ಚುನಾವಣಾ ಚೆಕ್ ಪೋಸ್ಟ್: ಬಿಸಿಲಿಗೆ ಬೆಂಡಾದ ಚುನಾವಣಾ ಸಿಬ್ಬಂದಿ

ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದಿಸಲಾಗುತ್ತಿದೆ

Written by - Yashaswini V | Last Updated : Mar 21, 2024, 12:12 PM IST
  • ಗುಂಡ್ಲುಪೇಟೆ ತಾಲೂಕು ಕೇರಳ ಹಾಗೂ ತಮಿಳುನಾಡು ಎರಡು ರಾಜ್ಯಗಳ ಗಡಿ ಹಂಚಿಕೊಂಡಿರುವ ಹಿನ್ನೆಲೆ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿವೆ.
  • ಪ್ರಸ್ತುತ ಲೋಕಸಭಾ ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿರುವ ಹಿನ್ನಲೆ ಮದ್ದೂರು ಮತ್ತು ಕೆಕ್ಕನಹಳ್ಳ ತನಿಖಾ ಠಾಣೆಗಳಲ್ಲಿ ತಪಾಸಣೆ ಕಾರ್ಯ ಚುರುಕುಗೊಂಡಿದೆ.
  • ಈ ಮಧ್ಯೆ ತಮಿಳುನಾಡು ಮತ್ತು ಕೇರಳದಿಂದ ಗುಂಡ್ಲುಪೇಟೆ ಪ್ರವೇಶಿಸುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ.
ಚುನಾವಣಾ ಚೆಕ್ ಪೋಸ್ಟ್: ಬಿಸಿಲಿಗೆ ಬೆಂಡಾದ ಚುನಾವಣಾ ಸಿಬ್ಬಂದಿ title=

ಚಾಮರಾಜನಗರ: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ಮದ್ದೂರು ಮತ್ತು ಕೆಕ್ಕನಹಳ್ಳ ಚೆಕ್ ಪೋಸ್ಟ್ ನಲ್ಲಿ ಕಟ್ಟುನಿಟ್ಟಿನ ತಪಾಸಣೆ ಆರಂಭಿಸಿದ್ದು, ಕೇರಳ-ತಮಿಳುನಾಡಿನಿಂದ ಗುಂಡ್ಲುಪೇಟೆ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಗುಂಡ್ಲುಪೇಟೆ ತಾಲೂಕು ಕೇರಳ ಹಾಗೂ ತಮಿಳುನಾಡು ಎರಡು ರಾಜ್ಯಗಳ ಗಡಿ ಹಂಚಿಕೊಂಡಿರುವ ಹಿನ್ನೆಲೆ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿವೆ. ಪ್ರಸ್ತುತ ಲೋಕಸಭಾ ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿರುವ ಹಿನ್ನಲೆ ಮದ್ದೂರು ಮತ್ತು ಕೆಕ್ಕನಹಳ್ಳ ತನಿಖಾ ಠಾಣೆಗಳಲ್ಲಿ ತಪಾಸಣೆ ಕಾರ್ಯ ಚುರುಕುಗೊಂಡಿದೆ. ಈ ಮಧ್ಯೆ ತಮಿಳುನಾಡು ಮತ್ತು ಕೇರಳದಿಂದ ಗುಂಡ್ಲುಪೇಟೆ ಪ್ರವೇಶಿಸುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ.

ಇದನ್ನೂ ಓದಿ- Lok Sabha Election 2024: ಲೋಕಸಭೆ ಚುನಾವಣೆಗೆ 21 ರಾಜ್ಯಗಳ 102 ಸ್ಥಾನಗಳಿಗೆ  ನಾಮಪತ್ರ ಸಲ್ಲಿಕೆ ಆರಂಭ

ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದಿಸಲಾಗುತ್ತಿದೆ

ಇದನ್ನೂ ಓದಿ- Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ

ಲೋಕಸಭಾ ಚುನಾವಣೆ ಹಿನ್ನೆಲೆ ತಪಾಸಣೆಗಾಗಿ ಮದ್ದೂರು ಪೊಲೀಸ್ ಚೆಕ್ ಪೋಸ್ಟ್ ಬಳಿ ನಿಯೋಜಿಸಿರುವ ಸಿಬ್ಬಂದಿಗಳಿಗೆ ತಾಲೂಕು ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದ್ದು, ತನಿಖಾ ಠಾಣಾ ಮುಂಭಾಗ ಪೆಂಡಲ್ ವ್ಯವಸ್ಥೆಯಿಲ್ಲದೆ ಮರದ ನೆರಳಿನ ಆಶ್ರಯದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಆದ್ದರಿಂದ ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕೆಂದು ಹೆಸರೇಳಲಿಚ್ಛಿಸದ ಸಿಬ್ಬಂದಿಯೊಬ್ಬರು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News