ಭೂ ಹಗರಣ: ಬೈರತಿ ಬಸವರಾಜು ರಾಜೀನಾಮೆಗೆ ಸಿದ್ಧರಾಮಯ್ಯ ಆಗ್ರಹ

"ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಬೈರತಿ ಬಸವರಾಜು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸುತ್ತೇನೆ" ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : Dec 18, 2021, 03:46 PM IST
  • ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಬೈರತಿ ಬಸವರಾಜು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಭೂ ಹಗರಣ: ಬೈರತಿ ಬಸವರಾಜು ರಾಜೀನಾಮೆಗೆ ಸಿದ್ಧರಾಮಯ್ಯ ಆಗ್ರಹ  title=
Photo Courtesy: Facebook

ಬೆಳಗಾವಿ: "ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಬೈರತಿ ಬಸವರಾಜು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸುತ್ತೇನೆ" ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಡಿ.ವೈ.ಎಸ್.ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಕರಣದ ನೈತಿಕ ಹೊಣೆ ಹೊತ್ತು ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿ ತಿಂಗಳಾಗುತ್ತಾ ಬಂದರೂ ಬೈರತಿ ಬಸವರಾಜ್ ಅವರ ರಾಜೀನಾಮೆ ಪಡೆಯದ ಬಿಜೆಪಿ ನಾಯಕರಿಗೆ ಸರ್ಕಾರ ನಡೆಸಲು ಯಾವ ನೈತಿಕತೆ ಇದೆ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: Sunil Kumar : 'ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ'

ಇಂದು ಬೈರತಿ ಬಸವರಾಜ್ ಅವರ ಮೇಲಿನ ಭೂ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿದರೆ ನ್ಯಾಯಾಲಯದ ವಿಚಾರಣೆಯ ಮೇಲೆ ಪ್ರಭಾವ ಬೀರುತ್ತದೆ, ಆದ್ದರಿಂದ ಸದನದ ನಿಯಮಾವಳಿಗಳಲ್ಲಿ ಚರ್ಚೆಗೆ ಅವಕಾಶವಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ" ಎಂದು ಟೀಕಿಸಿದರು

ನಮ್ಮ ಸರ್ಕಾರದ ಅವಧಿಯಲ್ಲಿ ಡಿ.ಕೆ ರವಿ ಮತ್ತು ಗಣಪತಿ ಅವರು ವೈಯಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗ ಇದೇ ಜಗದೀಶ್ ಶೆಟ್ಟರ್, ಆರ್.ಅಶೋಕ್, ಬಸವರಾಜ ಬೊಮ್ಮಾಯಿ ಅವರು ನಿಯಮ 60 ರಡಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿರಲಿಲ್ಲವೇ? ಎಂದು ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಾಹನಗಳ ಮೇಲೆ ಕಲ್ಲು ತೂರಾಟ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ

ಈಗಿನಂತೆ ಹಿಂದೆಯೂ ಐ.ಪಿ.ಸಿ ಸೆಕ್ಷನ್ 200 ರಡಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿ ಪ್ರಕರಣ ನ್ಯಾಯಾಲಯದಲ್ಲಿತ್ತು, ಸದನದ ಅಂದಿನ ನಿಯಮಾವಳಿಗಳೇ ಇಂದೂ ಇವೆ, ಅಂದು ಹಠ ಹಿಡಿದು ಚರ್ಚೆ ನಡೆಸಿದಾಗ ನ್ಯಾಯಾಲಯದ ವಿಚಾರಣೆ ಮೇಲೆ ಪ್ರಭಾವ ಬೀರದ್ದು ಇಂದು ಮಾತ್ರ ಬೀರುತ್ತದೆಯೇ? ಎಂದು ಅವರು ಪ್ರಶ್ನಿಸಿದರು.

ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್ ಪುರಂ ಹೋಬಳಿಯ ಕಲ್ಕೆರೆಯಲ್ಲಿರುವ 22 ಎಕರೆ ಜಮೀನನ್ನು ಅಣ್ಣಯ್ಯಪ್ಪ ಎಂಬುವರಿಂದ 21/05/2003 ರಲ್ಲಿ ಖಾಲಿ ಛಾಪಾ ಕಾಗದಕ್ಕೆ ಸಹಿ ಹಾಕಿಸಿಕೊಂಡು ಕಾನೂನು ಬಾಹಿರವಾಗಿ ಬೈರತಿ ಬಸವರಾಜ್ ಅವರು ಖರೀದಿ ಮಾಡಿದ್ದಾರೆಂಬ ಆರೋಪವಿದೆ.ದೂರುದಾರರಾದ ಮಾದಪ್ಪ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲು ಮಾಡಿದ ನಂತರ ಪೊಲೀಸರು ಬಿ ರಿಪೋರ್ಟ್ ಹಾಕಿದ್ದರು. ಇದನ್ನು ಪ್ರಶ್ನಿಸಿ ಮಾದಪ್ಪನವರು ನ್ಯಾಯಾಲಯದ ಮೊರೆ ಹೋಗಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕರ್ನಾಟಕದ ಮೇಲಿನ ದಾಳಿಗೆ ಸಮ-ಎಚ್ ಡಿ.ಕುಮಾರಸ್ವಾಮಿ

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ಪೊಲೀಸರ ಬಿ ರಿಪೋರ್ಟ್ ಅನ್ನು ವಜಾಗೊಳಿಸಿ, ಸೆಕ್ಷನ್ 120(😎, 420, 427, 465, 467, 471 ಗಳಡಿಯಲ್ಲಿ ಕ್ರಿಮಿನಲ್ ಅಪರಾಧ ಪ್ರಕರಣವನ್ನು ದಾಖಲಿಸಿಕೊಂಡು, ಸಮನ್ಸ್ ಜಾರಿಗೊಳಿಸುವಂತೆ ಆದೇಶಿಸಿದೆ. ಇವುಗಳಲ್ಲಿ ಕೆಲವು ಜಾಮೀನು ರಹಿತ ಅಪರಾಧಗಳಾಗಿವೆ" ಎಂದು ಹೇಳಿದರು.

ಡಿ.ಕೆ ರವಿ ಹಾಗೂ ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ಸಿ.ಬಿ.ಐ ತನಿಖೆಗೆ ಒಪ್ಪಿಸಿತ್ತು. ಎರಡೂ ಪ್ರಕರಣದಲ್ಲಿ ಜಾರ್ಜ್ ಅವರು ನಿರಪರಾಧಿ ಎಂದು ವರದಿ ಬಂದಿದೆ. ಜಾರ್ಜ್ ಅವರಿಗೆ ನೈತಿಕತೆ ಆಧಾರದಲ್ಲಿ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿಯವರಿಗೂ ನೈತಿಕತೆ ಇರಬೇಕಲ್ಲವೇ? ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಖಂಡನೀಯ: ಪುಂಡರನ್ನು ಸದೆಬಡಿಯುತ್ತೇವೆ ಎಂದ ಸಿಎಂ ಬೊಮ್ಮಾಯಿ

"ಬಿಜೆಪಿಯವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿದ್ದರೆ, ರಾಜ್ಯದ ಜನರಿಗೆ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡಬೇಕು ಎಂಬ ಆಶಯವಿದ್ದರೆ ತಕ್ಷಣ ಬೈರತಿ ಬಸವರಾಜ್ ಅವರ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ" ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.

ಪ್ರಕರಣವು ತಾರ್ಕಿಕ ಅಂತ್ಯ ಕಾಣುವವರೆಗೆ ನಾವು ಹಿಂದೆ ಸರಿಯುವ ಪ್ರಶ್ನೇಯೇ ಇಲ್ಲ. ಸಮಯಾವಕಾಶದ ಕೊರತೆ ಇದೆ ಎನಿಸಿದರೆ ರಾಜ್ಯ ಸರ್ಕಾರ ಸದನವನ್ನು ಒಂದು ತಿಂಗಳವರೆಗೆ ಮುಂದುವರೆಸಲಿ,ನಾವು ಸದನಕ್ಕೆ ಹಾಜರಾಗಲು ಸಿದ್ಧರಿದ್ದೇವೆ.ಭೂ ಹಗರಣದ ಚರ್ಚೆಯಾಗಲೇಬೇಕು ಎಂದು ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News