ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಹಿನ್ನಲೆ ಅಭಿಮಾನಿಗಳು ಆಯೋಜಿಸಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಕಾಂಗ್ರೆಸ್ ನಾಯಕರ ಬೌದ್ಧಿಕ ದಾರಿದ್ರ್ಯಕ್ಕೆ ಶೇಮ್ ಶೇಮ್ ಎಂದು ಬಿಜೆಪಿ ಗುರುವಾರ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

‘ಸಂಸದ ಡಿ.ಕೆ.ಸುರೇಶ್ ಅವರು ಸಿದ್ದರಾಮೋತ್ಸವ ಯಾರಿಗೋ ನಾಯಕತ್ವ ನೀಡಿದಂತೆ ಬಿಂಬಿತವಾಗಬಾರದು ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಿದ್ದರಾಮೋತ್ಸವ ಕಾಂಗ್ರೆಸ್‌ ನಿರ್ನಾಮಕ್ಕೆ ಮುನ್ನುಡಿ ಬರೆಯಲಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಅಹಿಂದ ಸಮಾವೇಶಕ್ಕೆ ಹೊರಟಿದ್ದರು. ಎಷ್ಟೇ ನಿರ್ಬಂಧ ವಿಧಿಸಿದ್ದರೂ ಲಕ್ಷ್ಮಣ ರೇಖೆ ದಾಟಿ ಹೊರ ಬಂದರು. ಈಗ ಕಾಂಗ್ರೆಸ್ ಲಕ್ಷ್ಮಣ ರೇಖೆ ದಾಟಲು ಸಿದ್ದರಾಮೋತ್ಸವ ಆಯೋಜಿಸುತ್ತಿದೆಯೇ? ಕಾಂಗ್ರೆಸ್ ಮುಕ್ತ ಕರ್ನಾಟಕದತ್ತ ಸಿದ್ದರಾಮಯ್ಯ ಹೆಜ್ಜೆ ಇಟ್ಟಿದ್ದಾರೆಯೇ?’ ಎಂದು ಪ್ರಶ್ನಿಸಿದೆ.


PSI Recruitment Scam: 'ಬೇರೆ ಪರೀಕ್ಷಾ ಕೇಂದ್ರಗಳಲ್ಲಿಯೂ ತನಿಖೆ ನಡೆಸಬೇಕು'


‘ಕಾಂಗ್ರೆಸ್ ನಾಯಕರ ಬೌದ್ಧಿಕ ದಾರಿದ್ರ್ಯಕ್ಕೆ ಶೇಮ್ ಶೇಮ್! ದೇಶದ ಸ್ವಾತಂತ್ರ್ಯಕ್ಕಾಗಲಿ, ಯಾವುದೇ ಜನಪರ ಹೋರಾಟದಲ್ಲಾಗಲಿ ಭಾಗಿಯಾಗದ ಶುದ್ಧ ಅಧಿಕಾರದಾಹಿಯ ಜನ್ಮದಿನವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಜೊತೆಗೆ ಸಮೀಕರಿಸಲು ಹೊರಟವರಿಗೆ ಸ್ವಾತಂತ್ರ್ಯದ ಬೆಲೆ ಗೊತ್ತೇ?’ಎಂದು ಬಿಜೆಪಿ ಕುಟುಕಿದೆ.


ಬಿಎಂಟಿಸಿ ಬಳಿಕ ಈಗ ಕೆಎಸ್ಆರ್ ಟಿಸಿಗೂ ಬರಲಿವೆ ಎಲೆಕ್ಟ್ರಿಕ್ ಬಸ್..!


ಸಿದ್ದರಾಮಯ್ಯರ ನಿಷ್ಠೆ & ನೆಂಟಸ್ಥನ ಏನಿದ್ದರೂ ಜಮೀರ್ ಅಹ್ಮದ್ ಖಾನ್ ಬಾಂಧವರ ಜೊತೆ ಮಾತ್ರ!!!’ವೆಂದು ಬಿಜೆಪಿ ಟೀಕಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.