ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರು ಪ್ರಧಾನಿ ಮೋದಿ ಎದುರು ಗುಲಾಮರಂತೆ ವರ್ತಿಸುತ್ತಿದ್ದು, ಕೇಂದ್ರ ಸರ್ಕಾರದ ಯಾವುದೇ ಹಕ್ಕು ಕೇಳಲು ಧೈರ್ಯ ತೋರುತ್ತಿಲ್ಲವೆಂದು ಹೇಳಿದ್ದ ಕೆಪಿಸಿಸಿ ಕರ್ಯಾಧ್ಯಕ್ಷ ಈಶ್ವರ್ ಖಂಡ್ರೆ(Eshwar Khandre)ಗೆ ಬಿಜೆಪಿ ತಿರುಗೇಟು ನೀಡಿದೆ. #ಕುಟುಂಬಭಜಕರು ಹ್ಯಾಶ್ ಟ್ಯಾಗ್ ಬಳಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ನಡೆಸುವುದಕ್ಕೂ ಪೈಪೋಟಿ ಇದೆ ಖಂಡ್ರೆಯವರೇ, ಏಕೋ ನಿಮ್ಮ ವೇಗ ಕಡಿಮೆಯಾಯ್ತು! ಹೀಗಾಗಿ ಇನ್ನೂ ಕಾರ್ಯಾಧ್ಯಕ್ಷ ಸ್ಥಾನದಲ್ಲೇ ಇದ್ದೀರಿ. ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಅವರನ್ನು ನೋಡಿ ಕಲಿಯಿರಿ’ ಎಂದು ಬಿಜೆಪಿ ಟೀಕಿಸಿದೆ.


ಇದನ್ನೂ ಓದಿ: ‘ಓಮಿಕ್ರಾನ್’ ಆತಂಕ ಬೇಡ: ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲವೆಂದ ಸಿಎಂ ಬೊಮ್ಮಾಯಿ


Karnataka BJP) ಕುಟುಕಿದೆ.


ಇದನ್ನೂ ಓದಿ: ESI ಆಸ್ಪತ್ರೆ ಎಡವಟ್ಟು: ಫ್ರೀಜರ್‌ನಲ್ಲಿಯೇ ಕೊಳೆತ ಕೊರೊನಾ ಸೋಂಕಿತರ ಶವ, 16 ತಿಂಗಳ ಬಳಿಕ ಹೊರಕ್ಕೆ..!


ಕೇಂದ್ರ ಸರ್ಕಾರದ ಯಾವುದೇ ಯೋಜನೆ ಇದ್ದರೂ ರಾಜ್ಯಕ್ಕೆ ಕೊನೆಯ ಪಾಲು ನೀಡಲಾಗುತ್ತಿದೆ. ಕೇಂದ್ರ ರಾಜ್ಯಕ್ಕೆ ಇಷ್ಟೆಲ್ಲ ಅನ್ಯಾಯ ಮಾಡುತ್ತಿದ್ದರೂ ಸಂಸದರು ಕೇಳುತ್ತಿಲ್ಲ. ರಾಜ್ಯದ ಸಂಸದರಿಗೆ ಪ್ರಧಾನಿ ಮೋದಿ ಎದುರು ನಿಂತು ಮಾತನಾಡುವ ಧೈರ್ಯವಿಲ್ಲ. ನಮ್ಮ ಸಂಸದರು ಅಂಜುಬುರಕರಾಗಿದ್ದಕ್ಕೆ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗುತ್ತಿದೆ ಎಂದು ಈಶ್ವರ್ ಖಂಡ್ರೆ ಟೀಕಿಸಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.