ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್ : 25 ಜನರಿಗೆ ಗಾಯ

ಬೆಂಗಳೂರಿನ ಕೆಂಗೇರಿ ಬಳಿ ಕೆಎಸ್ ಆರ್ ಟಿಸಿ ಬಸ್ ಅಪಘಾತಕ್ಕೆ ಒಳಗಾಗಿದೆ. ಕೆಂಗೇರಿ ಬಳಿ ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿ ಹೊಡೆದಿದೆ.  

Written by - Zee Kannada News Desk | Last Updated : May 9, 2022, 11:25 AM IST
  • ಕೆಂಗೇರಿ ಬಳಿ ಮೆಟ್ರೋ ಪಿಲ್ಲರ್ ಗೆ ಕೆಎಸ್ ಆರ್ ಟಿಸಿ ಡಿಕ್ಕಿ ಹೊಡೆಡಿದೆ.
  • ಮೆಟ್ರೋ ಪಿಲ್ಲರ್ ನಂ 545ಗೆ ಬಸ್ ಡಿಕ್ಕಿ ಹೊಡೆದಿದೆ.
  • ಈ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು.
 ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್ : 25 ಜನರಿಗೆ ಗಾಯ  title=
KSRTC BUS ACCIDENT

ಬೆಂಗಳೂರು : ಪಾವಗಡ ಬಸ್ ದುರಂತ ಮಾಸುವ ಮುನ್ನವೇ  ಬೆಂಗಳೂರಿನಲ್ಲಿ ಮತ್ತೊಂದು ಬಸ್ ಅಪಘಾತ ಸಂಭವಿಸಿದೆ.  ಕೆಂಗೇರಿ ಬಳಿ ಮೆಟ್ರೋ ಪಿಲ್ಲರ್ ಗೆ ಕೆಎಸ್ ಆರ್ ಟಿಸಿ ಡಿಕ್ಕಿ ಹೊಡೆಡಿದೆ.  ಘಟನೆಯಲ್ಲಿ  25 ಜನರ ತಲೆಗೆ ತೀವ್ರ ಗಾಯಗಳಾಗಿದ್ದು,  4 ಜನರ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. 

ಬೆಂಗಳೂರಿನ ಕೆಂಗೇರಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೆ ಒಳಗಾಗಿದೆ. ಕೆಂಗೇರಿ ಬಳಿ ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿ ಹೊಡೆದಿದೆ.  ಪೂರ್ಣಿಮಾ ಪ್ಯಾಲೇಸ್ ಬಳಿ ಇರುವ ಮೆಟ್ರೋ ಪಿಲ್ಲರ್ ನಂ 545ಗೆ ಬಸ್  ಡಿಕ್ಕಿ ಹೊಡೆದಿದೆ.  ಈ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು. 

ಇದನ್ನೂ ಓದಿ :  ‌ ಗ್ರಾಹಕರೇ ಗಮನಿಸಿ... ಇಲ್ಲಿದೆ ಇಂದಿನ ತರಕಾರಿ ಬೆಲೆ

ಮಡಿಕೇರಿಯಿಂದ ಬೆಂಗಳೂರಿಗೆ  ಬರುತ್ತಿದ್ದ ಈ ಬಸ್ ನಲ್ಲಿ 45 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ, 25 ಜನರ ತಲೆಗೆ ತೀವ್ರ ಗಾಯಗಳಾಗಿವೆ.  4 ಜನರ ಪರಿಸ್ಥಿತಿ ಗಂಭೀರವಾಗಿದೆ.  ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 
ಇದನ್ನೂ ಓದಿ : ಗುಳೇದಗುಡ್ಡ ಶೂಟ್ ಔಟ್ ಪ್ರಕರಣ : ರಕ್ತಸ್ರಾವದಿಂದ ಮಹಿಳೆ ಸಾವು

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News