ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಚಾಮರಾಜನಗರ ತಾಲೂಕಿನ ಕಾಗಲವಾಡಿ ಮೋಳೆ ಗ್ರಾಮದ ಶಿವರಾಜು ಹಾಗೂ ಕುಮಾರ್ ಮೃತ ದುರ್ದೈವಿಗಳು‌. ಸಿದ್ದರಾಜು ಎಂಬಾತ ಬಚವಾದರೂ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ : ಹೊಸ ವರ್ಷಕ್ಕೆ ಕೌಂಟ್ ಡೌನ್ : ಪೊಲೀಸ್ ಇಲಾಖೆಯಿಂದ ಫುಲ್ ಸ್ಟ್ರಿಕ್ಟ್ ರೂಲ್ಸ್!


ರೇಣುಕಾದೇವಿ ಎಂಬವರ ಹೆಸರಿನಲ್ಲಿ ಈ ಬಿಳಿಕಲ್ಲು ಕ್ವಾರಿಯ ಪರವಾನಗಿ ಇದ್ದು ಅವರ ಪತಿ ಭಾಸ್ಕರ್ ಎಂಬವರು ಇದನ್ನು ನಡೆಸುತ್ತಿದ್ದರು. ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ ಮಾಸುವ ಮುನ್ನವೇ ಈ ದುರಂತ ನಡೆದಿರುವುದು ವಿಪರ್ಯಾಸವಾಗಿದೆ. 


ಗಣಿಗಾರಿಕೆ ಅಧಿಕಾರಿಗಳ ಜಾಣಮೌನದಿಂದ ದುರಂತ ಮರುಕಳಿಸಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ತೆರಳಿದ್ದಾರೆ‌.


ಇದನ್ನೂ ಓದಿ : ಜನಾರ್ಧನ್ ರೆಡ್ಡಿ ಅವರ ಪ್ರಾಣ ಸ್ನೇಹಿತನಾಗಿ ಒಳ್ಳೆಯದಾಗಲಿ ಅಂತ ಬಯಸುತ್ತೇನೆ : ಶ್ರೀರಾಮುಲು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.