ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಯಲ್ಪಡುವ ಕಪ್ಪತ್ತಗುಡ್ದದ ಪ್ರದೇಶದಲ್ಲಿ ಕಳೆದೆರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಈಗ ಅರಣ್ಯ ಇಲಾಖೆಯು ಗಾಳಿ ಗುಂಡಿಗೆ ಹೋಗುವ ಮಾರ್ಗಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆಯು 'ಈ ಮೂಲಕ ಸಕಲ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ಕಪ್ಪತ್ತ ಗುಡ್ಡ ಅರಣ್ಯ ಪ್ರದೇಶವು ವನ್ಯ ಜೀವಿಧಾಮ ಆಗಿರುವುದರಿಂದ ಅರಣ್ಯ ಪ್ರದೇಶದೊಳಗೆ ಪೂರ್ವಾನುಮತಿ ಪಡೆಯದೆ ಪ್ರವೇಶ ಮಾಡುವುದು ನಿಷಿದ್ಧವಾಗಿದೆ. ಆದ್ದರಿಂದ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಪ್ರವೇಶ ಮಾಡುವುದು ಅರಣ್ಯ ಕಾನೂನುಗಳ ಉಲ್ಲಂಘನೆಯಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದೆ. ಗಾಳಿಗುಂಡಿ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು ಹೆಚ್ಚಿನ ವಾಹನ ದಟ್ಟನೆಯಿಂದ ಪ್ಲಾಸ್ಟಿಕ್ ಮತ್ತು ಶಬ್ದ ಮಾಲಿನ್ಯದಿಂದ ವನ್ಯ ಪ್ರಾಣಿಗಳ ಆವಾಸಕ್ಕೆ ತೊಂದರೆಯಾಗುತ್ತಿರುತ್ತದೆ.


ಪ್ರಸ್ತುತ ಅತಿಯಾಗಿ ಮಳೆ ಆಗುತ್ತಿರುವುದರಿಂದ ಮತ್ತು ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಆದ್ದರಿಂದ ಕಪ್ಪತ್ತ ಗುಡ್ಡ ಗುಡ್ಡಗಾಡು ಅರಣ್ಯ ಪ್ರದೇಶ ಮತ್ತು ಮಣ್ಣು ಮಳೆಯಿಂದಾಗಿ ಜರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಡೋಣಿ ಮಾರ್ಗವಾಗಿ ಕಪ್ಪತ್ತಗುಡ್ಡ ಗಾಳಿಗುಂಡಿಗೆ ಹೋಗುವ ರಸ್ತೆಯನ್ನು ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ನಿರ್ಬಂಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಅರಣ್ಯ ಇಲಾಖೆಯೊಂದಿಗೆ ಸಹರಿಕರಿಸಬೇಕೆಂದು ಮಾನ್ಯ ವಲಯ ಅರಣ್ಯಾಧಿಕಾರಿಗಳು ಕಪ್ಪತ್ತ ಹಿಲ್ಸ್ ವಲಯ, ಮುಂಡರಗಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.