ರಾಜ್ಯದಲ್ಲಿನ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ನೇರ ಹೊಣೆ: ಬಿಜೆಪಿ ಆರೋಪ

ಮೂಲಭೂತವಾದಿಗಳಿಗೆ ಸಂವಿಧಾನದ ಗುರಾಣಿ ಕೊಡುವ ಸಿದ್ದರಾಮಯ್ಯ ಅವರಿಗೆ ಸಂವಿಧಾನದ 25ನೇ ವಿಧಿಯ 2(ಎ), 2(ಬಿ) ಏನು ಹೇಳುತ್ತದೆ ಎಂಬುದು ತಿಳಿಯದಾದುದು ವಿಪರ್ಯಾಸ ಅಂತಾ ಬಿಜೆಪಿ ವ್ಯಂಗ್ಯವಾಡಿದೆ.

Written by - Zee Kannada News Desk | Last Updated : Feb 8, 2022, 01:43 PM IST
  • ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು
  • ಶಾಂತಿಭಂಗ, ಸಾರ್ವಭೌಮತೆಗೆ ಧಕ್ಕೆಯಾದಾಗ ಸರ್ಕಾರಕ್ಕೆ ಧಾರ್ಮಿಕ ಹಕ್ಕನ್ನು ನಿರ್ಬಂಧಿಸುವ ಅಧಿಕಾರವೂ ಇದೆ
  • ಕಾಂಗ್ರೆಸ್ ಪಕ್ಷದ ಕರಾವಳಿ ನಾಯಕರು ಹಿಜಾಬ್‌ಗಿಂತ ನಮಗೆ ರಾಜಕೀಯ ಭವಿಷ್ಯ ಮುಖ್ಯ ಎನ್ನುತ್ತಾರೆ
ರಾಜ್ಯದಲ್ಲಿನ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ನೇರ ಹೊಣೆ: ಬಿಜೆಪಿ ಆರೋಪ title=
ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರೇ ನೇರ ಹೊಣೆಗಾರರು ಅಂತಾ ಬಿಜೆಪಿ ಆರೋಪಿಸಿದೆ. #YesToUniform_NoToHijab ಹ್ಯಾಶ್ ಟ್ಯಾಗ್ ಬಳಿಸಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದೆ.

‘1983ರ ಶಿಕ್ಷಣ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಮವಸ್ತ್ರ(Uniform) ಕಡ್ಡಾಯಗೊಳಿಸಲಾಗಿದೆ. ಆದರೆ ಸಿದ್ದರಾಮಯ್ಯನವರು ಹಿಜಾಬ್‌ ಒಳಗಿರುವ ಮತ ಪಡೆಯಲು ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎನ್ನುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರ(Hijab Row)ಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು’ ಅಂತಾ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕಾಲೇಜು ಆವರಣದಲ್ಲಿ ಹಿಜಾಬು ಮತ್ತು ಕೇಸರಿ ಶಾಲು ಧಾರಿಗಳು ಎದುರು ಬದುರಾದಾಗ...!

‘ಮೂಲಭೂತವಾದಿಗಳಿಗೆ ಸಂವಿಧಾನದ ಗುರಾಣಿ ಕೊಡುವ ಸಿದ್ದರಾಮಯ್ಯ ಅವರಿಗೆ ಸಂವಿಧಾನದ 25ನೇ ವಿಧಿಯ 2(ಎ), 2(ಬಿ) ಏನು ಹೇಳುತ್ತದೆ ಎಂಬುದು ತಿಳಿಯದಾದುದು ವಿಪರ್ಯಾಸ. ಶಾಂತಿಭಂಗ, ಸಾರ್ವಭೌಮತೆಗೆ ಧಕ್ಕೆಯಾದಾಗ ಸರ್ಕಾರಕ್ಕೆ ಧಾರ್ಮಿಕ ಹಕ್ಕನ್ನು ನಿರ್ಬಂಧಿಸುವ ಅಧಿಕಾರವೂ ಇದೆ. ಈಗ ನಡೆಯುತ್ತಿರುವುದು ಶಾಂತಿಭಂಗದ ಯತ್ನ’ ಅಂತಾ ಬಿಜೆಪಿ(BJP) ಟ್ವೀಟ್ ಮಾಡಿದೆ.

‘ಆರಂಭದಲ್ಲಿ ಕೇವಲ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ(Karnataka Hijab Row) ಶಾಲೆಗೆ ಬಂದು, ಸಮವಸ್ತ್ರ ನಿಯಮ ಉಲ್ಲಂಘಿಸಿದರು. ಇವರಿಗೆ ಪ್ರಚೋದನೆ ನೀಡಿದ ಪರಿಣಾಮ, ಈಗ ಇಡೀ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿವಾದ ಹಬ್ಬಿದೆ. ಸಿದ್ದರಾಮಯ್ಯ ಅವರ ಹಿಜಾಬ್ ಮೂಲಭೂತ ಹಕ್ಕು ಎಂಬ ಪ್ರಚೋದನೆಯೇ ಇದಕ್ಕೆ ನೇರ ಕಾರಣ’ ಅಂತಾ ಹೇಳಿದೆ.

ಇದನ್ನೂ ಓದಿ: Bengaluru police : ಮನೆ ಮಾರಲು ಅಡ್ಡಿಯಾದ ಮರಕ್ಕೆ ವಿಷ ಹಾಕಿದ ಮನೆ ಮಾಲೀಕ!

ಕಾಂಗ್ರೆಸ್ ಪಕ್ಷದ ಕರಾವಳಿ ನಾಯಕರು ಹಿಜಾಬ್‌ಗಿಂತ ನಮಗೆ ರಾಜಕೀಯ ಭವಿಷ್ಯ ಮುಖ್ಯ ಎನ್ನುತ್ತಾರೆ. ಆದರೆ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರು, ರಾಹುಲ್ ಗಾಂಧಿ(Rahul Gandhi) ಸೇರಿ ರಾಷ್ಟ್ರ ನಾಯಕರು ಹಿಜಾಬ್ ಪರ ವಕಾಲತ್ತು ವಹಿಸುತ್ತಾರೆ. ಕಾಂಗ್ರೆಸ್ಸಿಗರೇ, ಇಂತಹ ದಾರಿ ತಪ್ಪಿಸುವ ಪ್ರಯತ್ನವೇಕೆ?’ ಅಂತಾ ಬಿಜೆಪಿ ಪ್ರಶ್ನಿಸಿದೆ.

‘ವಿದ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಲವಂತವಾಗಿ ಹೇರುವ ಮೂಲಭೂತವಾದಿಗಳ ಹತಾಶೆಯ ಹಳಹಳಿಕೆ ಹಿಜಾಬ್ ವಿವಾದ(Hijab Row)ದ ಹಿಂದೆ ಇದೆ. ರಾಹುಲ್ ಗಾಂಧಿಯಂತಹ ವಿಫಲ ನಾಯಕರು ಕೂಡಾ ಇದನ್ನು ಬೆಂಬಲಿಸುತ್ತಾರೆ ಎಂದರೆ ಇದು ಕಾಂಗ್ರೆಸ್ ಪ್ರಾಯೋಜಿತ ನಾಟಕ ಎಂಬುದರಲ್ಲಿ ಅನುಮಾನವಿದೆಯೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News