Kerala Wayanad Landslide Case: ಕೇರಳ ರಾಜ್ಯದ ವಯನಾಡ್ ನಲ್ಲಿ ಸಂಭವಿಸಿರುವ ಭೂ ಕುಸಿತದಲ್ಲಿ ಚಾಮರಾಜನಗರದ ಇಬ್ಬರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ‌. ಜೊತೆಗೆ, ಓರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 


COMMERCIAL BREAK
SCROLL TO CONTINUE READING

ಮೆಪ್ಪಾಡಿಯಲ್ಲಿ ವಾಸವಿದ್ದ  ಚಾಮರಾಜನಗರ ಜಿಲ್ಲೆಯ ಪುಟ್ಟಸಿದ್ದಿ(62) ರಾಣಿ(50) ಎಂಬವರ ಶವ ಪತ್ತೆಯಾಗಿದೆ‌.


ಇದನ್ನೂ ಓದಿ- Wayanad Landslide: ಸಾವನ್ನಪ್ಪಿದವರ ಸಂಖ್ಯೆ 106ಕ್ಕೇರಿಕೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ!


ಚಾಮರಾಜನಗರ (Chamarajnagar) ತಾಲೂಕಿನ ಇರಸವಾಡಿ ಗ್ರಾಮದ ರಾಜನ್(50) ಹಾಗೂ ಇವರ ಪತ್ನಿ ರಜನಿ @ ರತ್ನಮ್ಮ(45) ಎಂಬವರ ಮನೆ ಕೊಚ್ಚಿ ಹೋಗಿದ್ದು ಇವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇಬ್ಬರೂ ಕೂಡ 6 ತಿಂಗಳ ಹಿಂದೆ ಕೇರಳದ ಚೂರಲ್ ಮಲೆ ಎಂಬ ಪ್ರದೇಶದಲ್ಲಿ ಹೊಸ ಮನೆ ಕಟ್ಟಿಕೊಂಡು ವಾಸವಿದ್ದರು. ಇವರಿಗೆ ಮಕ್ಕಳಿರಲಿಲ್ಲ ಎಂದು ತಿಳಿದುಬಂದಿದೆ. 


ಇದನ್ನೂ ಓದಿ- ಗುಡ್ಡ ಕುಸಿತ: ಆಸರೆಯಾಗಿದ್ದ ಹೊಟೇಲ್ ಜೊತೆಯಲ್ಲೇ ಜೀವನದ ಅಂತ್ಯ ಕಂಡ ಕುಟುಂಬ


ಕೇರಳದ (Kerala) ಚೂರಲ್ ಮಲೆ ಎಂಬಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ರಾಜನ್ ಹಾಗು ರಜನಿ ಅವರ ಹುಡುಕಾಟಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ. ಗುಂಡ್ಲುಪೇಟೆ ತಹಶಿಲ್ದಾರ್ ರಮೇಶ್ ಬಾಬು ತಂಡ ಸ್ಥಳಕ್ಕೆ ತೆರಳಿ ಚಾಮರಾಜನಗರ ಜನರ ಗುರುತು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ.


ಇನ್ನು, ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಗುಂಡ್ಲುಪೇಟೆ ತಾಲೂಕಿನ ತ್ರಯಂಬಕರಪುರದ ಸ್ವಾಮಿಶೆಟ್ಟಿ(70) ಎಂಬವರು ಗಾಯಗೊಂಡಿದ್ದು  ವೈತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.