ಬೆಂಗಳೂರು: ಧಾರ್ಮಿಕ‌ ಕೇಂದ್ರಗಳು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ನಿಷೇಧಿತ ಅವಧಿಯಲ್ಲಿ ಧ್ವನಿವರ್ಧಕ ಬಳಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ‌ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಹೈಕೋರ್ಟ್ (Highcourt) ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಮುಂಜಾನೆ ಹಾಗೂ ರಾತ್ರಿ ಅವಧಿಯಲ್ಲಿ ಮೈಕ್ ಬಳಸುತ್ತಿರವವರಿಗೆ 200 ಕ್ಕಿಂತ ಹೆಚ್ಚು ಮಂದಿಗೆ ನೊಟೀಸ್ ನೀಡಲಾಗಿದೆ. ಆದಾಗ್ಯೂ ಕಾನೂನು ಉಲ್ಲಂಘಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ (Kamal Pant) ತಿಳಿಸಿದ್ದಾರೆ.


ಇದನ್ನೂ ಓದಿ- ‘ನಾನು ಕೇಸರಿ ಟವಲ್ ಹಾಕಿ ಬರುತ್ತೇನೆ, ಬನ್ನಿ ಬಡವರನ್ನು ರಕ್ಷಿಸೋಣ’


ಈಗಾಗಲೇ 6 ತಿಂಗಳ ಹಿಂದೆ ಹೈಕೋರ್ಟ್ (Highcourt) ಆದೇಶಿಸಿದೆ‌. ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮಸೀದಿ, ಮಂದಿರ ಸೇರಿದಂತೆ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ (Religion Places) ನೋಟಿಸ್ ನೀಡಲಾಗಿದೆ. ಮಸೀದಿ ಮಂದಿರ ಅಲ್ಲ, ಕಾರ್ಖಾನೆಗಳಿಗೆ, ಪಬ್ ಗಳಿಗೆ ಕೂಡ ನೋಟೀಸ್ ನೀಡಿದ್ದಾರೆ. ಅಲ್ಲದೆ ಧರ್ಮ ಮುಖಂಡರ ಜೊತೆ ಸಭೆ ನಡೆಸಲಾಗಿದೆ‌. ಅವರಿಗೂ ಮಾರ್ಗದರ್ಶನ ನೀಡಲಾಗಿದೆ. ಅದರಂತೆ ಧರ್ಮಗುರುಗಳು ನಡೆದುಕೊಂಡಿದ್ದಾರೆ ಎಂದವರು ಮಾಹಿತಿ ನೀಡಿದರು.


ಇದನ್ನೂ ಓದಿ- #LuckyDipCMHDK ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಮಾತ್ರ ಅವಕಾಶ: ಬಿಜೆಪಿ


ಹೈಕೋರ್ಟ್ ಆದೇಶ ಪ್ರಕಾರ ಎಲ್ಲರೂ ಪಾಲನೆ ಮಾಡಲೇಬೇಕು. ‌ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಆಗುತ್ತೆ. ನಿಯಮ ಉಲ್ಲಂಘಿಸಿದ ಧಾರ್ಮಿಕ ಕೇಂದ್ರಗಳಲ್ಲಿ ಈಗಾಗಲೇ ಮೈಕ್ ಗಳನ್ನು ಜಪ್ತಿ ಮಾಡಲಾಗಿದೆ.‌ ಒಂದು ವೇಳೆ  ನಿ‌ಯಮ ಉಲ್ಲಂಘಿಸಿ ಬಾಲ ಬಿಚ್ಚಿದ್ರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು‌ ಎಂದು ಎಚ್ಚರಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.