ಸಿದ್ದರಾಮಯ್ಯ, ಬಿಎಸ್‌ವೈ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಹೆಚ್‌ಡಿಕೆ

ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸಲು 1600 ಕೋಟಿ ರೂ. ಯೋಜನೆಯನ್ನು ಘೋಷಣೆ ಮಾಡಿದ ಸಿಎಂ ಕುಮಾರಸ್ವಾಮಿ.

Last Updated : Feb 8, 2019, 02:42 PM IST
ಸಿದ್ದರಾಮಯ್ಯ, ಬಿಎಸ್‌ವೈ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಹೆಚ್‌ಡಿಕೆ title=

ಬೆಂಗಳೂರು: ವಿರೋಧ ಪಕ್ಷದ ಗಲಾಟೆ, ಗದ್ದಲದ ನಡುವೆ 2019-20ನೇ ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪನವರ ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

2019-20ನೇ ಸಾಲಿನ ಬಜೆಟ್ ಮಂಡನೆಯಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸಲು 1600 ಕೋಟಿ ಯೋಜನೆಯನ್ನು ಘೋಷಣೆ ಮಾಡಿದರು. ನೀರಾವರಿ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಘೋಷಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಪ್ರತಿನಿಧಿಸುತ್ತಿರುವ ಬಾದಾಮಿ ವಿಧಾನಸಭಾ ಕ್ಷೇತ್ರದ ನೀರಾವರಿ ಯೋಜನೆಗಳಿಗೆ 300 ಕೋಟಿ ರೂ. ಅನುದಾನ ನೀಡಲಾಗಿದ್ದು, ಯಡಿಯೂರಪ್ಪನವರು ಪ್ರತಿನಿಧಿಸುತ್ತಿರುವ ಶಿಕಾರಿಪುರ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು 200 ಕೋಟಿ ರೂಪಾಯಿಗಳನ್ನು ಘೋಷಿಸಿದ್ದಾರೆ. 
 

Trending News