ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. #ಕಾವೇರಿನಮ್ಮದು #NadaDrohiCongress ಹ್ಯಾಶ್‍ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾವೇರಿ ವಿಷಯದಲ್ಲಿ ಸ್ವಾರ್ಥದ ಮೈತ್ರಿಕೂಟದ ರಚನೆ ಆರಂಭ ಆದಾಗಿನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರವು ಎಂ.ಕೆ.ಸ್ಟಾಲಿನ್‌ ಗುಲಾಮರಂತೆ ಕೆಲಸ ಮಾಡಿದೆಯೇ ಹೊರತು ರಾಜ್ಯದ ಹಿತವನ್ನು ಎಳ್ಳಷ್ಟೂ ಕಾಪಾಡಿಲ್ಲ’ವೆಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

‘ಕಾವೇರಿಯನ್ನು ಹರಿಯಲು ಬಿಟ್ಟು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಶ್ರಮಪಡದಿದ್ದರೇ... ಆಗುತ್ತಿತ್ತೇ I.N.D.I. ಮೈತ್ರಿಕೂಟ, ಸೇರುತ್ತಿತ್ತೇ ಡಿ.ಎಂ.ಕೆ..??, ಸೇರುತ್ತಿತ್ತೇ ಡಿ.ಎಂ.ಕೆ..?!. ಈ ಸಾಲುಗಳು ಸದ್ಯ ಸಮಾಜದಲ್ಲಿ ಅತಿಹೆಚ್ಚು ಸದ್ದು ಮಾಡುತ್ತಿವೆ. ಸದ್ದು ಮಾಡಲು ಪ್ರಮುಖ ಕಾರಣ ಆ ಸಾಲುಗಳಲ್ಲಿರುವ ನಿಜಾಂಶ. ರಾಜ್ಯದ ಕಾಂಗ್ರೆಸ್ ಸರ್ಕಾರ ನ್ಯಾಯಾಲಯದ ಆದೇಶಕ್ಕೂ ಮೊದಲೇ ಸ್ಟಾಲಿನ್ ನಾಡಿನ ಕಡೆಗೆ ನೀರು ಹರಿಸಿದ್ದು ಯಾಕೆ ಅನ್ನುವ ಸತ್ಯ ಕನ್ನಡಿಗರೆಲ್ಲರಿಗೂ ತಿಳಿದಿದೆ’ ಎಂದು ಬಿಜೆಪಿ ಕುಟುಕಿದೆ.


3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ


ಕೋರ್ಟ್ ಆದೇಶ ಪಾಲಿಸಿ ತಮಿಳುನಾಡಿಗೆ ನೀರು ಬಿಡುತ್ತೇವೆ: ಸಚಿವ ಡಾ. ಜಿ. ಪರಮೇಶ್ವರ್


‘ಆ ಸಮಯದಲ್ಲಿ ಕೇಂದ್ರದಲ್ಲಿದ್ದ ಯುಪಿಎ ಸರ್ಕಾರ ಎಷ್ಟು ಬಾರಿ ಮಧ್ಯಪ್ರವೇಶಿಸಿತ್ತು ಎಂಬುದನ್ನು ಸಿದ್ದರಾಮಯ್ಯನವರೇ ತಿಳಿಸಬೇಕು. ಕಾಂಗ್ರೆಸ್‍ಗೆ ನಿಜಕ್ಕೂ ರಾಜ್ಯದ ಹಿತ ಕಾಪಾಡುವ ಮಹತ್ವಾಕಾಂಕ್ಷೆಯಿದ್ದರೆ ತಮಿಳುನಾಡು ಸರ್ಕಾರದ ಜೊತೆ ಮಾತನಾಡಿ ಕಾವೇರಿ ಸಮಸ್ಯೆಗೆ ಒಂದು ಪರಿಹಾರ ಕಂಡುಕೊಳ್ಳಬಹುದು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಹಿತಾಸಕ್ತಿಗಿಂತಲೂ ಹೆಚ್ಚಾಗಿ ತಮ್ಮ ಸ್ವಾರ್ಥದ I.N.D.I. ಮೈತ್ರಿಕೂಟದ ಹಿತಾಸಕ್ತಿ ಮುಖ್ಯವಾಗಿದೆ. ಹೀಗಾಗಿ ರಾಜ್ಯದ ಜನತೆ ಕಣ್ಣೀರು ಹಾಕಿದರೂ ಸರಿಯೇ, ಸ್ಟಾಲಿನ್ ಅವರು ಮಾತ್ರ ಸದಾ ಸಂತಸದಲ್ಲಿರಬೇಕೆಂಬ ಕಾರಣಕ್ಕೆ ಕಾವೇರಿ ನೀರನ್ನು ಮನಸ್ಸಿಗೆ ಬಂದಂತೆ ಸ್ಟಾಲಿನ್‌ ನಾಡಿಗೆ ಹರಿಬಿಡಲಾಗುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.