ರಾಜ್ಯಪಾಲರ ಕಚೇರಿಯನ್ನೇ ಯಮಾರಿಸುವಷ್ಟು BJPಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ!: ಕಾಂಗ್ರೆಸ್

N Chaluvaraya Swamy bribery case: ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್.ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

Written by - Puttaraj K Alur | Last Updated : Aug 8, 2023, 05:44 PM IST
  • ಲಂಚದ ಆರೋಪದಡಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಪ್ರಕರಣ
  • ರಾಜ್ಯಪಾಲರ ಕಚೇರಿಯನ್ನೇ ಯಮಾರಿಸುವಷ್ಟು ಬಿಜೆಪಿಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ!
  • ನಕಲಿ ಪತ್ರದ ಬಗ್ಗೆ ಪ್ರತಾಪ ತೋರಿಸುವ ಪೆನ್‍ಡ್ರೈವ್ ಶೂರರು ಆಗ ಅಸಲಿ ಪತ್ರದ ಬಗ್ಗೆ ತುಟಿ ಬಿಚ್ಚಲಿಲ್ಲ ಏಕೆ?
ರಾಜ್ಯಪಾಲರ ಕಚೇರಿಯನ್ನೇ ಯಮಾರಿಸುವಷ್ಟು BJPಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ!: ಕಾಂಗ್ರೆಸ್ title=
ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು!

ಬೆಂಗಳೂರು: ಲಂಚದ ಆರೋಪದಡಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರದ ಕುರಿತು ಸಿಐಡಿ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ.

ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಮಂಗಳವಾರ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ‘ರಾಜ್ಯಪಾಲರ ಕಚೇರಿಯನ್ನೇ ಯಮಾರಿಸುವಷ್ಟು ಬಿಜೆಪಿಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ! ಈ ಹಿಂದೆ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಬರೆದ ಅಸಲಿ ಪತ್ರದ ಬಗ್ಗೆ ಚಕಾರ ಎತ್ತದ ಬಿಜೆಪಿ ಆತನ ಸಾವಿಗೆ ಕಾರಣವಾಗಿತ್ತು. ನಕಲಿ ಪತ್ರದ ಬಗ್ಗೆ ಪ್ರತಾಪ ತೋರಿಸುವ ಪೆನ್‍ಡ್ರೈವ್ ಶೂರರು ಆಗ ಅಸಲಿ ಪತ್ರದ ಬಗ್ಗೆ ತುಟಿ ಬಿಚ್ಚಲಿಲ್ಲ ಏಕೆ?’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ವೈಮಾನಿಕ ತರಬೇತಿ ಶಾಲೆಯ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿ: ಅಧಿಕಾರಿಗಳಿಗೆ ಸಚಿವ ಬಿ.ನಾಗೇಂದ್ರ ಸೂಚನೆ

‘ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್.ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ. ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ ಅಧಿಕಾರಿಗಳಿಗಿಲ್ಲವೆಂದು ಖಚಿತಪಡಿಸಿದ್ದಾರೆ, ಈ ನಕಲಿ ಪತ್ರಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿದೆ. ಇದರ ಹಿಂದಿರುವುದು ಬಿಜೆಪಿ ಫೇಕ್ ಫ್ಯಾಕ್ಟರಿಯೋ ಅಥವಾ ಪೆನ್‍ಡ್ರೈವ್ ಶೂರರೋ ಎಂಬುದನ್ನು ಬಯಲಿಗಿಡುತ್ತೇವೆ’ ಎಂದು ಕಾಂಗ್ರೆಸ್ ಎಚ್ಚರಿಸಿದೆ.

‘ಬಿಜೆಪಿ ಅಧಿಕಾರಾವಧಿಯಲ್ಲಿ ಕೃಷಿ ಸಚಿವರಾಗಿದ್ದ ಬಿ.ಸಿ.ಪಾಟೀಲ್ ಅವರ ವಿರುದ್ಧ ಹಾಫ್ತಾ ವಸೂಲಿಯ ಬಗ್ಗೆ ಅಧಿಕಾರಿಗಳು, ನೌಕರರೇ ಅಸಲಿ ಪತ್ರ ಬರೆದಿದ್ದರು. ನಕಲಿ ಪತ್ರ ಹಿಡಿದು ಜಗ್ಗಾಡುತ್ತಿರುವ ಬಿಜೆಪಿ ತಮ್ಮ ಸಚಿವರ ವಿರುದ್ಧದ ಆರೋಪಗಳಿಗೆ ಕೈಗೊಂಡಿದ್ದ ಕ್ರಮಗಳೇನು? ಆ ಪತ್ರ ಕಸದ ಬುಟ್ಟಿಗೆ ಸೇರಿದ್ದೇಕೆ? ಬಿಜೆಪಿ ಹಾಗೂ ಬಿಜೆಪಿಯ ಬ್ರದರ್ ಉತ್ತರಿಸುವರೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಅಧಿಕಾರಿಗಳ ಬಳಿ 6-8 ಲಕ್ಷ ಕಮಿಷನ್ ಆರೋಪ-ಕೃಷಿ ಸಚಿವ ಚಲುವರಾಯಸ್ವಾಮಿ ವಜಾಗೆ ಆಗ್ರಹ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News