ಬೆಂಗಳೂರು: ವಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿವಾದಿತ ಮತಾಂತರ ನಿಷೇಧ ವಿಧೇಯಕ(Anti-Conversion Bill 2021)ವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸದನದಲ್ಲಿಯೇ ಮತಾಂತರ ನಿಷೇಧ ವಿಧೇಯಕದ ಪ್ರತಿಯನ್ನು ಹರಿದುಹಾಕಿದ್ದ ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿ.ಕೆ.ಶಿವಕುಮಾರ್(DK Shivakumar) ಅವರೇ ನೀವು ಸದನದಲ್ಲಿ #AntiConversionBill ಪ್ರತಿಯನ್ನು ಹರಿದು ಹಾಕಿದಿರಿ. ಏಕೆಂದರೆ ನಿಮಗಾಗಲಿ, ನಿಮ್ಮ ಅಧಿನಾಯಕ ರಾಹುಲ್ ಗಾಂಧಿಯವರಿಗಾಗಲಿ ಸಂಸದೀಯ ವ್ಯವಸ್ಥೆ ಹಾಗೂ ನಡಾವಳಿಯಲ್ಲಿ ನಂಬಿಕೆಯೇ ಇಲ್ಲ. ಎಷ್ಟಾದರೂ, ತುರ್ತು ಪರಿಸ್ಥಿತಿ ಹೇರಿದ ರಾಜಕೀಯ ಕುಟುಂಬದ ಹಿಂಬಾಲಕರಲ್ಲವೇ‌ ನೀವು’ ಅಂತಾ ಟೀಕಿಸಿದೆ.


Anti Conversion Bill 2021: ಭಾರೀ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ


‘ಕಾಂಗ್ರೆಸ್‌ ನಾಯಕರು ತಮಗೆ ಅನುಕೂಲಕರ ವಾತಾವರಣ ಇಲ್ಲವೆಂದಾದರೆ ವಿಧೇಯಕದ ಪ್ರತಿಯಷ್ಟೇ ಅಲ್ಲ, ಸದನದ ನಿಯಮಾವಳಿಗಳನ್ನೇ ಹರಿದು ಬಿಸಾಡಬಲ್ಲರು. ಏಕೆಂದರೆ ಡಿಕೆಶಿ ಅವರಂತವರಿಗೆ ಸದನ, ವ್ಯವಸ್ಥೆ, ನಿಯಮ ಇತ್ಯಾದಿಗಳ ಮೇಲೆ ಗೌರವವೇ ಇಲ್ಲ. ಹೇಗಾದರೂ ಮಾಡಿ ಸೋನಿಯಾ ಗಾಂಧಿಯ ಮೆಚ್ಚುಗೆ ಗಳಿಸಬೇಕೆಂಬುದಷ್ಟೇ ಅವರ ನಿಮ್ಮ ಧ್ಯೇಯ’ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ(BJP) ಕುಟುಕಿದೆ.


ಮೇಕೆದಾಟು ಯೋಜನೆಗೆ ಆಗ್ರಹ: ಜನವರಿ 9ರಿಂದ ಪಾದಯಾತ್ರೆ ಹಮ್ಮಿಕೊಂಡ ಕಾಂಗ್ರೆಸ್


Siddaramaiah) ಸೇದಿರಂತೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿದ್ದರು. ವಿಪಕ್ಷಗಳ ಗದ್ದಲದ ಮಧ್ಯೆಯೇ ವಿಧೇಯಕವನ್ನು ಮಂಡಿಸಲಾಗಿತ್ತು. ಏಕಾಏಕಿ ವಿಧೇಯಕ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಗಲಾಟೆ ಶುರು ಮಾಡಿದ್ದರು. ಇದು ಜನ ವಿರೋಧಿ ಮಸೂದೆ ಅಂತಾ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.