ಬೆಂಗಳೂರು: ಕಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದಯ್ ಭರತ್ ಎನ್ನುವ ವೈದ್ಯನೊಬ್ಬ ಕುಡಿದ ಅಮಲಿನಲ್ಲಿ ರಮೇಶ್ ಎನ್ನುವ ವ್ಯಕ್ತಿಯ ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆ ಮಡಿವಾಳದ ಅಯ್ಯಪ್ಪ ದೇವಸ್ಥಾನದ ಬಳಿ ಅಂಡರ್ ಪಾಸ್ ಬಳಿ ನಡೆದಿದೆ.


COMMERCIAL BREAK
SCROLL TO CONTINUE READING

ಕುಡಿದ ಅಮಲಿನಲ್ಲಿ ಕಾರ್ಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ವೈದ್ಯನ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಈ ಬಗ್ಗೆ ಪೊಲೀಸರು ಪರಿಶೀಲಿಸಿದಾಗ ಆ ವೈದ್ಯನು ಕುಡಿನ ಮತ್ತಿನಲ್ಲಿ ಕಾರನ್ನು ಚಾಲನೆ ಮಾಡುತ್ತಿದ್ದನು ಎನ್ನಲಾಗಿದೆ. ಈಗ ಅವನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಡಿವಾಳ ಸಂಚಾರಿ ಪೋಲಿಸ್ ಠಾಣೆಯಲ್ಲಿ ರಮೇಶ್ ಎನ್ನುವ ಬೈಕ್ ಸವಾರನು ದೂರನ್ನು ನೀಡಿದ್ದಾರೆ.


ಈಗ ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ವೈದ್ಯನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.