ಕುಡಿಯುವ ನೀರಿನ ಸಮಸ್ಯೆ: ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು..!

ಈಗಾಗಲೇ ಕಲುಷಿತ ನೀರಿಗೆ ಸಾಕಷ್ಟು ಜೀವಗಳು ಬಲಿಯಾಗಿವೆ, ಹೀಗಿರುವಾಗಲೂ ಎಲ್ಲಾ ಇಲಾಖೆಯ ಒಳಗೂ ಮೂಗು ತೂರಿಸುವ ನೀವು ಜಿಲ್ಲಾ ಸಿಇಒಗಳಿಗೆ ಸೂಚನೆ ನೀಡಿ ಕೈ ತೊಳೆದುಕೊಂಡರೆ ಸಾಕೇ? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.

Written by - Puttaraj K Alur | Last Updated : Sep 5, 2023, 10:56 PM IST
  • ಕಾಂಗ್ರೆಸ್ ಸರ್ಕಾರ ತನ್ನ ಎಲ್ಲಾ ಸಚಿವಾಲಯಗಳ ಜವಾಬ್ದಾರಿಯನ್ನೂ ಪ್ರಿಯಾಂಕ್ ಖರ್ಗೆಗೆ ಗುತ್ತಿಗೆ ನೀಡಿದೆ
  • ತಮ್ಮ ಇಲಾಖೆಗಿಂತ ಬೇರೆ ಇಲಾಖೆ ಕಿಟಕಿಯಲ್ಲಿ ನೋಡುವುದೇ ಅವರಿಗೆ ಹೆಚ್ಚು ಆಪ್ಯಾಯಮಾನ ಕೆಲಸ
  • ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ
ಕುಡಿಯುವ ನೀರಿನ ಸಮಸ್ಯೆ: ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು..! title=
ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ತಿರುಗೇಟು!

ಬೆಂಗಳೂರು: 37 ತಾಲೂಕುಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿದ ಬಿಜೆಪಿ, ‘ಪ್ರಿಯಾಂಕ್ ಖರ್ಗೆಯವರೇ ಬರ ಪರಿಸ್ಥಿತಿಯ ಮಾಹಿತಿ ನಿಮಗಿದೆ ಎಂದು ತೋರಿಸಲು ಪ್ರಯತ್ನಿಸುತ್ತಿದ್ದೀರೋ ಅಥವಾ ನಿಮ್ಮದೇ ಪಕ್ಷ ಇದನ್ನು ನಿಭಾಯಿಸುವಲ್ಲಿ ಹೇಗೆ ಸೋತಿದೆ ಎಂದು ಪರೋಕ್ಷವಾಗಿ ತಿಳಿಸುತ್ತಿದ್ದೀರೋ?’ ಎಂದು ಪ್ರಶ್ನಿಸಿದೆ.

‘ಕುಡಿಯುವ ನೀರಿನ ಸಮಸ್ಯೆ 37 ತಾಲೂಕುಗಳಲ್ಲಿ ಮಾತ್ರ ಎದುರಾಗಿದೆ ಎಂಬ ಮೂಲಕ ನಿಮ್ಮ ನಿರೀಕ್ಷೆ ಇನ್ನಷ್ಟು ಜಾಸ್ತಿಯಿತ್ತು ಎಂಬುದನ್ನೂ ತಾವು ತೋರಿಸಿಕೊಟ್ಟಿದ್ದೀರಿ. ಈಗಾಗಲೇ ಕಲುಷಿತ ನೀರಿಗೆ ಸಾಕಷ್ಟು ಜೀವಗಳು ಬಲಿಯಾಗಿವೆ, ಹೀಗಿರುವಾಗಲೂ ಎಲ್ಲಾ ಇಲಾಖೆಯ ಒಳಗೂ ಮೂಗು ತೂರಿಸುವ ನೀವು ಜಿಲ್ಲಾ ಸಿಇಒಗಳಿಗೆ ಸೂಚನೆ ನೀಡಿ ಕೈ ತೊಳೆದುಕೊಂಡರೆ ಸಾಕೇ?’ ಎಂದು ಬಿಜೆಪಿ ಕುಟುಕಿದೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಎಲ್ಲಾ ಸಚಿವಾಲಯಗಳ ಜವಾಬ್ದಾರಿಯನ್ನೂ ಪ್ರಿಯಾಂಕ್ ಖರ್ಗೆಯವರಿಗೆ ಗುತ್ತಿಗೆ ನೀಡಿದ್ದಾರೆ. ತಮ್ಮ ಇಲಾಖೆಗಿಂತ ಬೇರೆ ಇಲಾಖೆಯ ಕಿಟಕಿಯಲ್ಲಿ ನೋಡುವುದೇ ಅವರಿಗೆ ಹೆಚ್ಚು ಆಪ್ಯಾಯಮಾನವಾದ ಕೆಲಸ ಎಂಬುದನ್ನು ರಾಜ್ಯದ ಜನ ಈ ಹಿಂದೆಯೂ ಕಂಡಿದ್ದಾರೆ. ನಿರಂತರ ನಿರ್ಲಕ್ಷ್ಯಕ್ಕೆ ಒಳಗಾದ ಡಾ.ಜಿ.ಪರಮೇಶ್ವರ್ ಅವರನ್ನೂ ಈ ಸರ್ಕಾರದಲ್ಲಿಯೂ ಸುಮ್ಮನೇ ಕೂರಿಸಿ ಆ ಜವಾಬ್ದಾರಿಗಳನ್ನೂ ಪ್ರಿಯಾಂಕ್‌ ಖರ್ಗೆಯವರಿಗೆ ನೀಡಲಾಗಿದ್ದು ಗೊತ್ತೇ ಇದೆ’ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: Dharwad: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು..!

‘ಈಗ ಕಂದಾಯ ಇಲಾಖೆಯ ಜವಾಬ್ದಾರಿಯನ್ನೂ ಖರ್ಗೆಯವರು ಸಂಪೂರ್ಣವಾಗಿ ವಹಿಸಿಕೊಂಡಿದ್ದಾರೆ. ಅಂಕಿ-ಅಂಶ ನೀಡಿದ ಮಾತ್ರಕ್ಕೆ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಅದನ್ನು ಪರಿಹರಿಸುವ ಜವಾಬ್ದಾರಿಯೇ ಇಲ್ಲದವರು ಮಾತನಾಡಿಯೂ ಪ್ರಯೋಜನವಿಲ್ಲ. ಒಂದೆಡೆ ತಾವೇ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ಅನುಷ್ಠಾನ ಮಾಡಲು ಹೆಣಗುತ್ತಿರುವ ಸಿಎಂ ಸಿದ್ದರಾಮಯ್ಯರ ಸರ್ಕಾರಕ್ಕೆ ಯಾವುದನ್ನೂ ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ನಿರಂತರ ನಡೆಯುತ್ತಿರುವ ರೈತರ ಆತ್ಮಹತ್ಯೆಯ ವಿಚಾರಗಳಿಗೆ ಪರಿಹಾರ ಮಾರ್ಗಗಳೇ ಕಾಣದಷ್ಟು ಕಾಂಗ್ರೆಸ್‌ ಆಡಳಿತ ಕುರುಡಾಗಿದೆ’ ಎಂದು ಬಿಜೆಪಿ ಕಿಡಿಕಾರಿದೆ.

ಪ್ರಿಯಾಂಕ್ ಖರ್ಗೆ ಸಾಹೇಬರು ತಮ್ಮ ಗಮನವನ್ನು ರಾಜ್ಯಾದ್ಯಾಂತ ಹರಿಸುವ ಮೊದಲು ಅವರದೇ ತವರು ಜಿಲ್ಲೆಯ ಸಮಸ್ಯೆಗಳ ಕಡೆಗೆ ಮೊದಲು ಗಮನ ಹರಿಸಬೇಕು. ಕಲಬುರ್ಗಿ ಮರಳು ಮಾಫಿಯಾ, ಪೊಲೀಸರ ಹತ್ಯೆ, ಪುಡಿ ರೌಡಿಗಳ ಗೂಂಡಾಗಿರಿ, ನಿಮ್ಮ ಬೆಂಬಲಿಗರಿಂದ ನಡೆಯುತ್ತಿರುವ ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣಗಳ ಬಗ್ಗೆ ಒಂದಷ್ಟು ಅಂಕಿ-ಅಂಶಗಳನ್ನಾದರೂ ತರಿಸಿ ನೋಡುವುದು ಒಳಿತು. ನಿಮ್ಮ ಇಲಾಖೆ ಮತ್ತು ಕ್ಷೇತ್ರದ ಜನತೆ ನೀಡಿದ ಜವಾಬ್ದಾರಿಯನ್ನಾದರೂ ಸರಿಯಾಗಿ ನಿರ್ವಹಿಸಿ ಅದಕ್ಕೆ ನ್ಯಾಯ ಒದಗಿಸಿ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಗಾಂಧಿಜಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಕಲ್ಬುರ್ಗಿಯವರನ್ನೂ ಕೊಂದಿದೆ: ಸಿಎಂ ಸಿದ್ದರಾಮಯ್ಯ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News