ಕಾರ್ತಿಕ ಮಾಸದ ಕಡೇ 4 ದಿನ: ಮಾದಪ್ಪನಿಗೆ 1.38 ಕೋಟಿ ಹಣ

ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾರ್ತಿಕ ಮಾಸದ ಕಡೇ ಸೋಮವಾರ‌ ಹಾಗೂ ಅಮವಾಸ್ಯೆ ದಿನದಂದು ಲಕ್ಷಾಂತರ ಮಂದಿ ಭಕ್ತರು ಭೇಟಿ ಕೊಟ್ಟಿದ್ದು ಕ್ಷೇತ್ರಕ್ಕೆ ಭರಪೂರ ಆದಾಯ ಬಂದಿದೆ.

Written by - Manjunath N | Last Updated : Dec 14, 2023, 05:21 PM IST
  • ಅಮಾವಾಸ್ಯೆ ದಿನದಂದು 49,63,203 ರೂ. ಆದಾಯ ಬಂದಿದ್ದರೇ ಕಾರ್ತಿಕ ಮಾಸದ ಕಡೇ ಸೋಮವಾರ ಒಂದೇ ದಿನ 53,26,156 ರೂ. ಹಣ ಹರಿದು ಬಂದಿದೆ.
  • ಶನಿವಾರದಂದು 12 ಲಕ್ಷ, ಭಾನುವಾರ 23 ಲಕ್ಷ ಆದಾಯ ಬಂದಿದ್ದು ಹುಂಡಿ ಎಣಿಕೆ ಹೊರತುಪಡಿಸಿದ ಆದಾಯ ಇದಾಗಿದೆ.
 ಕಾರ್ತಿಕ ಮಾಸದ ಕಡೇ 4 ದಿನ: ಮಾದಪ್ಪನಿಗೆ 1.38 ಕೋಟಿ ಹಣ title=

ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾರ್ತಿಕ ಮಾಸದ ಕಡೇ ಸೋಮವಾರ‌ ಹಾಗೂ ಅಮವಾಸ್ಯೆ ದಿನದಂದು ಲಕ್ಷಾಂತರ ಮಂದಿ ಭಕ್ತರು ಭೇಟಿ ಕೊಟ್ಟಿದ್ದು ಕ್ಷೇತ್ರಕ್ಕೆ ಭರಪೂರ ಆದಾಯ ಬಂದಿದೆ.

ಕಾರ್ತಿಕ ಮಾಸದ ಕಡೇ 4 ದಿನಗಳಾದ ಶನಿವಾರ, ಭಾನುವಾರ, ಸೋಮವಾರ ಹಾಗೂ ಮಂಗಳವಾರದಂದು ಒಂದು ಲಕ್ಷ ಮಂದಿಗೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟ ಹಿನ್ನೆಲೆ 1.38 ಕೋಟಿ ರೂ.ಆದಾಯ ಬಂದಿದೆ.

ಡಿ.9 ರಿಂದ 12 ರ ನಡುವೆ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹುಲಿ ವಾಹನ ,ರುದ್ರಾಕ್ಷಿ ವಾಹನ ಬಸವ ಮಂಟಪ, ಲಾಡು ಮಾರಾಟ, ವಿವಿಧ ಸೇವೆಗಳು ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು, ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟ ಭವನಗಳು, ಪಾರ್ಕಿಂಗ್, ಕಲ್ಲುಸಕ್ಕರೆ ,ತೀರ್ಥ, ಬ್ಯಾಗ್ ಮಾರಾಟದಿಂದ 1,38,50,311 ರೂ ಆದಾಯ ಬಂದಿದೆ ಎಂದು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದು: ಗ್ರಾಮಕ್ಕೆ ತೆರಳಲು ಬಸ್ ಇಲ್ಲದೆ ವಿದ್ಯಾರ್ಥಿಗಳ ಗೋಳಾಟ

ನಾಲ್ಕು ದಿನಗಳ ಅವಧಿಯಲ್ಲಿ 1162 ಚಿನ್ನದ ರಥೋತ್ಸವ, 42 ಬೆಳ್ಳಿ ರಥೋತ್ಸವ, 555 ಬಸವ ವಾಹನ, 3771 ಹುಲಿ ವಾಹನ, 234 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಕೆ ಮೂಲಕ ಅಮಾವಾಸ್ಯೆ ದಿನದಂದು 49,63,203 ರೂ. ಆದಾಯ ಬಂದಿದ್ದರೇ ಕಾರ್ತಿಕ ಮಾಸದ ಕಡೇ ಸೋಮವಾರ ಒಂದೇ ದಿನ 53,26,156 ರೂ. ಹಣ ಹರಿದು ಬಂದಿದೆ. ಶನಿವಾರದಂದು 12 ಲಕ್ಷ, ಭಾನುವಾರ 23 ಲಕ್ಷ ಆದಾಯ ಬಂದಿದ್ದು ಹುಂಡಿ ಎಣಿಕೆ ಹೊರತುಪಡಿಸಿದ ಆದಾಯ ಇದಾಗಿದೆ.

ಕಾರ್ತಿಕ ಮಾಸದ ಸಡಗರ ಯಶಸ್ವಿ: 

ನವೆಂಬರ್ 20 ರಿಂದ ಡಿಸೆಂಬರ್ 11ರವರೆಗೆ ಕ್ಷೇತ್ರದಲ್ಲಿ ನಡೆದ ಕಾರ್ತಿಕ ಮಾಸದ ವಿಶೇಷ ಪೂಜೆಗಳು ಯಾವುದೇ ತೊಂದರೆಯಾಗದಂತೆ ಯಶಸ್ವಿಯಾಗಿ ಪೂರ್ಣಗೊಂಡಿದೆ.ಕಡೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ಪೂಜೆ ಹಿನ್ನೆಲೆ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದ ಹಿನ್ನೆಲೆ ಪ್ರಾಧಿಕಾರವು ಭಕ್ತರಿಗೆ ಬೇಕಾದ ಕುಡಿಯುವ ನೀರು, ವಿಶೇಷ ದಾಸೋಹ, ನೆರಳಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿದ್ದರು.

ಇದನ್ನೂ ಓದು: ಆಂಧ್ರಪ್ರದೇಶದ ಅನಂತಪುರದಲ್ಲಿ ಪತ್ತೆಯಾದ ವೀರೇಶ್‌

ಕಾರ್ತಿಕ ಮಾಸ ಪೂಜಾ ಮಹೋತ್ಸವ ಮುಗಿದಿದ್ದು ಡಿಸೆಂಬರ್ 17ರಿಂದ ಧನುರ್ಮಾಸ ಪೂಜಾ ಪ್ರಾರಂಭವಾಗುರುವುದರಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಓಂ ಶಕ್ತಿ, ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಈ ಸಂಬಂಧ ಕಾರ್ಯದರ್ಶಿ ಸರಸ್ವತಿ ಪ್ರತಿಕ್ರಿಯೆ ಕೊಟ್ಟಿದ್ದು, ಕಡೆಯ ಕಾರ್ತಿಕ ಸೋಮವಾರ ಹಾಗೂ ಅಮಾವಾಸ್ಯೆ ಪೂಜೆಗೆ ಲಕ್ಷಾಂತರ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರು. ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಮುಂಜಾಗ್ರತ ಕ್ರಮವಾಗಿ ಕಲ್ಪಿಸಿದ್ದ ಹಿನ್ನೆಲೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆ ಪೂಜೆ ಯಶಸ್ವಿಯಾಗಿ ಜರುಗಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕಾರ್ತಿಕ ಮಾಸದಲ್ಲಿ ಮಲೆ ಮಹದೇಶ್ವರನಿಗೆ ಭಕ್ತರು ಭರಪೂರ ಕಾಣಿಕೆ, ಸೇವೆಗಳನ್ನು ಸಲ್ಲಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News