ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ಟೀಕೆ

ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ? ಅಂತಾ ಬಿಜೆಪಿ ಪ್ರಶ್ನಿಸಿದೆ.

Written by - Zee Kannada News Desk | Last Updated : Oct 25, 2021, 11:58 AM IST
  • ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದ ಸಿದ್ದರಾಮಯ್ಯ ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ
  • ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ನಿಷ್ಣಾತರು
  • ಜಾತಿ ವಿಭಜಕ ಸಿದ್ದರಾಮಯ್ಯ ಎಂದು ಕಟುವಾಗಿ ಟೀಕಿಸಿದ ಕರ್ನಾಟಕ ಬಿಜೆಪಿ
ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ಟೀಕೆ title=
ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ(Siddaramaiah) ಅಂತಾ ಕರ್ನಾಟಕ ಬಿಜೆಪಿ ಟೀಕಿಸಿದೆ. ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, #ಜಾತಿವಿಭಜಕಸಿದ್ದರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದೆ.

ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಉಪಚುನಾವಣೆ(Sindagi By election)ಯ ಸಮಾವೇಶದ ವೇಳೆ ಮಾತನಾಡಿದ್ದ ಸಿದ್ದರಾಮಯ್ಯ, ‘ಸಮಾಜದ ಎಲ್ಲಾ ಜಾತಿ, ಸಮುದಾಯದ ಜನರನ್ನು ಒಟ್ಟಾಗಿ ಕರೆದೊಯ್ಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬಿಜೆಪಿ ಅವರ ಹಣ, ಬಣ್ಣದ ಮಾತುಗಳಿಗೆ ಮರುಳಾಗದೆ ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮನವಿ ಮಾಡುತ್ತೇನೆ’ ಅಂತಾ ಹೇಳಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಅಫ್ಘಾನಿಸ್ಥಾನಕ್ಕೆ ಕಳುಹಿಸಬೇಕು: ವಿ.ಶ್ರೀನಿವಾಸ್ ಪ್ರಸಾದ್ ಕಿಡಿಕಿಡಿ

ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ(Karnataka BJP) ತಿರುಗೇಟು ನೀಡಿದ್ದು, ‘ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ?’ ಅಂತಾ ಬಿಜೆಪಿ ಪ್ರಶ್ನಿಸಿದೆ.

‘ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ(Siddaramaiah) ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ?’ ಅಂತಾ ಬಿಜೆಪಿ ಪ್ರಶ್ನಿಸಿದೆ. ‘ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ’ ಅಂತಾ ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯಗೆ ಪಿಎಚ್‌ಡಿ ನೀಡಬಹುದು: ಬಿಜೆಪಿ ಟೀಕೆ

ಇನ್ನು ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್(By election) ಅಖಾಡ ರಂಗೇರಿದೆ. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಘಟಾನುಘಟಿ ನಾಯಕರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದಾರೆ. ಇದೇ ವೇಳೆ ಮೂರು ಪಕ್ಷದ ನಾಯಕರು ಪರಸ್ಪರ ವಾಕ್ಸಮರ ನಡೆಸುತ್ತಿದ್ದು, ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರವು ಸಿ.ಎಂ.ಉದಾಸಿ ನಿಧನದಿಂದ ತೆರವಾಗಿತ್ತು. ಎಂ.ಸಿ.ಮನಗೂಳಿ ಅವರ ನಿಧನದಿಂದ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ಅ.30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News