ಗೌರಿ ಹಂತಕರನ್ನು ಬಂಧಿಸಿದ್ದಕ್ಕೆ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದ ಕವಿತಾ ಲಂಕೇಶ

    

Last Updated : Jun 16, 2018, 04:32 PM IST
ಗೌರಿ ಹಂತಕರನ್ನು ಬಂಧಿಸಿದ್ದಕ್ಕೆ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದ ಕವಿತಾ ಲಂಕೇಶ title=

ಬೆಂಗಳೂರು:  ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿರುವುದಕ್ಕೆ ಗೌರಿ ಸಹೋದರಿ ಕವಿತಾ ಲಂಕೇಶ್ ಮತ್ತು ಗೌರಿ ತಾಯಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾದಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಆಗ ವಿಶೇಷ ತನಿಖಾ ತಂಡವನ್ನು ಆರೋಪಿಗಳ ಪತ್ತೆಗಾಗಿ ರಚಿಸಿದ್ದರು.ಈಗ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದರಿಂದ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಹೋಧರಿ ಗೌರಿ ಲಂಕೇಶ್ ಸಿದ್ದರಾಮಯ್ಯ ನವರು ಮುಖ್ಯಮಂತ್ರಿಗಳಾಗಿದ್ದಾಗ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು ಈಗ ಆರೋಪಿ ಪೋಲೀಸರ ವಶದಲ್ಲಿರುವುದರಿಂದ ಅವರಿಗೆ ಕೃತಜ್ಞತೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು. 

ಪೊಲೀಸರು ಗೌರಿಯನ್ನು ಹತ್ಯೆ ಮಾಡಿರುವ ಆರೋಪಿ ಪರುಶುರಾಮ್ ವಾಗ್ಮೊರೆಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. 

Trending News