ಕುಮಾರಸ್ವಾಮಿ ಮುಖ್ಯಮಂತ್ರಿಯಲ್ಲ ಕಿಂಗ್ ಮೇಕರ್- ಹೆಚ್ದಿಡಿ

ಬ್ರಹ್ಮಾಂಡ ಗುರೂಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ದೊಡ್ಡ ಗೌಡರು.

Last Updated : Oct 13, 2017, 06:05 PM IST
ಕುಮಾರಸ್ವಾಮಿ ಮುಖ್ಯಮಂತ್ರಿಯಲ್ಲ ಕಿಂಗ್ ಮೇಕರ್- ಹೆಚ್ದಿಡಿ title=

ಹಾಸನ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕುಮಾರ ಸ್ವಾಮಿ ಮುಂದಿನ ಮುಖ್ಯಮಂತ್ರಿಯಲ್ಲ, ಅವರು 'ಕಿಂಗ್ ಮೇಕರ್' ಎಂದು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೊಡ್ಡ ಗೌಡರು, ನಾನು ದೇವರನ್ನು ಮತ್ತು ಜೋತಿಷ್ಯವನ್ನು ನಂಬುತ್ತೇನೆ. ದೇವರ ಆಶಿರ್ವಾದದಿಂದಲೇ ರಾಜಕೀಯ ಪ್ರವೇಶಿಸಿದ್ದೇನೆ. ದೇವರು ಮತ್ತು ಜನರ ಆಶೀರ್ವಾದವಿದ್ದರೆ ಕುಮಾರಸ್ವಾಮಿ ಮತ್ತೆ ಅಧಿಕಾರದ ಗದ್ದುಗೆ ಏರಬಹುದು ಎಂದು ಪ್ರತಿಕ್ರಿಯಿಸಿದರು.

ಕುಟುಂಬ ಸಮೇತರಾಗಿ ಹಾಸನಾಂಬೆಯ ದರ್ಶನಕ್ಕೆ ಆಗಮಿಸಿದ್ದ ದೇವೇಗೌಡರು ಹಾಸನಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Trending News