ಬೆಂಗಳೂರು: ಕಳೆದ 4 ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ಧವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘SCP-TSP ಉಪಯೋಜನೆಗೆ ಮೀಸಲಿಟ್ಟಿರುವ ಹಣವನ್ನು ನಿಗದಿಪಡಿಸದೆ ಇದ್ದ ಅನ್ಯ ಯೋಜನೆಗಳಿಗೆ ಬಳಕೆ ಮಾಡುವುದು ಕಾನೂನು ವಿರೋಧಿ ನಡೆಯಾಗಿದ್ದು, ಇದಕ್ಕೆ ಕಾರಣಕರ್ತರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.


Dingaleshwar Swamiji : ಸಚಿವ ಸಿಸಿ ಪಾಟೀಲ್ ವಿರುದ್ಧ ಕಿಡಿಕಾರಿದ ದಿಂಗಾಲೇಶ್ವರ ಶ್ರೀಗಳು


‘2021-22ರ ಬಜೆಟ್ ನಲ್ಲಿ SCP-TSP ಕಾಯ್ದೆಯಡಿ ಮೀಸಲಿಟ್ಟಿರುವ ಶೇ.24.1ರಷ್ಟು ಅಂದರೆ 26,695 ಕೋಟಿ ರೂ.ವನ್ನು ರಾಜ್ಯ ಬಿಜೆಪಿ ಸರ್ಕಾರ ಪರಿಶಿಷ್ಟರಿಗಾಗಿ ಖರ್ಚು ಮಾಡಿದೆಯೇ? ಮೀಸಲಿಟ್ಟ ಹಣದಲ್ಲಿ 7,885 ಕೋಟಿ ರೂ.ಗಳನ್ನು ಮೂಲಸೌಕರ್ಯ ಯೋಜನೆಗಳಿಗೆ ವ್ಯಯ ಮಾಡಿರುವುದು ಕಾನೂನಿನ ಉಲ್ಲಂಘನೆಯಲ್ಲವೇ?’ ಅಂತಾ ಅವರು ಪ್ರಶ್ನಿಸಿದ್ದಾರೆ.


‘2018-21ರ ನಡುವಿನ 4 ವರ್ಷಗಳ ಅವಧಿಯಲ್ಲಿ SCP-TSP ಹಣವನ್ನು ನೀರಾವರಿ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಯೋಜನೆಗಳಿಗೆ ಖರ್ಚು ಮಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳು ನೇರ ಫಲಾನುಭವಿಗಳಾಗಿರುವ ಯೋಜನೆಗಳಿಗೆ ಹಣವನ್ನು ಕಡಿತಗೊಳಿಸಿರುವುದು ಅನ್ಯಾಯವಲ್ಲವೇ?’ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಟಿಪ್ಪು ಖಡ್ಗಕ್ಕೆ ಸಲಾಮು ಹಾಕಿ ಚಾಮರಾಜಪೇಟೆ ಎನ್ನುವಿರಾ?: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ


‘ಕಳೆದ 3 ವರ್ಷಗಳಿಂದ ರಾಜ್ಯದ ಬಿಜೆಪಿ ಸರ್ಕಾರವು ಈ ವರ್ಗಗಳಿಗೆ ಖರ್ಚು ಮಾಡುವ ಅನುದಾನವನ್ನು ಒಂದೇ ಸಮನೆ ಕಡಿಮೆ ಮಾಡುತ್ತಿದೆ. ಬಜೆಟ್ ಗಾತ್ರ ಮಾತ್ರ ದೊಡ್ಡದಾಗುತ್ತಿದೆಯೇ ಹೊರತು, ಜನರ ಕಲ್ಯಾಣಕ್ಕಾಗಿ ಖರ್ಚು ಮಾಡುವ ಅನುದಾನ ಕಡಿಮೆಯಾಗುತ್ತಿದೆ. ಈ ಮೂಲಕ ನಾಡಿನ ಶೋಷಿತ ಜನರಿಗೆ ಸರ್ಕಾರ ಅನ್ಯಾಯವೆಸಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.