ಪಾವಗಡ: ಕಳೆದ ತುಮಕೂರು ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇವೇಗೌಡರು ನನ್ನ ಮನೆಯ ಪಕ್ಕದಲ್ಲಿಯೇ ಹೋಗಿದ್ದಾರೆ. ಚುನಾವಣೆಯಲ್ಲಿ ಜನತೆ ಅವರನ್ನು ಸೋಲಿಸಿದ್ದು ನನ್ನಗೆ ತೃಪ್ತಿ ತಂದಿದೆ ಎಂದು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬ್ಯಾಂಕ್ ಸಭೆಯಲ್ಲಿ ದೇವೇಗೌಡ(HD Devegowda) ಹಾಗೂ ಕುಮಾರಸ್ವಾಮಿ ಬಗ್ಗೆ ಪ್ರಸ್ತಾಪಿಸಿದ ಕೆ.ಎನ್‌.ರಾಜಣ್ಣ, ಸಹಕಾರಿ ಬ್ಯಾಂಕಿನ ಸೇವೆ ಅತ್ಯಂತ ಸಂತಸ ತಂದಿದೆ. ಹೀಗಾಗಿ ಜನ ನನ್ನ ಪರವಾಗಿದ್ದಾರೆ ಎಂದ ಅವರು, ಇಲ್ಲಿನ ತಿಮ್ಮಾರೆಡ್ಡಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅತ್ಯಂತ ಆಪ್ತರಾಗಿದ್ದು, ಅವರು ಬೇಸರಪಟ್ಟರೂ ಪರವಾಗಿಲ್ಲ,


JDS-Congress: ಸಭಾಪತಿ ಸ್ಥಾನಕ್ಕೆ ಚುನಾವಣೆ: ಕಾಂಗ್ರೆಸ್ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ..!


ಡಿಸಿಸಿ ಬ್ಯಾಂಕಿನಿಂದ ಇದುವರೆಗೂ ಸಾಲ ಪಡೆಯದ ರೈತ(Farmers)ರಿಗೆ ಸುಮಾರು 5 ಕೋಟಿಯಷ್ಟು ಹೊಸ ಸಾಲ ಕಲ್ಪಿಸಲಾಗಿದೆ. ಸರ್ಕಾರದಿಂದ ಬರಬೇಕಿದ್ದ 64 ಕೋಟಿ ಸಾಲಮನ್ನಾದ ಹಣ ಬಂದ ಕೂಡಲೇ ಹಳಬರಿಗೆ ಬೆಳೆ ಸಾಲ ಕಲ್ಪಿಸುವುದಾಗಿ ಹೇಳಿದ್ದಾರೆ.


Satish Jarkiholi: ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ರೆಡಿ..!


ಈಗಾಗಲೇ ಬೆಳೆ ಸಾಲ ಪಡೆದ ರೈತರ ಸಾಲಮನ್ನಾ ಮತ್ತೆ ಮನ್ನಾ ಆಗುವ ಸಾಧ್ಯತೆಗಳಿವೆ. ಕಾರಣ ಚುನಾವಣೆ(Election) ವೇಳೆ ಗ್ರಾಮಗಳಿಗೆ ಬಂದ ರಾಜಕಾರಣಿಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಲಮನ್ನಾ ಮಾಡುವ ಭರವಸೆ ವ್ಯಕ್ತಪಡಿಸಲಿದ್ದಾರೆ. ಹೀಗಾಗಿ ಮತ್ತೆ ಸಾಲಮನ್ನಾ ಆಗಲಿರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Maski By Election: ವಿಜಯೇಂದ್ರ ಬೈ ಎಲೆಕ್ಷನ್ ಉಸ್ತುವಾರಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಬಿಎಸ್‌ವೈ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.