Shakti Scheme: ಇನ್ನೊಂದು ತಿಂಗಳಲ್ಲಿ ಶಕ್ತಿ ಯೋಜನೆ ಸ್ಥಗಿತವಾಗಲಿದೆ!

Karnataka Shakti scheme: ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 2,800 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಈ ಪೈಕಿ ಅಕ್ಟೋಬರ್‌ ತಿಂಗಳ ಅಂತ್ಯದ ವೇಳೆಗೆ 2 ಸಾವಿರ ಕೋಟಿ ರೂ. ಮೊತ್ತದ ಉಚಿತ ಟಿಕೆಟ್‌ಗಳನ್ನು ವಿತರಿಸಲಾಗಿದೆ. ​

Written by - Puttaraj K Alur | Last Updated : Oct 29, 2023, 12:01 AM IST
  • ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ಅನುದಾನದ ಪೈಕಿ ಶೇ.71.42ರಷ್ಟು ಹಣ ಖರ್ಚು
  • ಶಕ್ತಿ ಯೋಜನೆಗಾಗಿ ಈಗಾಗಲೇ 2,000 ಕೋಟಿ ರೂ. ಮೊತ್ತದ ಉಚಿತ ಟಿಕೆಟ್‌ಗಳನ್ನು ವಿತರಿಸಲಾಗಿದೆ
  • ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಬಿಜೆಪಿ ಆಕ್ರೋಶ
Shakti Scheme: ಇನ್ನೊಂದು ತಿಂಗಳಲ್ಲಿ ಶಕ್ತಿ ಯೋಜನೆ ಸ್ಥಗಿತವಾಗಲಿದೆ! title=
'ಶಕ್ತಿ ಯೋಜನೆ ಸ್ಥಗಿತವಾಗಲಿದೆ'

ಬೆಂಗಳೂರು: ಶಕ್ತಿ ಯೋಜನೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ಅನುದಾನದ ಪೈಕಿ ಶೇ.71.42ರಷ್ಟು ಹಣ ಈಗಾಗಲೇ ಖರ್ಚಾಗಿದೆಯಂತೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಾಕಿ ಉಳಿದಿರುವ 5 ತಿಂಗಳಲ್ಲಿ ಹೆಚ್ಚುವರಿ ಅನುದಾನದ ಅವಶ್ಯಕತೆಯಿದೆ. ಇದಕ್ಕಾಗಿ ಸಾರಿಗೆ ಇಲಾಖೆಯು ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಬೇಕಾದ ಅನಿರ್ವಾಯತೆ ಎದುರಾಗಲಿದೆ.

ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 2,800 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಈ ಪೈಕಿ ಅಕ್ಟೋಬರ್‌ ತಿಂಗಳ ಅಂತ್ಯದ ವೇಳೆಗೆ 2 ಸಾವಿರ ಕೋಟಿ ರೂ. ಮೊತ್ತದ ಉಚಿತ ಟಿಕೆಟ್‌ಗಳನ್ನು ವಿತರಿಸಲಾಗಿದೆ. ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ದೊಡ್ಡ ಹೊರೆ ಬೀಳುತ್ತಿದೆ.

ಇದನ್ನೂ ಓದಿ: ನಮ್ಮ ಶಾಸಕರಿಗೆ ಬಿಜೆಪಿಯವ್ರು 50 ಕೋಟಿ ಆಫರ್ ಕೊಟ್ಟಿದ್ದಾರೆ: ಶಾಸಕ ಗಣಿಗ ರವಿಕುಮಾರ್‌

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ವಿಚಾರವಾಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿದ್ದು, ‘ಶಕ್ತಿ ಯೋಜನೆ ಇನ್ನೊಂದು ತಿಂಗಳಲ್ಲಿ ಸ್ಥಗಿತವಾಗಲಿದೆ’ ಎಂದು ಕುಟುಕಿದೆ. ‘ಯೋಜನೆಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಈಗ ಶೇ.29 ಮಾತ್ರವೇ ಬಾಕಿ ಉಳಿದಿದ್ದು, ಇನ್ನೊಂದು ತಿಂಗಳಲ್ಲಿ ಅದೂ ಖಾಲಿಯಾಗಲಿದೆ. ಗೃಹಲಕ್ಷ್ಮಿಯನ್ನು ಒಂದೇ ತಿಂಗಳಿಗೆ ನಿಲ್ಲಿಸಿ ತಾಂತ್ರಿಕ ದೋಷದ ನೆಪದೊಳಗೆ ನುಸುಳಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು, ಸ್ಥಗಿತವಾಗುತ್ತಿರುವ ಮತ್ತೊಂದು ಗ್ಯಾರಂಟಿಗೆ ಕಾರಣ ಹುಡುಕುವುದಲ್ಲಿ ತಲ್ಲೀನವಾಗಿದ್ದಾರೆ’ ಎಂದು ಬಿಜೆಪಿ ಕುಟುಕಿದೆ.

‘ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಕುರ್ಚಿ ಕದನ ಜೋರಾಗಿದೆ. ಎರಡೂ ಕಡೆಯವರು ತಮ್ಮ ಬೆಂಬಲಿಗರನ್ನು ಮುಂದಿಟ್ಟು ನಡೆಸುತ್ತಿರುವ ಗೆರಿಲ್ಲಾ ಯುದ್ಧ ಸರ್ಕಾರವನ್ನು ನಿಸ್ತೇಜವಾಗಿಸಿದೆ, ರಾಜ್ಯದ ಅಭಿವೃದ್ಧಿ ಕಾಂಗ್ರೆಸ್‌ನಲ್ಲಿ ಯಾರಿಗೂ ಬೇಡವಾಗಿದೆ’ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಬೆಳಗಾವಿಯ ಐದು ಅಂಗಡಿಯಲ್ಲಿ ಕಳ್ಳತನ: ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News