ಬೆಂಗಳೂರು: ತಬ್ಲಿಘಿಗಳು ಮೊದಲನೇ ಅಲೆ(Corona 1st Wave)ಗೆ ಕಾರಣರಾದರೆ ಕಾಂಗ್ರೆಸ್ಸಿಗರು ಮೂರನೇ ಅಲೆಗೆ ಕಾರಣವಾಗುತ್ತಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ. ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

#ಸುಳ್ಳಿನಜಾತ್ರೆ #ಕೋವಿಡ್‌ಯಾತ್ರೆ ಹ್ಯಾಶ್ ಟ್ಯಾಗ್ ಬಳಸಿರುವ ಬಿಜೆಪಿ, ‘ಕಾಂಗ್ರೆಸ್ ಪಾದಯಾತ್ರೆ(Mekedatu Padayatra) = ತಬ್ಲಿಘಿ ಇಬ್ಬರೂ ಹರಡುತ್ತಿರುವುದು ಕೋವಿಡ್ ಸೋಂಕು. ತಬ್ಲಿಘಿಗಳು ಮೊದಲನೇ ಅಲೆಗೆ ಕಾರಣರಾದರೆ ಕಾಂಗ್ರೆಸ್ಸಿಗರು ಮೂರನೇ ಅಲೆಗೆ ಕಾರಣವಾಗುತ್ತಿದ್ದಾರೆ. ಬೆಂಗಳೂರಿಗೆ ನೀರು ಹಂಚುವುದಕ್ಕಾಗಿ ಈ ಪಾದಯಾತ್ರೆ ಎಂದು #ಸುಳ್ಳಿನಜಾತ್ರೆ ಮಾಡುತ್ತಿರುವ ಕಾಂಗ್ರೆಸ್, ವಾಸ್ತವದಲ್ಲಿ ಬೆಂಗಳೂರಿಗೆ ಕೋವಿಡ್ ರಫ್ತು ಮಾಡುತ್ತಿದೆ’ ಅಂತಾ ಕುಟುಕಿದೆ.


ಡಿ.ಕೆ.ಶಿವಕುಮಾರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ


‘ಮೇಕೆದಾಟು ಪಾದಯಾತ್ರೆ(Mekedatu Project)ಯ ಮೂಲಕ ಕೋವಿಡ್ ಸೋಂಕಿತ ಕಾಂಗ್ರೆಸಿಗರು ಊರಿಗೆಲ್ಲ ಸೋಂಕು ಹಂಚುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ. ಕೊರೋನಾ ಸ್ಪ್ರೆಡರ್ ಡಿಕೆ ಸೋದರರೇ ನಿಮ್ಮ #ಸುಳ್ಳಿನಜಾತ್ರೆ ಪ್ರಹಸನದಲ್ಲಿ 20 ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೋವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


Corona 3rd Wave)ಯ ಸೂಪರ್ ಸ್ಪ್ರೆಡರ್ ಆಗುತ್ತಿದೆ. ಕೋವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ. ಕೋವಿಡ್‌ ಸೂಪರ್ ಸ್ಪ್ರೆಡರ್ ಕಾಂಗ್ರೆಸ್’ ಅಂತಾ ಬಿಜೆಪಿ ಆರೋಪಿಸಿದೆ.


ಬೆಂಗಳೂರಿನ ಮೇಲೆ ಕೊರೊನಾ ಕರಿನೆರೆಳು: ಒಂದೇ ವಾರದಲ್ಲಿ ಹೆಚ್ಚಾಯ್ತು ಕಂಟೈನ್ಮೆಂಟ್ ಜೋನ್ ಗಳ ಸಂಖ್ಯೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ನ್ಯೂಸ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.