ಬೆಂಗಳೂರು: ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ಕಾಂಗ್ರೆಸ್ ಪಕ್ಷದ ನಾಯಕರು ಸ್ವಂತಿಕೆಯನ್ನೇ ಮರೆತು "ಜೀ ಹುಜೂರ್‌" ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

‘ಕರ್ನಾಟಕ ಕಾಂಗ್ರೆಸ್‌ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ ಮಲ್ಲಿಕಾರ್ಜುನ್ ಖರ್ಗೆರವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ಕಾಂಗ್ರೆಸ್ ನಾಯಕರು ಸ್ವಂತಿಕೆ ಮರೆತು "ಜೀ ಹುಜೂರ್‌" ಸಂಸ್ಕೃತಿಗೆ ಶರಣಾಗಿದ್ದಾರೆ’ ಅಂತಾ ಕುಟುಕಿದೆ.


ಮೌಢ್ಯಕ್ಕೆ ಸಡ್ಡು ಹೊಡೆದ ಎರಡನೇ ಸಿಎಂ ಬಸವರಾಜ ಬೊಮ್ಮಾಯಿ!!


‘2013ರಿಂದ 2018ರವರೆಗೆ ಏನಾಗಿತ್ತು ನೆನಪಿಸಿಕೊಳ್ಳಿ. ಕೆ.ಸಿ.ವೇಣುಗೋಪಾಲ್ ಎಂಬ ಸೋನಿಯಾ ಗಾಂಧಿಯವರ ಅಂಚೆಯಣ್ಣನ ಪಾದಾರವಿಂದಗಳಿಗೆ ರಾಜ್ಯದ ಅಂದಿನ ಕಾಂಗ್ರೆಸ್‌ ಸರ್ಕಾರವನ್ನು ಅರ್ಪಿಸಲಾಗಿತ್ತು. ಸಿದ್ದರಾಮಯ್ಯನವರು ಕನ್ನಡ ಅಸ್ಮಿತೆಯನ್ನು ಅವರ ಮುಂದೆ ನೈವೇದ್ಯಕ್ಕಿಟ್ಟಿದ್ದರು. ಈಗ ಅಧಿಕಾರವಿಲ್ಲದಿದ್ದರೂ ಅದೇ ಸಂಸ್ಕೃತಿ ಮರುಕಳಿಸಿದೆ’ ಅಂತಾ ಬಿಜೆಪಿ ಟೀಕಿಸಿದೆ.


ಬಿಎಂಟಿಸಿಯ ಎಂಟು ಭ್ರಷ್ಟ ಅಧಿಕಾರಿಗಳು ಸಸ್ಪೆಂಡ್


ಲೂಟಿ ಹೊಡೆಯಲು ಹವಣಿಸುತ್ತಿದೆ. ಕನ್ನಡಿಗರು ಇದನ್ನು ಎಂದಿಗೂ ಸಾಧ್ಯವಾಗಿಸುವುದಿಲ್ಲ’ವೆಂದು ಬಿಜೆಪಿ ಹೇಳಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.