ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ!: ಕಾಂಗ್ರೆಸ್ ಆರೋಪ

ತಮ್ಮ ಕಾರ್ಯಕರ್ತರಿಂದಲೇ ಛೀಮಾರಿ ಹಾಕಿಕೊಂಡ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ವಪಕ್ಷದವರ ಬೆನ್ನಿಗೆ ಚೂರಿ ಹಾಕಿದ ಮಾಜಿ ಸಚಿವ ಆರ್.ಅಶೋಕ್ ಅವರನ್ನು ಅವರ ಪಕ್ಷದ ನಾಯಕರು, ಕಾರ್ಯಕರ್ತರೇ ಒಪ್ಪುತ್ತಿಲ್ಲ, ಇನ್ನು ಜನತೆ ಒಪ್ಪುವರೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : Nov 18, 2023, 08:51 PM IST
  • ಯಡಿಯೂರಪ್ಪರನ್ನು ಬಿಜೆಪಿ ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು
  • ಬಿ.ವೈ.ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ "ಹರಕೆಯ ಕುರಿ" ಅಷ್ಟೇ!
  • ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ! ಎಂದು ಕಾಂಗ್ರೆಸ್ ಆರೋಪ
ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ!: ಕಾಂಗ್ರೆಸ್ ಆರೋಪ title=
ಬಿ.ವೈ.ವಿಜಯೇಂದ್ರ "ಹರಕೆಯ ಕುರಿ" ಅಷ್ಟೇ!

ಬೆಂಗಳೂರು: ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ! ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು. ಜಗದೀಶ್ ಶೆಟ್ಟರ್ ಅವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು. ವಿ.ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು’ ಎಂದು ಕುಟುಕಿದೆ.

ಮುಂದುವರಿದು ‘ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು. ಈಗ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ. ಇದೇ ಮಾದರಿಯಲ್ಲಿ ಬಿ.ವೈ.ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ "ಹರಕೆಯ ಕುರಿ" ಅಷ್ಟೇ!’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣ ಬಿಲ್ ಬಾಕಿ ಹಿನ್ನೆಲೆ

‘ಬಿಜೆಪಿ ಕಾರ್ಯಕರ್ತರಿಂದಲೇ “ಗೋ ಬ್ಯಾಕ್” ಎನಿಸಿಕೊಂಡು ಓಡಿ ಬಂದವರು ಈಗ ವಿರೋಧ ಪಕ್ಷದ ನಾಯಕರಂತೆ! ತಮ್ಮ ಕಾರ್ಯಕರ್ತರಿಂದಲೇ ಛೀಮಾರಿ ಹಾಕಿಕೊಂಡ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ವಪಕ್ಷದವರ ಬೆನ್ನಿಗೆ ಚೂರಿ ಹಾಕಿದ ಮಾಜಿ ಸಚಿವ ಆರ್.ಅಶೋಕ್ ಅವರನ್ನು ಅವರ ಪಕ್ಷದ ನಾಯಕರು, ಕಾರ್ಯಕರ್ತರೇ ಒಪ್ಪುತ್ತಿಲ್ಲ, ಇನ್ನು ಜನತೆ ಒಪ್ಪುವರೇ ಬಿಜೆಪಿ?’ ಎಂದು ಪ್ರಶ್ನಿಸಿದೆ.

‘ಬಿಜೆಪಿಯವರೇ ಬಿಜೆಪಿಯವರಿಗೆ ಚಿಂದಿಚೋರ್ ಎಂದಿದ್ದಾರೆ, ಈ "ಚಿಂದಿಚೋರ್" ಅಂದರೆ ಯಾರು?? ಈ ಯಕ್ಷಪ್ರಶ್ನೆಗೆ ಬಿಜೆಪಿ ಉತ್ತರಿಸುವುದೇ?? ಆ ಚಿಂದಿ ಚೋರ್ RTGS ಮೂಲಕ ಕಳ್ಳತನ ಮಾಡಿದ್ದಾರಾ? #VST ಮೂಲಕ ಕಳ್ಳತನ ಮಾಡಿದ್ದಾರಾ? ಅಪ್ಪನ ಫೋರ್ಜರಿ ಸಹಿ ಮಾಡಿ ಕಳ್ಳತನ ಮಾಡಿದ್ದಾರಾ?’ ಎಂದು ಕಾಂಗ್ರೆಸ್ ಕುಟುಕಿದೆ.

ಇದನ್ನೂ ಓದಿ: “ಯತೀಂದ್ರ ವಿಡಿಯೋ ಬಗ್ಗೆ ಸುಖಾಸುಮ್ಮನೆ ಆರೋಪ ಸರಿಯಲ್ಲ”

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ!! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! "ಜಾರಿದವರ ಯತ್ನ ಬೆಲ್ಲ" ಆಗ್ಲಿಲ್ಲವಲ್ಲಪ್ಪ..!’ ಎಂದು ಕಾಂಗ್ರೆಸ್ ಟೀಕಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News