Lok Sabha Election 2024: ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಚೆಕ್‍ಪೋಸ್ಟ್‍ಗಳಲ್ಲಿ ಬಿಗಿಭದ್ರತೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಬುಧವಾರದಂದು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 472.01 ಲೀಟರ್ (ಅಂದಾಜು ರೂ.1,85,378 ಮೌಲ್ಯ) ಮದ್ಯ, 26.33 ಕೆ.ಜಿ. ಬೆಳ್ಳಿ (ರೂ.7,37,240 ಬೆಲೆ) ಮತ್ತು ಸೂಕ್ತ ದಾಖಲೆಯಿಲ್ಲದ ರೂ.3,55,500 ನಗದು ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಅದೇ ರೀತಿಯಾಗಿ 12,000 ಕೆ.ಜಿ (ರೂ.4956500 ಮೌಲ್ಯದ) ಮೈಲ್ಡ್ ಸ್ಟೀಲ್ ಸ್ಕ್ರ್ಯಾಪ್ ಮತ್ತು 2 ವಾಹನಗಳನ್ನು (ರೂ.40 ಸಾವಿರ ಬೆಲೆಯ) ಜಪ್ತಿ ಮಾಡಲಾಗಿದೆ.


ಇದನ್ನೂ ಓದಿ:  Arundhathi Nair: ಸಾವು ಬದುಕಿನ ನಡುವೆ ಹೋರಾಡುತ್ತಿರುವ ಖ್ಯಾತ ನಟಿ!


ಅಬಕಾರಿ ಪೊಲೀಸ್ ವತಿಯಿಂದ 378.41 ಲೀಟರ್ (ರೂ.140698 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 93.60 ಲೀಟರ್ (ರೂ.44680 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟು 32 ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ನಾನು ಸಭಾಪತಿ ಇದ್ದಾಗಲೇ 11 ಜನರ ರಾಜೀನಾಮೆ: ಮತ್ತೊಂದು ಸ್ಪೋಟಕ ಮಾಹಿತಿ ನೀಡಿದ ಹೊರಟ್ಟಿ


ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸ್ಕಾಡ್, 24 ಎಸ್‍ಎಸ್‍ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ