ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ "ಬರ" ಎಂಬ ಗ್ಯಾರಂಟಿ ಖಚಿತ ಮತ್ತು ನಿಶ್ಚಿತವೆಂದು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ರಾಜ್ಯವನ್ನು ಆಳಿದ ಅವಧಿಯ ಬಹುಪಾಲು ರಾಜ್ಯ ಬರಪೀಡಿತವಾಗಿತ್ತು. ಆದರೆ ಈ ಬಾರಿ ತುಸು ಹೆಚ್ಚೇ ಎಂಬಂತೆ ಬರದ ಕರಿಛಾಯೆ, ರಾಜ್ಯದ ಜನತೆಯ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ’ ಎಂದು ಕಿಡಿಕಾರಿದೆ. ‘ಕಳೆದ ವರ್ಷ ಇದೇ ಸಮಯದಲ್ಲಿ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶಗಳಾಗಿರುವ ಕೋಲಾರ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ತುಂಬಿ ಕೋಡಿ ಹರಿದಿದ್ದವು. ಆದರೆ ಈ ವರ್ಷ ಅತಿಹೆಚ್ಚು ಮಳೆ ಬೀಳುವ ಮಲೆನಾಡು ಸಹ ಬರಗಾಲದ ನಾಡಾಗಿದೆ. ಕಳೆದ ವರ್ಷ ತುಂಬಿ ತುಳುಕುತ್ತಿದ್ದ ಜಲಾಶಯಗಳು ಒಂದೆರೆಡು ತಿಂಗಳಲ್ಲಿ ಬರಿದಾಗುವ ಹಂತ ತಲುಪಿವೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


COMMERCIAL BREAK
SCROLL TO CONTINUE READING

‘ಮಳೆನಾಡಿನಂತಹ ಮಲೆನಾಡಿನಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದರೆ ಪರಿಸ್ಥಿತಿ ಎಷ್ಟು ವಿಕೋಪಕ್ಕೆ ತಿರುಗಿದೆ ಎಂಬುದು ಅರ್ಥವಾಗುತ್ತದೆ. ಆದರೆ ಇದೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಬೇಕಾಗಿದ್ದ ರಾಜ್ಯ ಸರ್ಕಾರ ಸಂಪೂರ್ಣ "ಕುರುಡ-ಕಿವುಡ-ಮೂಗ"ನಂತೆ ವರ್ತಿಸುತ್ತಿರುವುದು ಮಾತ್ರ ನಿಜಕ್ಕೂ ನಾಚಿಕೆಗೇಡು. ಪ್ರಸ್ತುತ ರಾಜ್ಯದಲ್ಲಿ ಒಟ್ಟು 196 ತಾಲೂಕುಗಳು ಬರಪೀಡಿತವಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಈ ತಿಂಗಳ ಅಂತ್ಯದ ವೇಳೆಗೆ ಬರಪೀಡಿತ ತಾಲೂಕುಗಳ ಸಂಖ್ಯೆ 210 ದಾಟಿದರೂ ಅಚ್ಚರಿಯಿಲ್ಲ. ವಿಪರ್ಯಾಸವೆಂದರೆ ರಾಜ್ಯದಲ್ಲಿರುವ ಒಟ್ಟು ತಾಲೂಕುಗಳ ಸಂಖ್ಯೆ 233. ರಾಜ್ಯದ ಶೇ.90ಕ್ಕೂ ಹೆಚ್ಚು ಪ್ರದೇಶ ಬರಪೀಡಿತವಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಈ ರೀತಿಯ ಬರ ವ್ಯಾಪಿಸಿರುವುದು ಇದೇ ಮೊದಲು’ ಎಂದು ಬಿಜೆಪಿ ಮಾಹಿತಿ ನೀಡಿದೆ.


ಸೈಬರ್ ಅಪರಾಧ ತಡೆಗೆ ಅತ್ಯಾಧುನಿಕ ವಿಧಿವಿಜ್ಞಾನ ಸಾಧನಗಳು ಅಗತ್ಯ: ಸಿಎಂ ಸಿದ್ದರಾಮಯ್ಯ


‘ಪರಿಸ್ಥಿತಿ ಇಷ್ಟರ ಮಟ್ಟಿಗೆ ಕೈ ಮೀರಿದರೂ, ರಾಜ್ಯದ "ಕೈ" ಸರ್ಕಾರ  ಬರ ಘೋಷಿಸಲು ಮೀನಾಮೇಷ ಎಣಿಸುತ್ತಾ, ಒಳಜಗಳದಲ್ಲಿ ನಿರತವಾಗಿ, ರಾಜ್ಯದ ಜನತೆಯ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಬರದ ನೇರ ಪರಿಣಾಮ ಮೊದಲು ಬೀಳುವುದೇ ನಾಡಿನ ನೇಗಿಲಯೋಗಿಗಳ ಮೇಲೆ.  ಸಿದ್ದರಾಮಯ್ಯರವರ ಮೊದಲ ಸರ್ಕಾರದ ಅವಧಿಯಲ್ಲಿ (2013-2018) ರಾಜ್ಯದಲ್ಲಿ ಬರ ವ್ಯಾಪಕವಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಬರದ ಬೇಜವಾಬ್ದಾರಿ ನಿರ್ವಹಣೆ ಹಾಗೂ ರೈತ ವಿರೋಧಿ ನೀತಿಯಿಂದ ಒಟ್ಟು 4,257 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಸಿದ್ದರಾಮಯ್ಯರವರ ಸರ್ಕಾರ ರೈತರ ಆತ್ಮಹತ್ಯೆಗಳಿಗೂ ತನಗೂ ಸಂಬಂಧವೇ ಇಲ್ಲ ಎನ್ನುವ ರೀತಿಯಲ್ಲಿ ವರ್ತಿಸಿತ್ತು’ ಎಂದು ಬಿಜೆಪಿ ಟೀಕಿಸಿದೆ.


ಸರ್ವಪಕ್ಷ ಸಭೆ :ತಮಿಳುನಾಡಿಗೆ ಕಾವೇರಿ ಬಿಡದಿರಲು ನಿರ್ಧಾರ!


‘ಕೇವಲ ಇದೊಂದೇ ಅಲ್ಲ, ರೈತರ ಮೊಗದಲ್ಲಿ ಮಂದಹಾಸವನ್ನು ಮೂಡಿಸುತ್ತಿದ್ದ, ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಾದ ಭೂ ಚೇತನ, ಭೂ ಸಿರಿ, ರೈತ ಶಕ್ತಿ, ರೈತ ವಿದ್ಯಾನಿಧಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿದಂತೆ ಹಲವಾರು ಯೋಜನೆಗಳನ್ನು ರಾಜಕೀಯ ದ್ವೇಷಕ್ಕಾಗಿ ವಾಪಸ್ ಪಡೆದಿದೆ. ಇದು ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯ ಸ್ಪಷ್ಟ ನಿದರ್ಶನ. ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ರಾಜ್ಯದಲ್ಲಿ ಬರ ಘೋಷಿಸಿ, ಬರ ಪರಿಹಾರದ ಕ್ರಮಗಳನ್ನು ಸಾಗರೋಪಾದಿಯಲ್ಲಿ ಕೈಗೊಳ್ಳಬೇಕು. ಇಲ್ಲವಾದಲ್ಲಿ ರೈತರ ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗಲಿದೆ’ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.