ಕಡೇ ಶ್ರಾವಣ ಶನಿವಾರ ಸಂಭ್ರಮ: ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತಸಾಗರ

Himavad Gopalaswamy Hill: ಕಡೇ ಶ್ರಾವಣದ ಶನಿವಾರ ಪ್ರಯುಕ್ತ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಭಟ್ಟರು ಗೋಪಾಲಸ್ವಾಮಿಗೆ ವಿವಿಧ ಬಗೆಯ ಹೂವು ಹಾಗೂ ತುಳಿಸಿಯಿಂದ ವಿಶೇಷ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಿದರು.

Written by - Zee Kannada News Desk | Last Updated : Aug 31, 2024, 07:03 PM IST
  • ನಾಲ್ಕನೇ ಹಾಗೂ ಕೊನೆ ಶ್ರಾವಣ ಶನಿವಾರ ಪ್ರಯುಕ್ತ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತಸಾಗರ
  • ಗುಂಡ್ಲುಪೇಟೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರ ಸಂಭ್ರಮ
  • ಗೋಪಾಲನ ದರ್ಶನ ಪಡೆದು ಪುನೀತರಾದ ಸಾವಿರಾರು ಭಕ್ತರು
ಕಡೇ ಶ್ರಾವಣ ಶನಿವಾರ ಸಂಭ್ರಮ: ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತಸಾಗರ title=
ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತಸಾಗರ

ಚಾಮರಾಜನಗರ: ನಾಲ್ಕನೇ ಹಾಗೂ ಕಡೇ ಶ್ರಾವಣ ಶನಿವಾರ ಪ್ರಯುಕ್ತ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಭಕ್ತಾದಿಗಳು ಆಗಮಿಸಿ ಗೋಪಾಲನ ದರ್ಶನ ಪಡೆದಿದರು.

ಶ್ರಾವಣ ಮಾಸದ ಕೊನೆ ಶನಿವಾರವಾದ ಹಿನ್ನಲೆ ಗುಂಡ್ಲುಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಿಂದ ಬೆಟ್ಟಕ್ಕೆ ತೆರಳಲು ಸುಮಾರು 25ಕ್ಕೂ ಅಧಿಕ ಬಸ್‍ಗಳನ್ನು ನಿಯೋಜನೆ ಮಾಡಲಾಗಿತ್ತು. ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಊಟಿ, ಕೇರಳ ಕಡೆಯಿಂದ ಸಾವಿರಾರು ಮಂದಿ ಭಕ್ತಾದಿಗಳು ಆಗಮಿಸಿದ್ದರು. ಬೆಳಗ್ಗೆ 10 ಗಂಟೆಯಿಂದಲೇ ಅಧಿಕ ಭಕ್ತರು ಭೇಟಿ ನೀಡಿದ್ದ ಕಾರಣ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕಿ.ಮೀಗಟ್ಟಲೇ ದೂರದವರೆಗೆ ಜನರು ಸಾಲುಗಟ್ಟಿ ಗಂಟೆಗಟ್ಟಲೇ ನಿಂತು ಟಿಕೆಟ್ ಖರೀದಿಸಿ ಬೆಟ್ಟಕ್ಕೆ ತೆರಳಿದರು.

ಇದನ್ನೂ ಓದಿ: ಒಪ್ಪಂದ ಪಾಲಿಸದ ಬಿಲ್ಡರ್ ಗೆ ಶೇ 8 ರಂತೆ ಬಡ್ಡಿ ಸಮೇತ 16,60,000/- ರೂ ಕೊಡಲು ಕೋರ್ಟ್ ಆದೇಶ

ಗೋಪಾಲಸ್ವಾಮಿ ಬೆಟ್ಟಕ್ಕೆ 12 ಗಂಟೆ ವೇಳೆಗೆ ಅಧಿಕ ಮಂದಿ ಭಕ್ತರು ಆಗಮಿಸಿದ್ದ ಕಾರಣ ಜನಜಂಗುಳಿ ಹೆಚ್ಚಿನ ರೀತಿಯಲ್ಲಿ ಕಂಡು ಬಂತು. ಇದರಿಂದ ದೇವಸ್ಥಾನದ ಸುತ್ತಲು ಎರಡು ಸಾಲಿನಲ್ಲಿ ಭಕ್ತರು ಗಂಟೆಗಟ್ಟಲೇ ನಿಂತು ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು. ವಾತಾವರಣ ತಣ್ಣಗಿದ್ದ ಕಾರಣ ಹೆಚ್ಚಿನ ಸಮಸ್ಯೆಯಾಗಲಿಲ್ಲ.

ವಿಶೇಷ ಅಲಂಕಾರ: ಕಡೇ ಶ್ರಾವಣದ ಶನಿವಾರ ಪ್ರಯುಕ್ತ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಭಟ್ಟರು ಗೋಪಾಲಸ್ವಾಮಿಗೆ ವಿವಿಧ ಬಗೆಯ ಹೂವು ಹಾಗೂ ತುಳಿಸಿಯಿಂದ ವಿಶೇಷ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಿದರು. ಸಾಲಿನಲ್ಲಿ ಬಂದ ಭಕ್ತಾದಿಗಳು ದೇವರಿಗೆ ಮಾಡಿದ ಅಲಂಕಾರ ಕಣ್ತುಂಬಿಕೊಂಡರು.

ಖಾಸಗಿ ವಾಹನಗಳಿಗೂ ಬೇಡಿಕೆ: ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ಸ್ಥಳೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹಂಗಳ ಗ್ರಾಮಕ್ಕೆ ಆಗಮಿಸಿದ್ದರು. ಇವರು ಆಟೋ, ಟೆಂಪೊಗಳಲ್ಲಿ ತಪ್ಪಿಲಿಗೆ ತೆರಳಿದ್ದ ಕಾರಣ ಖಾಸಗಿ ವಾಹನಗಳಿಗೂ ಬೇಡಿಕೆ ಹೆಚ್ಚಾಗಿತ್ತು.

ಇದನ್ನೂ ಓದಿ: ಜನರಿಗೆ ಸಿದ್ದರಾಮಯ್ಯ ಹೆಚ್ಚು ಪ್ರೀತಿ ಗೌವರ ತೋರಿಸಿದ್ದಾರೆ

ಸೆಲ್ಫಿ ಮೊರೆಹೋದ ಮಂದಿ: ಗೋಪಾಲಸ್ವಾಮಿ ಬೆಟ್ಟದಲ್ಲಿ ಶನಿವಾರ ಬೆಳಗ್ಗೆಯಿಂದಲೂ ಹಿಮ ಹೆಚ್ಚಿದ್ದ ಕಾರಣ ಚಳಿಯ ವಾತಾವರಣ ನಿರ್ಮಾಣವಾಗಿತ್ತು. ಜೊತೆಗೆ ಸುತ್ತಲ ಪರಿಸರವೆಲ್ಲ ಅಚ್ಚ ಹಸಿರಿನಿಂದ ಕೂಡಿದ್ದ ಕಾರಣ ಜನರು ಕುಟುಂಬ ಸಮೇತರಾಗಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಜೊತೆಗೆ ಸೆಲ್ಫಿ ಮೊರೆ ಹೋಗಿ ಸಂಭ್ರಮಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News