ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ: ಕಾಂಗ್ರೆಸ್

BJP vs Congress: ಬಿಜೆಪಿಯೊಳಗಿನ ಆಂತರಿಕ ಕಲಹ ಇನ್ನೂ ಮುಗಿಲಿಲ್ಲ, ಬಿಜೆಪಿಯಲ್ಲಿ ಲಿಂಗಾಯತರಿಗೆ ಉಸಿರು ಕಟ್ಟಿಸಲಾಗುತ್ತಿದೆ ಎಂಬುದಕ್ಕೆ ಸೋಮಣ್ಣನವರ ಹೇಳಿಕೆಯೇ ಸಾಕ್ಷಿ. ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ ಎಂದು ಕಾಂಗ್ರೆಸ್ ಕುಟುಕಿದೆ.

Written by - Puttaraj K Alur | Last Updated : Oct 9, 2023, 01:37 PM IST
  • ಬಿಜೆಪಿಗೆ ಬರುವವರೆಗೂ ನಾನು ಸೋತಿರಲಿಲ್ಲ, ಬಿಜೆಪಿಗೆ ಬಂದಮೇಲೆ ಸೋತಿದ್ದೇನೆ
  • ನಮ್ಮವರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ
  • ಬಿಜೆಪಿಯಲ್ಲಿ ಲಿಂಗಾಯತರಿಗೆ ಉಸಿರು ಕಟ್ಟಿಸಲಾಗುತ್ತಿದೆ ಎಂಬುದಕ್ಕೆ ಸೋಮಣ್ಣನವರ ಹೇಳಿಕೆಯೇ ಸಾಕ್ಷಿ
ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ: ಕಾಂಗ್ರೆಸ್ title=
'ಬಿಜೆಪಿಗೆ ಬಂದಮೇಲೆ ಸೋತಿದ್ದೇನೆ'

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಯಲ್ಲಿ ಮತ್ತೆ ಅಸಮಾಧನದ ಕಿಚ್ಚು ಹೆಚ್ಚಾಗಿದೆ. 22 ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡ ಮಾಜಿ ಸಚಿವ ವಿ.ಸೋಮಣ್ಣ ಮತ್ತೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ವಿ.ಸೋಮಣ್ಣ, ‘ಬಿಜೆಪಿಗೆ ಬರುವವರೆಗೆ ನಾನು ಸೋತೇ ಇರಲಿಲ್ಲ, ಬಿಜೆಪಿಗೆ ಬಂದ ಬಳಿಕವೇ 4 ಬಾರಿ ಸೋತೆ. ನಾನು ಏನೋ ಆಗಿಬಿಡುತ್ತೇನೆಂಬ ಭಯದಿಂದ ನನ್ನನ್ನು ಸೋಲಿಸಲಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧಿಸಿ ಗೆದ್ದಿದ್ದೆ. ಸ್ವತಂತ್ರ ಅಭ್ಯರ್ಥಿಯಾಗಿಯೂ 2 ಬಾರಿ ಗೆದ್ದಿದ್ದೆ. ಆದರೆ ಬಿಜೆಪಿಯಲ್ಲಿ ನಾನು ಹೀನಾಯವಾಗಿ ಸೋಲು ಕಾಣುವಂತಾಯಿತು ಎಂದು ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜನರಿಗೆ ಪೌಷ್ಠಿಕ ಆಹಾರ ತಲುಪಿಸಲು ಸರ್ಕಾರ ನೆರವು

ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕೆ

ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆ ವಿಚಾರವಾಗಿ ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ‘ಬಿಜೆಪಿಗೆ ಬರುವವರೆಗೂ ನಾನು ಸೋತಿರಲಿಲ್ಲ, ಬಿಜೆಪಿಗೆ ಬಂದಮೇಲೆ ಸೋತಿದ್ದೇನೆ, ನಮ್ಮವರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬಿಜೆಪಿಯೊಳಗಿನ ಆಂತರಿಕ ಕಲಹ ಇನ್ನೂ ಮುಗಿಲಿಲ್ಲ, ಬಿಜೆಪಿಯಲ್ಲಿ ಲಿಂಗಾಯತರಿಗೆ ಉಸಿರು ಕಟ್ಟಿಸಲಾಗುತ್ತಿದೆ ಎಂಬುದಕ್ಕೆ ಸೋಮಣ್ಣನವರ ಹೇಳಿಕೆಯೇ ಸಾಕ್ಷಿ. ಸಂತೋಷ ಕೂಟದ ದಾಳಕ್ಕೆ ಲಿಂಗಾಯತ ನಾಯಕರು ಅಬ್ಬೇಪಾರಿಗಳಂತಾಗಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.

ಇದನ್ನೂ ಓದಿ: ಕಾವೇರಿ ಕಿಚ್ಚು: ಚಾಮರಾಜನಗರದಲ್ಲಿ ಪೊರಕೆ ಚಳವಳಿ ನಡೆಸಿ ಆಕ್ರೋಶ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News