INDIA PM candidate: ಕೇಂದ್ರದಲ್ಲಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ಸದ್ಯ ಕಾಂಗ್ರೆಸ್‌ನಲ್ಲಿರುವ ಕನ್ನಡಿಗರು ಅಸಮರ್ಥರು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿರುವುದು ಉದ್ದೇಶಪೂರ್ವಕವಾಗಿ ಮಲ್ಲಿಕಾರ್ಜುನ್ ಖರ್ಗೆಯವರನ್ನು ಅವಮಾನಿಸಲು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೆಂದು ಬಿಜೆಪಿ ಟೀಕಿಸಿದೆ.


COMMERCIAL BREAK
SCROLL TO CONTINUE READING

ಪ್ರಧಾನಿ ಹುದ್ದೆಯ ರೇಸಿಗೆ ರಾಜ್ಯದಿಂದ ಯಾರೂ ಇಲ್ಲವೆಂದಿದ್ದ ಸಿಎಂ ಸಿದ್ದರಾಮಯ್ಯರ ಹೇಳಿಕೆ ವಿಚಾರವಾಗಿ ಗುರುವಾರ ಟ್ವೀಟ್‌ ಮಾಡಿರುವ ಬಿಜೆಪಿ, ʼಅಸಲಿಗೆ ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲವೆಂಬುದು ಸೂರ್ಯ-ಚಂದ್ರರು ಇರುವಷ್ಟೆ ಸತ್ಯ. ಆದರೆ ಕರ್ನಾಟಕದ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಪ್ರಧಾನಿ ಹುದ್ದೆಗೆ ಸಮರ್ಥರು ಎಂಬ ಹೇಳಿಕೆಯನ್ನು ನೀಡುವಷ್ಟು ಸಿದ್ದರಾಮಯ್ಯನವರಿಗೆ ವಿಶಾಲ ಮನಸ್ಥಿತಿ ಇರದಿರುವುದು ಅವರಿಗೆ ದಲಿತ ನಾಯಕರ ಹಾಗೂ ಆ ಸಮುದಾಯದ ಮೇಲಿರುವ ಅಸಡ್ಡೆಯ ಪ್ರತೀಕʼವೆಂದು ಕುಟುಕಿದೆ.


ಇದನ್ನೂ ಓದಿ: ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಿರುವ ಸಿಎಂ


ಮತ್ತೊಮ್ಮೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ


ʼಇನ್ನು 2013ರ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್‌ ಕೊರಟಗೆರೆಯಲ್ಲಿ ಗೆದ್ದರೆ, ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿಯಾಗುತ್ತಾರೆಂಬ ಕಾರಣಕ್ಕೆ ಕೊರಟಗೆರೆಯಲ್ಲಿ ಅವರನ್ನು ಸೋಲಿಸಿದ್ದು ಸಹ ಸಿದ್ದರಾಮಯ್ಯನವರೇ ಎಂಬುದನ್ನು ಕೊರಟಗೆರೆಯ ಜನ ಇಂದಿಗೂ ಮಾತನಾಡುತ್ತಾರೆ. ಆರು ಬಾರಿ ಸಂಸದ ಕೆ.ಎಚ್.ಮುನಿಯಪ್ಪನವರನ್ನು ಕೋಲಾರಕ್ಕಷ್ಟೇ ಸೀಮಿತಗೊಳಿಸಿದ್ದು, ತಮ್ಮ ಬಹುಕಾಲದ ಒಡನಾಡಿ ಶ್ರೀನಿವಾಸ್‌ ಪ್ರಸಾದ್‌ ಅವರನ್ನು ಅವಮಾನಿಸಿ ಕಾಂಗ್ರೆಸ್‌ ತೊರೆಯುವಂತೆ ಮಾಡಿದ್ದು, ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಮತಾಂಧ ಜಿಹಾದಿಗಳನ್ನು ಮೆಚ್ಚಿಸಲು ದಲಿತ ಶಾಸಕನಿಗೆ ಟಿಕೇಟ್‌ ತಪ್ಪಿಸಿದ್ದು ಹೀಗೆ ದಲಿತರಿಗೆ ಸಿದ್ದರಾಮಯ್ಯನವರು ಮಾಡಿದ ದ್ರೋಹದ ಪಟ್ಟಿ ಉದ್ದುದ್ದ ಬೆಳೆಯುತ್ತದೆʼ ಎಂದು ಬಿಜೆಪಿ ಟ್ವೀಟ್‌ ಮಾಡಿದೆ. 


ʼದಲಿತ ನಾಯಕರನ್ನು ತುಳಿದ ಸಿದ್ದರಾಮಯ್ಯನವರು ಈ ಅವಧಿಯಲ್ಲಿ ದಲಿತ ಸಮುದಾಯವನ್ನು ಸಹ ತುಳಿದಿರುವುದು ಅತ್ಯಂತ ವಿಪರ್ಯಾಸ. ದಲಿತರ ಕಲ್ಯಾಣಕ್ಕೆ ಮೀಸಲಾಗಿದ್ದ SCSP/TSPಯ ₹25 ಸಾವಿರ ಕೋಟಿಯನ್ನು ಅನ್ಯ ಉದ್ದೇಶಕ್ಕೆ ಬಳಸಿರುವುದು ಸಿದ್ದರಾಮಯ್ಯನವರ ದಲಿತ ವಿರೋಧಿ ಮನಸ್ಥಿತಿಯ ಸುಸ್ಪಷ್ಟ ನಿದರ್ಶನ. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾದರೆ ತಾವು ಸ್ವಾಗತಿಸುತ್ತೇವೆಂದು ಭಾಷಣ ಬಿಗಿದಿದ್ದ ಸಿದ್ದರಾಮಯ್ಯನವರು ಚುನಾವಣೆಯಲ್ಲಿ ಗೆದ್ದ ಬಳಿಕ ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆಂದು ತಮ್ಮ ವಂಧಿಮಾಗದರಿಂದ ಹೇಳಿಸುತ್ತಿರುವುದು ದಲಿತರಿಗೆ ಸಿಎಂ ಸ್ಥಾನ ಬಿಟ್ಟುಕೊಡಲು ತಾವು “ಸಿದ್ದ”ರಿಲ್ಲ ಎಂಬುದರ ಸೂಚಕವಷ್ಟೆ ಎಂದು ಬಿಜೆಪಿ ಟೀಕಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.