Heavy Rain Yello Alert: ಈ ವರ್ಷವೂ ಮಳೆ ಕಣ್ಣಾಮುಚ್ಚಾಲೆ ಆಡುತ್ತಿದೆ. ಕೆಲವೆಡೆ ಅತಿವೃಷ್ಟಿ ಕೆಲವೆಡೆ ಅನಾವೃಷ್ಟಿ  ಕಂಡುಬರುತ್ತಿದೆ. ಸಕಾಲದಲ್ಲಿ ಮಳೆಯಾಗದೆ ಕೂಡ ಎಡವಟ್ಟಾಗುತ್ತಿದೆ. ಇಂತಹ ಪರಿಸ್ಥಿತಿಯ ಗೌರಿ ಗಣೇಶ ಹಬ್ಬದ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಬರುವ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ವರ್ತಮಾನ ಹವಾಮಾನ ಇಲಾಖೆಯಿಂದ ಲಭಿಸಿದೆ. ಇದಲ್ಲದೆ ಉಡುಪಿ,  ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ. ಜೊತೆಗೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. 


COMMERCIAL BREAK
SCROLL TO CONTINUE READING

ಇದಲ್ಲದೆ ಎಲ್ಲೆಲ್ಲಿ ಸಾಧಾರಣ ಮಳೆ (Rain) ಆಗಲಿದೆ ಎಂಬ ಅಂದಾಜನ್ನು ಹವಾಮಾನ ಇಲಾಖೆ (IMD) ನೀಡಿದೆ. ಇಲಾಖೆಯ ಅಂದಾಜಿನ ಪ್ರಕಾರ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


ಇದನ್ನೂ ಓದಿ- ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ


ರಾಜ್ಯದ ಉದ್ದಗಲಕ್ಕೂ ಮುಂದಿನ ಮೂರು ದಿನಗಳು  ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆ (Heavy Rain) ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು, ವಾಯುಭಾರ ಕುಸಿತದಿಂದ ಈಗಾಗಲೇ ಉಡುಪಿ, ಕಾರ್ಕಳ, ಶಾಹಪುರ, ಕಮ್ಮರಡಿ, ಬೀದರ್, ಭಾಲ್ಕಿ, ಶೃಂಗೇರಿ, ಮಂಕಿ, ಕದ್ರಾ, ಬೆಳ್ತಂಗಡಿ, ಆಗುಂಬೆ, ಗಟ್ಟೂರು, ರಾಯಚೂರು, ಶೋರಾಪುರ, ಗೇರುಸೊಪ್ಪ ಲೋಂಡಾ, ಮುನ್ನಳ್ಳಿ, ಸಿದ್ದಾಪುರ, ಧರ್ಮಸ್ಥಳ, ಕಲಘಟಗಿ, ಕವಡಿಮಟ್ಟಿ, ದೇವದುರ್ಗ, ದೇವರಹಿಪ್ಪರಗಿ, ಔರಾದ್, ಸಿಂಧನೂರು, ಹಳಿಯಾಳ, ಕೊಪ್ಪ ಎನ್‌ಆರ್‌ಪುರ, ಗೋಕರ್ಣ, ಹೊನ್ನಾವರ, ಧಾರವಾಡ, ಕುಂದಗೋಳ, ಕುರ್ಡಿ, ಕೂಡಲಸಂಗಮ, ಹುಬ್ಬಳ್ಳಿ, ಮಾನ್ವಿ ಕೂಡಲಸಂಗಮ, ಜಯಪುರ, ಕೊಟ್ಟಿಗೆಹಾರ, ಕಳಸ ಮತ್ತಿತರ ಕಡೆ ಮಳೆಯಾಗುತ್ತಿದ್ದು ಇದು ಇನ್ನಷ್ಟು ಬಿರುಸಾಗುವ ಸಾಧ್ಯತೆ ಇದೆ ಎಂದು ಕೂಡ ಹೇಳಿದೆ.


ಇದನ್ನೂ ಓದಿ- ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್


ಜಿಲ್ಲಾಡಳಿತಕ್ಕೆ ಸೂಚನೆ: 
ರಾಜ್ಯ ಸರ್ಕಾರ ಕೂಡ ಮಳೆ ಹೆಚ್ಚಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಪ್ರವಾಹ ಪರಿಸ್ಥಿತಿ ಉಂಟಾದರೆ ತಕ್ಷಣವೇ ಪರಿಹಾರ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದೆ.  ಜನ, ಜಾನುವಾರು, ಆಸ್ತಿ ನಾಶವಾಗದಂತೆ ಎಚ್ಚರದಿಂದ ಇರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.