ಬೆಂಗಳೂರು: ಕೊಟ್ಟ ಕುದುರೆ ಏರಲರಿಯದೇ ಮತ್ತೊಂದು ಕುದುರೆ ಬಯಸುವವ ವೀರನೂ ಅಲ್ಲ, ಧೀರನೂ ಅಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಮೇಕೆದಾಟು ಯೋಜನೆ(Mekedatu project) ಜಾರಿಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

#ಅಸಹಾಯಕಡಿಕೆಶಿ ಹ್ಯಾಶ್ ಟ್ಯಾಗ್ ಬಳಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಡಿ.ಕೆ.ಶಿವಕುಮಾರ್(DK shivakumar) ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳದೆ ಇದ್ದರೆ ಹೇಗೆ? ಟೀಕೆ ಹಾಗೂ ಅಭಿಪ್ರಾಯಗಳೇ ಮನುಷ್ಯನ ವ್ಯಕ್ತಿತ್ವ ರೂಪಿಸುವುದು ಎಂಬುದನ್ನು ಕಾಂಗ್ರೆಸ್‌ ಅಧ್ಯಕ್ಷರು ಮೊದಲು ಅರ್ಥ ಮಾಡಿಕೊಳ್ಳಲಿ’ ಅಂತಾ ಕಾಲೆಳೆದಿದೆ.


Omicron In Karnataka: ಕರುನಾಡಲ್ಲಿ 'ಒಮಿಕ್ರಾನ್' ಅಟ್ಟಹಾಸ..! ಗಡಿಯಲ್ಲಿ ಹೈಅಲರ್ಟ್..!


Mekedatu Padayatra) ನಡೆಸಲು ಮುಂದಾಗಿರುವ ಕಾಂಗ್ರೆಸ್‌ ಮೊದಲು ಸತ್ಯ ಏನೆಂಬುದನ್ನು ತಿಳಿಸಲಿ. ಡಿಪಿಆರ್ ಸಿದ್ಧಪಡಿಸುವಲ್ಲಿ ಕಾಂಗ್ರೆಸ್ ಪಾತ್ರ ಏನೂ ಇರಲಿಲ್ಲವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ, ನಿಜವಲ್ಲವೇ? ಡಿಕೆಶಿಯವರೇ ನೀವು ಅಧಿಕಾರದಲ್ಲಿದ್ದಾಗ ಕೇವಲ ಪರ್ಸಂಟೇಜ್ ಯೋಜನೆಗಳಿಗೆ ಮಾತ್ರ ಆದ್ಯತೆ ನೀಡಿದ್ದೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


Corona Vaccine:ಮಕ್ಕಳ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ, ಟಫ್ ರೂಲ್ಸ್‌ ಜಾರಿ ಬಗ್ಗೆ ಸುಳಿವು ನೀಡಿದ ಬೊಮ್ಮಾಯಿ


Mekedatu Project)ಯ ಬಗ್ಗೆ ಚರ್ಚೆ ಮಾಡಲಿಲ್ಲ ಏಕೆ? ನಮ್ಮ ಸರ್ಕಾರ ಸಂಪೂರ್ಣ ಬದ್ಧತೆಯೊಂದಿಗೆ ಮೇಕೆದಾಟು ಯೋಜನೆ ಆರಂಭಿಸಲಿದೆ. ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷವು ಕೊರೊನಾ ಹಬ್ಬಿಸಲು ಪ್ರಯತ್ನಿಸುತ್ತಿದೆ’ ಅಂತಾ ಟೀಕಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.