ಬೆಂಗಳೂರು: ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಸಂಸದ ಡಿ.ಕೆ.ಸುರೇಶ್ ಗರಂ ಆಗಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.


COMMERCIAL BREAK
SCROLL TO CONTINUE READING

ಮಂಗಳವಾರ ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ರಾಜ್ಯದ ಮಹಾಜನತೆಗೆ ‘ಗ್ಯಾರಂಟಿಗಳ’ ಹೆಸರಿನಲ್ಲಿ ವಂಚಿಸಿ ಇದೀಗ ಪರಸ್ಪರ ಗುದ್ದಾಟ ನಡೆಸುತ್ತಿದೆ! ನಿನ್ನೆ ಮುಖ್ಯಮಂತ್ರಿಗಳ ಬಣದಿಂದ ಸಚಿವರಾದ ಎಂ.ಬಿ.ಪಾಟೀಲ್ ಎಚ್ಚರಿಕೆ ರವಾನಿಸಿದ್ದರು! ಅದಕ್ಕೆ ಪ್ರತ್ಯುತ್ತರವಾಗಿ ಇಂದು ಉಪಮುಖ್ಯಮಂತ್ರಿಗಳ ಬಣದಿಂದ ಸಂಸದ ಡಿ.ಕೆ.ಸುರೇಶ್ ನೇರ ಬಾಣ ತಿರುಗಿಸಿದ್ದಾರೆ. ಮನೆಯೊಂದು, ಮೂರು ಬಣ, ಮೂವತ್ತು ಬಾಗಿಲಿನ ಈ #ATMSarkaraದ ವಿರುದ್ಧ ಕರ್ನಾಟಕದ ಮಹಾಜನತೆ ಹಿಡಿಶಾಪ ಹಾಕಲಾರಂಭಿಸಿದ್ದಾರೆ!’ ಎಂದು ಕುಟುಕಿದೆ.


ಸೈಟ್‍ನ ಹಣ ಹಿಂದಿರುಗಿಸಲು ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ಸ್ ಗೆ ಗ್ರಾಹಕರ ಆಯೋಗದ ಆದೇಶ


#SidduVsDKSVsCong ಹ್ಯಾಶ್‍ಟ್ಯಾಗ್ ಬಳಸಿ ಮತ್ತೊಂದು ಟ್ವೀಟ್ ಮಾಡಿರುವ ಬಿಜೆಪಿ, ‘ಸಿಎಂ ಆಯ್ಕೆಯ ಕಸರತ್ತು ಮುಗಿದ ಬೆನ್ನಲ್ಲೇ, ಸಿಎಂ ವ್ಯಾಲಿಡಿಟಿಯ ಬಗ್ಗೆ ಚರ್ಚೆ ಹುಟ್ಟಿತು. ಈಗ ಸಚಿವ ಸಂಪುಟ ವಿಸ್ತರಣೆಯ ಜಟಾಪಟಿ 2 ಬಣಗಳ ನಡುವೆ ತೀವ್ರವಾಗಿದೆ. ಆದರೆ #ATMSarkaraಕ್ಕಾಗಲಿ, ಸಿದ್ಧರಾಮಯ್ಯನವರಿಗಾಗಲಿ, ಡಿ.ಕೆ.ಶಿವಕುಮಾರರಿಗಾಗಲಿ ನಾಡ ಜನರಿಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸಲು ಯಾವುದೇ ಆಸಕ್ತಿಯೂ ಇಲ್ಲ, ಉತ್ಸಾಹವೂ ತೋರಿಸುತ್ತಿಲ್ಲ’ ಎಂದು ಟೀಕಿಸಿದೆ.


ಬಿಜೆಪಿ ಟೀಕಿಸಿದೆ.


ಕೆಎಸ್ಆರ್ಟಿಸಿಯ ಡ್ರೈವರ್ ಪುತ್ರನಿಗೆ ಯುಪಿಎಸ್ ಸಿ ಪರೀಕ್ಷೆಯಲ್ಲಿ 589 ರ್ಯಾಂಕ್..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.