ಬೆಂಗಳೂರು: ಭ್ರಷ್ಟಾಚಾರ ಮಾಡಲೆಂದೇ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಖಾಸಗೀಕರಣ ಮಾಡಲು ಸಚಿವರು, ಶಾಸಕರು ಮುಂದಾಗಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ನೀವು ಇದನ್ನು ನೋಡಿಕೊಂಡು ಸುಮ್ಮನೆ ಇದ್ದರೆ ಮುಡಾ ಹಗರಣದಂತೆ ಬಿಡಿಎ ಕಾಂಪ್ಲೆಕ್ಸ್ ಹಗರಣ ಕೂಡ ನಿಮ್ಮ ಕೊರಳಿಗೆ ಸುತ್ತಿಕೊಳ್ಳಲಿದ್ದು ಯಾವುದೇ ಕಾರಣಕ್ಕೂ ಬಿಡಿಎ ಕಾಂಪ್ಲೆಕ್ಸ್‌ಗಳ ಖಾಸಗೀಕರಣಕ್ಕೆ ಅವಕಾಶ ಕೊಡಬೇಡಿ ಎಂದು ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು. 


COMMERCIAL BREAK
SCROLL TO CONTINUE READING

ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ 'ಬಿಡಿಎ ಕಾಂಪ್ಲೆಕ್ಸ್ ಉಳಿಸಿ ನಾಗರಿಕ ಪ್ರತಿರೋಧ ಸಮಾವೇಶ'ದಲ್ಲಿ ಭಾಗವಹಿಸಿ ಮಾತನಾಡಿದ ಡಾ. ಮುಖ್ಯಮಂತ್ರಿ ಚಂದ್ರು, 2008ರಿಂದ ಈ ಗುತ್ತಿಗೆ ವ್ಯವಹಾರ ಆರಂಭವಾಗಿದೆ. ಇಂದಿರಾನಗರದಲ್ಲಿ ಮೊದಲು ಬಿಡಿಎ ಆಸ್ತಿಯನ್ನು ಗುತ್ತಿಗೆ ನೀಡಲಾಯಿತು. ಕಿಕ್‌ಬ್ಯಾಕ್‌ ಪಡೆಯುವುದರಲ್ಲಿ ಹೆಚ್ಚು ಕಡಿಮೆಯಾಗಿ, ಟೆಂಡರ್ ಕರೆಯುವುದು ರದ್ದು ಮಾಡುವುದು ಮಾಡಿದ್ದಾರೆ. ಈಗ ಗುತ್ತಿಗೆ ಹೆಸರಿನಲ್ಲಿ7 ಕಾಂಪ್ಲೆಕ್ಸ್‌ಗಳನ್ನು ಖಾಸಗಿಯವರಿಗೆ ನೀಡಲು ಹೊರಟಿದೆ ಎಂದರು. 


ಇದನ್ನೂ ಓದಿ- ಸಿದ್ಧು ಸರ್ಕಾರದ ವಿರುದ್ಧ ಸಿ.ಟಿ.ರವಿ ಹೊಸ ಬಾಂಬ್: ದೀಪಾವಳಿಯೊಳಗೆ ಸರ್ಕಾರ ಡಮಾರ್..!


2020ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಗುತ್ತಿಗೆ ಕೊಡುವುದನ್ನು ತಡೆ ಹಿಡಿಯಲಾಗಿದೆ. ಹ್ಯಾರಿಸ್‌ ಅವರಿಗೆ ಸಂಬಂಧಪಟ್ಟ ಒಂದು ಕಂಪನಿ, ಗರುಡಾಚಾರ್ ಅವರಿಗೆ ಸಂಬಂಧಪಟ್ಟ ಕಂಪನಿಗೆ ಗುತ್ತಿಗೆ ಕೊಡಲು ಹೊರಟಿದೆ. 65 ರಷ್ಟು ಖಾಸಗಿಯವರಿಗೆ 35 ಬಿಡಿಎಗೆ ಎಂದು ಹೇಳಲಾಗಿದೆ. ಮೊದಲ 30 ವರ್ಷ ಒಪ್ಪಂದ ಮುಗಿದ ಬಳಿಕ ಮತ್ತೆ 30 ವರ್ಷ ಕೊಡಬಹುದು ಎಂದು ಹೇಳಲಾಗಿದೆ. ಅಂದರೆ ಕಡಿಮೆ ಹಣದಲ್ಲಿ ಹೆಚ್ಚಿನ ಆಸ್ತಿಯನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರು ಇನ್ನೂ ಸುಮ್ಮನಿದ್ದರೆ ಈ ಹಗರಣ ಕೂಡ ನಿಮ್ಮ ತಲೆಗೆ ಬರುತ್ತದೆ ಎಂದು ಎಚ್ಚರಿಕೆ ನೀಡಿದರು. 


ಸಿ.ಟಿ.ರವಿ ಅವರದ್ದು ಬುರುಡೆ ಮಾತು: ಶಾಸಕ ಸಿ.ಪುಟ್ಟರಂಗಶೆಟ್ಟಿ ಕಿಡಿ


ಸಮಾಜ ಪರಿವರ್ತನಾ ಸಮುದಾಯ ಸಂಚಾಲಕ ಎಸ್‌.ಆರ್‌.ಹಿರೇಮಠ ಮಾತನಾಡಿ, ಬಿಡಿಎಯಿಂದ ಜನಸಾಮಾನ್ಯರಿಗೆ ಅನುಕೂಲ ಇಲ್ಲ ಎಂದಾದರೆ ಅದು ಏಕೆ ಇರಬೇಕು ಮುಚ್ಚಿಬಿಡಿ. ಬಡವರಿಗೆ ಕಡಿಮೆ ಬೆಲೆಗೆ ಸೈಟು ಕೊಡಬೇಕು ಎಂದು ಲೇಔಟ್ ಮಾಡುತ್ತಾರೆ. ನಾಡಪ್ರಭು ಕೆಂಪೇಗೌಡ ಲೇಔಟ್ ಮಾಡಿ ಒಂದು ಸೈಟು 24 ಲಕ್ಷ ರೂಪಾಯಿಗಳಂತೆ 25 ಸಾವಿರ ಸೈಟುಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಿದ್ದಾರೆ. ಇದರಲ್ಲಿ ಬರುವ ಸಾವಿರಾರು ಕೋಟಿ ರೂಪಾಯಿ ಹಣ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು. 


ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್, ಎಎಪಿ ಮುಖಂಡ ಅನಿಲ್ ನಾಚಪ್ಪ, ಬಿಡಿಎ ಕಾಂಪ್ಲೆಕ್ಸ್ ಹೋರಾಟ ಸಮಿತಿ ಮುಖ್ಯಸ್ಥ ಆರ್. ನಾಗೇಶ್, ಸಂಚಾಲಕ ಲಿಂಗರಾಜು, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ್, ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಬಿ.ಎನ್. ಮಂಜುನಾಥ್, ರಾಜ್ಯ ಸಮಿತಿ ಮುಖ್ಯಸ್ಥೆ ಗೌರಮ್ಮ, ಕರವೇ ಗಜಸೇನೆ ರಾಜ್ಯಾಧ್ಯಕ್ಷ ತಾಯ್ನಾಡು ರಾಘವೇಂದ್ರ, ದಲಿತ ಸೇವಾ ಸಂಘದ ರಾಜ್ಯಾಧ್ಯಕ್ಷ ಎಂ. ಚಂದ್ರಪ್ಪ, ಬಹುಜನ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಆರ್.ಎನ್‌.ಎಂ.ರಮೇಶ್ ಭಾಗವಹಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.