Leopard Burnt: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಯಡವಟ್ಟಿನಿಂದ ಚಿರತೆ ಸುಟ್ಟ ಕರಕಲಾಗಿದೆ.
ಮದ್ಲೇಹಳ್ಳಿಯಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಅರಣ್ಯ ಇಲಾಖೆ ಗ್ರಾಮದ ಸರ್ವೇನಂಬರ್ 10ರಲ್ಲಿ ನಾರಾಯಣಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿತ್ತು. ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೆರೆಯಾಗಿದೆ. ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಬೋನಿನಲ್ಲಿ ಇಟ್ಟಿದ್ದ ಚಿರತೆ ಹೊರಹೋಗಲಾಗದೆ ಬೆಂಕಿ ಕೆನ್ನಾಲಿಗೆಯಿಗೆ ಹುಸಿರುಕಟ್ಟಿ ಸಾವನ್ನಪ್ಪಿದೆ.
ಇದನ್ನೂ ಓದಿ- ಡಿಕೆ ಶಿವಕುಮಾರ್ ಸಿಎಂ ಸ್ಥಾನದ ಬಗ್ಗೆ: ಮತ್ತೆ ಮುನ್ನಲೆಗೆ ಬಂದ ಮೂಲ vs ವಲಸಿಗ ಫೈಟ್!
ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆ.ಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಸಿದ್ದರಾಮಯ್ಯನವರ ಮೌನ ಸ್ಟ್ರಾಟರ್ಜಿ: ಅಧಿಕಾರ ಹಂಚಿಕೆ ಚರ್ಚೆಯಲ್ಲಿ ತಟಸ್ಥ ನಿಲುವು
ಚಿರತೆ ಮರಣೋತ್ತರ ಪರೀಕ್ಷೆ ನಂತರ ಚಿರತೆ ಕಳೆಬರ, ವಿಲೇವಾರಿ ಮಾಡಲಾಗಿದ್ದು, ಅರಣ್ಯ ಇಲಾಖೆ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ,ಅರಣ್ಯ ಇಲಾಖೆ ಬೋನ್ ಇಟ್ಟಿದೆ ಆದರೆ ಬೋನಿನಲ್ಲಿ ಚಿರತೆ ಬಿದ್ದಿರುವ ಬಗ್ಗೆ ಮಾಹಿತಿ ಕಲೆಹಾಕಲು ವಿಫಲವಾದ ಹಿನ್ನೆಲೆ ಚಿರತೆ ಸಾವು ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









