KodiMatha Shri Prediction: ರಾಷ್ಟ್ರ ರಾಜಕಾರಣದಲ್ಲಿ ಶೀಘ್ರದಲ್ಲೇ ಸುನಾಮಿ ಏಳುವ ಲಕ್ಷಣಗಳು ದಟ್ಟವಾಗಿವೆ. ಯುಗಾದಿ ಹಬ್ಬದ ಬಳಿಕ ಈ ಕುರಿತಂತೆ ಸುಳಿವು ಸಿಗಲಿದೆ ಎಂದು ಗದಗನಲ್ಲಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆಯೂ ಮಾತನಾಡಿರುವ ಕೋಡಿಮಠದ ಸ್ವಾಮೀಜಿ, ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದವರು ಹಕ್ಕಬುಕ್ಕರು. ಇವತ್ತು ಕೂಡಾ ವಿಜಯನಗರ ಸಾಮ್ರಾಜ್ಯದ ಹೆಸರು ಪ್ರಖ್ಯಾತ ಪಡೆದಿದೆ. ಹಕ್ಕಬುಕ್ಕರು ಹಾಲುಮತದ ಸಮಾಜದವರು. ಆ ಸಮಾಜಕ್ಕೆ ಅಧಿಕಾರ ಬಂದರೆ ಸುಲಭವಾಗಿ ಕಿತ್ತುಕೊಳ್ಳಲು ಆಗೋದಿಲ್ಲ. ಸಮಾಜದ ಮೇಲೆ, ರಾಜ್ಯದ ಮೇಲೆ ಒಳ್ಳೆ ಕೆಲಸ ಮಾಡುವರಿಗೆ ಕೆಡುಕು ಆಗೋದು ಕಷ್ಟ ಎಂದಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಸುಭದ್ರ..!
ಹಾಲು ಮತದ ಸಮಾಜದವರೇ ಆದ ಸಿದ್ದರಾಮಯ್ಯ ಅವರು ಈಗ ಅಧಿಕಾರದಲ್ಲಿದ್ದಾರೆ. ಅವರಿಂದ ಅಧಿಕಾರ ಕಿತ್ತುಕೊಳ್ಳುವದು ಕಷ್ಟ. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ಐದು ವರ್ಷ ಆಡಳಿತ ನಡೆಸುತ್ತಾರೆ ಎಂದು ನಾನು ಹೇಳಿದ್ದೆ. ಆಗಲೂ ಕೂಡ ಯಾರು ಅವರಿಂದ ಅಧಿಕಾರ ಕಿತ್ತುಕೊಳ್ಳಲು ಆಗಿಲ್ಲ. ಇವತ್ತಿನ ರಾಜಕೀಯ ಚಿಂತನೆ ಮಾಡುವುದಾದರೆ
ಈ ಮುಖ್ಯಮಂತ್ರಿ ಅಧಿಕಾರ ಕಿತ್ತುಕೊಳ್ಳುವದು ಕಷ್ಟ ಎಂದು ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಖುರ್ಚಿ ಭದ್ರ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ- ಗೃಹಲಕ್ಷ್ಮೀ ಯೋಜನೆ ಕುರಿತಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಬಿಗ್ ಅಪ್ಡೇಟ್
ಸಾಮಾಜಿಕ, ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ ಸಿದ್ಧರಾಮಯ್ಯ ಅವರ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ ಎಂದು ಹೇಳಿರುವುದೇ ವಿನಃ ನಮಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬಗ್ಗೆಯೂ ಒಳ್ಳೆಯ ಅಭಿಪ್ರಾಯ ಇದೆ. ಅವರು ಕೂಡ ಮೊದಲಿನಿಂದ ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ.
ನಮ್ಮಲ್ಲಿ ಸಂಕ್ರಾಂತಿ ಭವಿಷ್ಯ, ಯುಗಾದಿ ಭವಿಷ್ಯವನ್ನು ಹೇಳಲಾಗುತ್ತದೆ. ಚಂದ್ರನ ಚಲನೆಯ ಆಧಾರದ ಮೇಲೆ ಭವಿಷ್ಯ ನುಡಿಯಲಾಗುತ್ತದೆ. ಬದಲಾವಣೆ ಕುರಿತು, ಯುಗಾದಿ ನಂತರ ಅದರ ಬಗ್ಗೆ ಹೇಳಬಹುದು ಎಂದರು.
ಇದನ್ನೂ ಓದಿ- ಅಧಿಕಾರ ಹಂಚಿಕೆ ಭರವಸೆ ಈಡೇರಿಸಿ ಇಲ್ಲಾ ಅಂದ್ರೆ.. : ಹೈ ಕಮಾಂಡ್ ಗೆ ಡಿಕೆ ಡೆಡ್ ಲೈನ್
ಹಾಲುಮತದವರು ಒಕ್ಕಲಿಗರಿಗೆ ಅಧಿಕಾರ ಬಿಟ್ಟುಕೊಡಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೋಡಿಮಠದ ಶ್ರೀ, ಒಕ್ಕಲಿಗರು ಅನ್ನದಾತರು, ಅವರನ್ನು ಇಡೀ ಜಗತ್ತೇ ಮರೆಯುವಂತಿಲ್ಲ. ಇದಕ್ಕೆ ಜಾತಿ ಲೇಪನ ಹಚ್ಚುವದು ಬೇಡ ಎಂದು ಹೇಳಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









