ಬೆಂಗಳೂರು : ತೆರಿಗೆ ಕಳ್ಳತನ ಮಾಡದೆ, ಜನರಿಗೆ ಮತ್ತು ಸರ್ಕಾರಕ್ಕೆ ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿ ಎಂದು ತೆರಿಗೆ ಸಲಹೆಗಾರರಿಗೆ ಸಚಿವ ಕೃಷ್ಣ ಬೈರೇಗೌಡ ಕಿವಿಮಾತು ಹೇಳಿದರು. 


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘವು ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಆಗಸ್ಟ್ 4, 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ತೆರಿಗೆ ಸಮ್ಮೇಳನ ಮತ್ತು ತೆರಿಗೆ  ವೃತ್ತಿಪರರ ದಿನಾಚರಣೆ ಹಮ್ಮಿಕೊಂಡಿದೆ.


ಇದನ್ನೂ ಓದಿ: ಶಕ್ತಿ ಯೋಜನೆ ಇನ್ನೂ 10 ವರ್ಷ ಇರುತ್ತದೆ- ಸಚಿವ ರಾಮಲಿಂಗಾರೆಡ್ಡಿ


ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಜನರು ತಮ್ಮ ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು? ಮತ್ತು ತೆರಿಗೆಯನ್ನು ಎಲ್ಲೆಲ್ಲಿ ಉಳಿಸಬೇಕು ಎಂದು ಸಲಹೆ ನೀಡುವುದು ಉತ್ತಮ ಕೆಲಸವೇ. ಆದರೆ, ತೆರಿಗೆ ಕಳ್ಳತನ ಅಕ್ಷಮ್ಯ” ಎಂದು ಕಿವಿಮಾತು ಹೇಳಿದರು.


ಯಾವುದೇ ಸರ್ಕಾರ ನಡೆಯಲು ತೆರಿಗೆ ಅತೀ ಅವಶ್ಯಕ. ತೆರಿಗೆ ಇಲ್ಲದೆ ಜನರಿಗೆ ಉತ್ತಮ ಆಡಳಿತ ನೀಡುವುದೂ ಸಾಧ್ಯವಿಲ್ಲ. ಆದರೆ, ಜನರಿಗೆ ತೆರಿಗೆ ಉಳಿಸುತ್ತೇವೆ ಎಂದು ಹಲವು ತೆರಿಗೆ ಸಲಹೆಗಾರರು ತೆರಿಗೆ ಕಳ್ಳತನ ನಡೆಸುತ್ತಿದ್ದಾರೆ. ಕಾನೂನು ರೀತಿಯೂ ಈ ಕೃತ್ಯ ಅಪರಾಧವಾಗಿದ್ದು, ತೆರಿಗೆ ಕಳ್ಳತನ ನಿಲ್ಲಬೇಕು. ಜನರಿಗೆ ಹಾಗೂ ಸರ್ಕಾರಕ್ಕೆ ಪ್ರಮಾಣಿಕರಾಗಿರಬೇಕು ಎಂದು ರಾಷ್ಟ್ರೀಯ ತೆರಿಗೆ ಸಮ್ಮೇಳನದಲ್ಲಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.


ಇದನ್ನೂ ಓದಿ: 1 ರೂ.ಗೆ ರಾಗಿ ಮುದ್ದೆ ನೀಡಿ ಹೋಟೇಲ್‌ ತಿಂಡಿಗಳ ಬೆಲೆ ಏರಿಕೆ ಖಂಡಿಸಿದ ವಾಟಾಳ್..!


ಸಮ್ಮೇಳನದಲ್ಲಿ ಅಖಿಲ ಭಾರತ ತೆರಿಗೆ ಸಲಹೆಗಾರ ಒಕ್ಕೂಟದ ರಾಷ್ಟ್ರಾಧ್ಯಕ್ಷ ಪಂಕಜ್ ಗಯಾ, ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ ಎಸ್. ನಂಜುಂಡ ಪ್ರಸಾದ್, ಗೋಲ್ಡನ್ ಜ್ಯುಬಿಲಿ ಈವೆಂಟ್ ಮುಖ್ಯಸ್ಥ ಹಾಗೂ ಕಾರ್ಯಕ್ರಮದ ಆಯೋಜಕರರಾದ ಡಿ.ಎಮ್. ಭಟ್ಟದ್ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.