ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸರಾಜ ಬೊಮ್ಮಯಿ ಆಯ್ಕೆಯಾದ ಬೆನ್ನೆಲೆ ಮತ್ತೆ ಮೂವರನ್ನ ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಸಚಿವ ಗೋವಿಂದ್ ಕಾರಜೋಳ(ಲಿಂಗಾಯತ), ಸಚಿವ ಆರ್ ಅಶೋಕ(ಒಕ್ಕಲಿಗ), ಸಚಿವ ಬಿ ಶ್ರೀರಾಮುಲು(ಪರಿಶಿಷ್ಠ ಜಾತಿ) ಅವರನ್ನ ನೂತನ ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.


ಮುಖ್ಯಮಂತ್ರಿ ಹುದ್ದೆಗೆ ನಿಯೋಜನೆಯಾಗಿರುವ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಹಾಗೂ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷರಾಗಿದ್ದ ಎಸ್.ಆರ್. ಬೊಮ್ಮಾಯಿಯವರ ಪುತ್ರ. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿ ಆಗುತ್ತಿರುವುದು ರಾಜ್ಯದಲ್ಲಿ ಇದು ಎರಡನೇ ಬಾರಿ.


ಈ ಹಿಂದೆ ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರ ಪುತ್ರ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿ ಆಗಿರುವುದು ಈ ಎರಡು ಕುಟುಂಬಗಳಲ್ಲಿ ಮಾತ್ರ. ಎಸ್.ಆರ್. ಬೊಮ್ಮಾಯಿ ಅವರು ರಾಜ್ಯದ 11ನೇ ಮುಖ್ಯಮಂತ್ರಿಯಾಗಿದ್ದರು. ಅವರ ಪುತ್ರ ಬಸವರಾಜ ಈಗ 20ನೇ ಸಿಎಂ ಆಗಿ ಆಯ್ಕೆಯಾಗಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.