ಅಫ್ಜಲಪುರದಲ್ಲಿ ಗುತ್ತೇದಾರ್ ಗೆದ್ದು ತೋರಿಸಲಿ: ಪ್ರಿಯಾಂಕ್ ಖರ್ಗೆ

ಅಫ್ಜಲಪುರ ಕ್ಷೇತ್ರದಲ್ಲಿ ಮಾಲಿಕಯ್ಯ ಗುತ್ತೇದಾರ್ ಗೆದ್ದು ತೋರಿಸಲಿ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಹಾಗೂ ಸಂಸದ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

Last Updated : Apr 11, 2018, 11:03 AM IST
ಅಫ್ಜಲಪುರದಲ್ಲಿ ಗುತ್ತೇದಾರ್ ಗೆದ್ದು ತೋರಿಸಲಿ: ಪ್ರಿಯಾಂಕ್ ಖರ್ಗೆ title=

ಕಲಬುರ್ಗಿ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅಫ್ಜಲಪುರ ಕ್ಷೇತ್ರದಲ್ಲಿ ಮಾಲಿಕಯ್ಯ ಗುತ್ತೇದಾರ್ ಗೆದ್ದು ತೋರಿಸಲಿ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಹಾಗೂ ಸಂಸದ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಫ್ಜಲಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಲೀಕಯ್ಯ ಗುತ್ತೇದಾರ್ ತಮ್ಮನ್ನು ಒಬ್ಬ ಬಚ್ಚಾ ಎಂದು ಕರೆದಿದ್ದರು. ಆದರೆ, ಬಚ್ಚಾ ಯಾರು ಎಂಬುದನ್ನು ಮತದಾರರು ನಿರ್ಧರಿಸುತ್ತಾರೆ. ಅಲ್ಲದೆ, ಈ ಚುನಾವಣೆಯಲ್ಲಿ ಅಪ್ಪ-ಮಗನನ್ನು ಸೋಲಿಸುತ್ತೇನೆ ಎಂದು ಹೇಳಿದ್ದರು. ನಾನು ಆ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುತ್ತೇನೆ. ಅಲ್ಲಿ ಗುತ್ತೇದಾರ್ ಗೆದ್ದು ತೋರಿಸಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು. 

ಚಿತ್ತಾಪುರ ಕ್ಷೇತ್ರದಿಂದಲೇ ಸ್ಪರ್ಧಿಸುವೆ
ಪ್ರಿಯಾಂಕ್ ಖರ್ಗೆ ಅವರನ್ನು ಕಲಬುರ್ಗಿ ಗ್ರಾಮಾಂತರ ಕ್ಷೇತ್ರಕ್ಕೆ ಶಿಫ್ಟ್ ಮಾಡಿ, ಕಲಬುರ್ಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಚಿತ್ತಾಪುರ ಕ್ಷೇತ್ರದಿಂದ ಸ್ಪರ್ದಿಸಲಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಗಾಳಿ ಸುದ್ದಿ ಅಷ್ಟೇ. ಮತದಾರರಲ್ಲಿ ಗೊಂದಲ ಮೂಡಿಸಲು ಬಿಜೆಪಿ ಈ ರೀತಿ ಸುದ್ದಿ ಹಬ್ಬಿಸುತ್ತಿದೆ. ಆದರೆ ತಾವು ಚಿತ್ತಾಪುರ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

Trending News