ಪಠ್ಯಪುಸ್ತಕ ಪರಿಷ್ಕರಣೆ : ಚಕ್ರತೀರ್ಥ ಸಮಿತಿಯ ತಪ್ಪು ತಿದ್ದಲು ಮತ್ತೊಂದು ಸಮಿತಿ ರಚನೆ!

ರಾಜ್ಯದಲ್ಲಿ ತಣ್ಣಗಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆ ಗುದ್ದಾಟ ಮತ್ತೆ ಮುನ್ನಲೆಗೆ ಬಂದಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ಎಡವಟ್ಟು ಸರಿಪಡಿಸಲು ಶಿಕ್ಷಣ ಇಲಾಖೆ ಸಿಎಂ ಸೂಚನೆಯಂತೆ ಮತ್ತೊಂದು ಸಮಿತಿ ಮೊರೆ ಹೋಗಿದೆ.

Written by - Zee Kannada News Desk | Last Updated : Jun 24, 2022, 05:43 PM IST
ಪಠ್ಯಪುಸ್ತಕ ಪರಿಷ್ಕರಣೆ : ಚಕ್ರತೀರ್ಥ ಸಮಿತಿಯ ತಪ್ಪು ತಿದ್ದಲು ಮತ್ತೊಂದು ಸಮಿತಿ ರಚನೆ! title=

ಬೆಂಗಳೂರು : ರಾಜ್ಯದಲ್ಲಿ ತಣ್ಣಗಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆ ಗುದ್ದಾಟ ಮತ್ತೆ ಮುನ್ನಲೆಗೆ ಬಂದಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ಎಡವಟ್ಟು ಸರಿಪಡಿಸಲು ಶಿಕ್ಷಣ ಇಲಾಖೆ ಸಿಎಂ ಸೂಚನೆಯಂತೆ ಮತ್ತೊಂದು ಸಮಿತಿ ಮೊರೆ ಹೋಗಿದೆ.

ರೋಹಿತ್ ಚಕ್ರತೀರ್ಥ ಪರಿಷ್ಕರಣೆ ವೇಳೆಯಾದ ಎಡವಟ್ಟು ಹಾಗೂ ವಿರೋಧ ಕೇಳಿಬಂದಿರುವ ಅಂಶಗಳ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಮಾಡಲಾಗುತ್ತಿದೆ. ಶಿಕ್ಷಣ ಇಲಾಖೆ ಹೊಸ ಸಮಿತಿಯಲ್ಲಿ ಶಿಕ್ಷಣ ತಜ್ಞರು ಚಿಂತಕರು ಸಾಹಿತಿಗಳು ಯಾರಿಗೂ ಮಣೆ ಹಾಕಲಿದೆ ಎಂದು ಹೇಳಲಾಗುತ್ತಿದೆ. ಮತ್ತೆ ವಿರೋಧ ಕೇಳಿ ಬರುವ ಆತಂಕದಿಂದ ಹಳೆಯ ಸಮಿತಿಯ ಯಾವುದೇ ಸದಸ್ಯೆನಿಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಶಿಕ್ಷಣ ಇಲಾಖೆಯೇ ತಪ್ಪುಗಳನ್ನ ಸರಿಪಡಿಸಲು ಮುಂದಾಗಿದೆ.

ಇದನ್ನೂ ಓದಿ : "ಟಿಪ್ಪು ಸುಲ್ತಾನ್ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ ಆರ್ ಅಶೋಕ್ ಅವರೇ".

ಶಿಕ್ಷಣ ಇಲಾಖೆಯ ಡೈಯಟ್ ಪ್ರಾಶಂಪಾಲರು ಹಾಗೂ ನುರಿತ ಶಿಕ್ಷಕರು, ತಜ್ಞ ಶಿಕ್ಷಕರ ನೇತೃತ್ವದಲ್ಲಿ ಎಡವಟ್ಟು ಸರಿಪಡಿಸುವ ಕಾರ್ಯ ಮಾಡಲಾಗುತ್ತಿದೆ. ಪರಿಷ್ಕೃತ ತಪ್ಪುಗಳನ್ನ ಸರಿಪಡಿಸಿ ಮಕ್ಕಳಿಗೆ ನೀಡಲುಮುಂದಾಗಿದೆ.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News