Delhi Chalo: ಕರ್ನಾಟಕ ಕಾಂಗ್ರೆಸ್ 'ಚಲೋ ದಿಲ್ಲಿ'.. ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾದ ಕೈ ನಾಯಕರು

Karnataka Congress Protest in Delhi : ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ. 

Written by - Chetana Devarmani | Last Updated : Feb 7, 2024, 08:13 AM IST
  • ಕರ್ನಾಟಕ ಕಾಂಗ್ರೆಸ್ 'ಚಲೋ ದಿಲ್ಲಿ'
  • ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ
  • ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Delhi Chalo: ಕರ್ನಾಟಕ ಕಾಂಗ್ರೆಸ್ 'ಚಲೋ ದಿಲ್ಲಿ'.. ಕೇಂದ್ರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾದ ಕೈ ನಾಯಕರು title=
Karnataka Congress Protest

ಬೆಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ. ತೆರಿಗೆ ಹಂಚಿಕೆ ಮತ್ತು ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. 

ಲೋಕಸಭೆ ಚುನಾವಣೆಗೂ ಮುನ್ನ ಸಚಿವರು ಸೇರಿದಂತೆ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ಪ್ರಾರಂಭಿಸಲಿದ್ದಾರೆ. 15ನೇ ಹಣಕಾಸು ಆಯೋಗದ ಅಡಿಯಲ್ಲಿ ಐದು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಆಗಿರುವ 1.87 ಲಕ್ಷ ಕೋಟಿ ರೂ.ಗಳ ನಷ್ಟವನ್ನು ಕೇಂದ್ರ ಸರ್ಕಾರ ಸರಿ ಪಡಿಸಬೇಕೆಂದು ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಿದ್ದಾರೆ. 

ಇದನ್ನೂ ಓದಿ: 22 ಜನರಿಗೆ ಸೈಟ್ ಕೊಡದ ಆಶೀರ್ವಾದ ಡೆವಲ್ಪಪರ್ಸಗೆ ದಂಡ ವಿಧಿಸಿ ಪರಿಹಾರ ನೀಡಲು ಆದೇಶ 

ಸಿಪಿಐ (ಎಂ) ಹಿರಿಯ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಫೆಬ್ರವರಿ 8 ರಂದು ದಕ್ಷಿಣ ರಾಜ್ಯದ ಬಗ್ಗೆ ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಕೋಲ್ಕತ್ತಾದಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದ ಬಾಕಿಗಳನ್ನು ತಡೆಹಿಡಿದಿರುವ ಕಾರಣ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಲಿದ್ದಾರೆ.

ರಾಜ್ಯದ ಕಾಳಜಿಯತ್ತ ಕೇಂದ್ರ ಸರ್ಕಾರ ಮತ್ತು ದೇಶದ ಜನರ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಲ್ಲಿಯವರೆಗೆ ರಾಜ್ಯವು ದೆಹಲಿಯಲ್ಲಿ ಪ್ರತಿಭಟನೆ ನಡೆಸಿರಲಿಲ್ಲ, ಆದರೆ 'ಅನಿವಾರ್ಯ ಕಾರಣಗಳಿಂದ' ಈಗ ಹಾಗೆ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ; ಕೈಜೋಡಿಸಿ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ  

ಪ್ರತಿಪಕ್ಷ ಬಿಜೆಪಿ ಶಾಸಕರು, ವಿಶೇಷವಾಗಿ ರಾಜ್ಯದ ಸಂಸದರು ಕರ್ನಾಟಕದ ಹಿತದೃಷ್ಟಿಯಿಂದ ಪ್ರತಿಭಟನೆಯಲ್ಲಿ ಭಾಗಿಯಾಗಬೇಕೆಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಹೋರಾಟವು ರಾಜ್ಯಕ್ಕೆ ಆಗಿರುವ 'ಅನ್ಯಾಯ'ದ ವಿರುದ್ಧವಾಗಿದೆಯೇ ಹೊರತು ಕೇಸರಿ ಪಕ್ಷದ ವಿರುದ್ಧ ಅಲ್ಲ ಎಂದಿದ್ದಾರೆ

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಸೇರಿದಂತೆ ಕರ್ನಾಟಕದ ಎಲ್ಲ ಸಂಸದರಿಗೆ ಪತ್ರ ಬರೆದಿದ್ದಾರೆ. ನಿರ್ಮಲಾ ಸೀತಾರಾಮನ್ (ರಾಜ್ಯಸಭಾ ಸದಸ್ಯೆ) ಮತ್ತು ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯದ ಕೇಂದ್ರ ಸಚಿವರಿಗೂ ಆಹ್ವಾನ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News