ ಬೇಕಾಗಿದೆ.  ಮುಂದಿನ ಬಜೆಟ್‌ನಲ್ಲಿ ಕನ್ನಡ ಶಾಲೆಗಳಿಗಾಗಿಯೇ ಪ್ರತ್ಯೇಕ ಆಯವ್ಯಯ ಮಂಡಿಸಬೇಕು. ಮಹಿಳೆಯರಿಗೆ ಉಚಿತ ಬಸ್‌ ನೀಡುವುದಕ್ಕಿಂತ ಶಾಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆಯಾಗಬೇಕು ಎನ್ನುವ ಮಾತನ್ನು ಹೇಳಿದರು.


ಹಿರಿಯ ಸಾಹಿತಿ ಡಾ. ದೊಡ್ಡರಂಗೆಗೌಡರು ಮಾತನಾಡಿ ಯಾವ ಸರ್ಕಾರಕ್ಕೂ ಕನ್ನಡ ಅದ್ಯತೆಯಾಗಿ ಉಳಿದಿಲ್ಲ. ಆಡಳಿತಕ್ಕೆ ಬೇಡದ ಮೇಲೆ ಇನ್ನಾರಿಗೆ ಬೇಕಾಗಿದೆ ಕನ್ನಡ ಎನ್ನುವ ಸ್ಥಿತಿಗೆ ನಾವು ಬಂದಿದ್ದೇವೆ. ಪೋಷಕರು ತಮ್ಮಮಕ್ಕಳ ಭವಿಷ್ಯವನ್ನು ನೋಡುತ್ತಾರೆ. ಅದಕ್ಕಾಗಿಯೇ ಆಂಗ್ಲ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ತಮ್ಮ ಸೂತ್ತಮುತ್ತಲಿನಲ್ಲಿ ಕನ್ನಡ ಶಾಲೆಗಳಿದ್ದರೂ ಮಕ್ಕಳನ್ನು ಕಳಿಸದ ಪರಸ್ಥಿತಿ ಬಂದು ಬಿಟ್ಟಿದೆ.  ಅದಕ್ಕೆ ಕನ್ನಡ ಶಾಲೆಗಳನ್ನು ಮಾದರಿ ಶಾಲೆಯಾಗಿ ಮಾಡುವುದೊಂದೆ ಇದ್ದಕ್ಕೆ ಪರಿಹಾರವಾಗಿದೆ ಎಂದು ತಿಳಿಸಿದರು.


ಹಿರಿಯ ಲೇಖಕ ಪ್ರಧಾನ ಗುರುದತ್ತ ಮಾತನಾಡಿ ಕನ್ನಡ ಶಾಲೆಗಳು ಸರಕಾರಿ ಅಧಿಕಾರಿಗಳಿಗೆ, ಶಾಸಕರಿಗೆ , ಜನಪ್ರತಿನಿಧಗಳಿಗೆ  ಯಾರಿಗೂ ಬೇಕಾಗಿಲ್ಲ. ಮಕ್ಕಳ ಹಿತ ದೃಷ್ಟಿಯಿಂದ ಇಂಗ್ಲಿಷ್‌ ಶೀಕ್ಷಣ ಸೂಕ್ತವಲ್ಲ. ಅದು ಕೇವಲ ಗಿಣಿ ಪಾಠ ಇದ್ದಂತೆ. ಅದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದಾದರೆ ನ್ಯಾಯಾಂಗದ ಮೂಲಕ ಸರಕಾರಕ್ಕೆ ಬರೆಹಾಕುವ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಬೇಲಿಮಠದ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮೀಗಳು ಮಾತನಾಡಿ ದೇಶದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಬ್ರಿಟಿಷರು ತಮ್ಮ ಆಳ್ವಿಕೆಯ ಕಾಲದಲ್ಲಿ ಪರಿಚಯಿಸಿದರು. ಆದರೆ ನಾವು ಸ್ವಾಭಿಮಾನಿ ಭಾರತೀಯರು, ಕನ್ನಡಿಗರು ವಿರೋಧಿಸುತ್ತಲೇ ಬಂದಿದ್ದೆವು. ಈ ಮಧ್ಯ ನಮ್ಮಲ್ಲಿ ಕನ್ನಡದ ತುಡಿತ ಕಡಿಮೆಯಾಗಿರುವುದು ವಿಷಾದನೀಯ. ಹೋರ ದೇಶಗಳಲ್ಲಿ ಕನ್ನಡ ಜನಪ್ರಿಯಗೊಳ್ಳುತ್ತಿದ್ದರೆ, ನಮ್ಮ ರಾಜ್ಯದಲ್ಲಿ ನಮ್ಮವರೇ ಅಸಡ್ಡೆ ತೊರಿಸುತ್ತಿದ್ದಾರೆ. ಆದ್ದರಿಂದ ಕನ್ನಡ ಶಾಲೆಗಳ ಉಳಿವಿಗೆ ಜನಾಂದೋಲನ ಒಂದೇ ಪರಿಹಾರ ಎಂದು ಹೇಳಿದರು.


ಕನ್ನಡ ಹೋರಾಟಗಾರ  ಬೀದರ್‌ನ ಶ್ರೀ ರೇವಣ ಸಿದ್ದಪ್ಪ ಜಲಾದಿ ಮಾತನಾಡಿ ಕನ್ನಡ ಶಾಲೆಗಳನ್ನು ಖಾಸಗಿಯವರು ಆರಂಭಿಸಲು ಮುಂದಾದರೆ ಸರಕಾರವೇ ಕತ್ತು ಹಿಚುಕುವ ಕೆಲಸ ಮಾಡುತ್ತಿದೆ. ನಿಯಮಗಳ ಹೆಸರಿನಲ್ಲಿ ಕನ್ನಡ ಶಾಲೆಗಳನ್ನು ತೆರಯುವಂತೆಯೂ ಇಲ್ಲ, ಇದ್ದ ಶಾಲೆಗಳನ್ನು ಉಳಿಸಿಕೊಂಡು ಹೊಗುವಂತೆಯೂ ಇಲ್ಲ ಎನ್ನುವ ವಾಸ್ತವ ಸ್ಥಿತಿಯನ್ನು ಸಭೆಯಲ್ಲಿ ತೆರೆದಿಟ್ಟರು.


ಮಾಜಿ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಬಿ. ಶಿವಲಿಂಗೇಗೌಡರು ಮಾತನಾಡಿ ಮಕ್ಕಳನ್ನು ಕನ್ನಡ ಶಾಲೆಗೆ ಕಳಿಸಲು ಪೋಷಕರು ಮನಸ್ಸು ಮಾಡಬೇಕು ಅದಕ್ಕೆ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಇರುವಂತೆ ಮಾಡಬೇಕು ಎಂದರು. ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ  ಡಾ.ಎ.ಮುರೆಗೆಪ್ಪ  ಮಾತನಾಡಿ ಕನ್ನಡ ಶಾಲೆಗಳು ಉಳಿಯಬೇಕು ಅದಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಹೋರಾಟದಲ್ಲಿ ನಾವೇಲ್ಲಾ ಸಕ್ರೀಯವಾಗಿ ಭಾಗಿಯಾಗಬೇಕು ಎಂದು ಹೇಳಿದರು.


ಕನ್ನಡ ಹೋರಾಟಗಾರ್ತಿ ಕೆ. ಶರಿಫಾ ಮಾತನಾಡಿ ಕನ್ನಡ ಶಾಲೆಗಳ ಅಧೊಗತಿಗೆ ಆಡಳಿತ ಮಾಡುವವರೇ ಕಾರಣ ಎಲ್ಲಾ ರಾಜಕಾರಣಿಗಳು ಖಾಸಗಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಅವರಿಗೆ ಕನ್ನಡ ಶಾಲೆಗಳು ಬೇಕಾಗಿಲ್ಲ ಎಂದು ಆರೋಪಿಸಿದರು.  ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಗಣ್ಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತ ಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಮುಂದಾಳತ್ವದಲ್ಲಿ ಕನ್ನಡ ಶಾಲೆ ಉಳಿವಿಗೆ ಟೊಂಕ ಕಟ್ಟಿ ನಿಲ್ಲಬೇಕು. ಅದಕ್ಕೆ ಪ್ರತಿಯೊಬ್ಬರ ಬೆಂಬಲವೂ ಇರುವುದು ಎನ್ನುವ ಸರ್ವಾನುಮತದ ಅಭಿಪ್ರಾಯ ಚಿಂತನಾ ಸಭೆಯಲ್ಲಿ ಮೂಡಿ ಬಂದಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.