Lok Sabha Election 2024: ಕಾಂಗ್ರೆಸ್ ಪರಿವಾರ್ ವಾದ:17 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ; ಮಕ್ಕಳು, ಅಳಿಯಂದಿರಿಗೆ ಮಣೆ!

2024ರ ಲೋಕಸಭೆ ಚುನಾವಣೆಯ 17 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಸಚಿವರ ಮಕ್ಕಳು, ಕುಟುಂಬದವರಿಗೆ ಈ ಬಾರಿ ಸಿಕ್ಕಿದೆ.

Written by - Prashobh Devanahalli | Edited by - Manjunath N | Last Updated : Mar 21, 2024, 11:32 PM IST
  • ಇನ್ನು ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಬಹುತೇಕ ಖಚಿತವಾಗಿದ್ದು ನಾಳೆ ಮತ್ತೊಂದು ಪಟ್ಟಿ ಬಿಡುಗಡೆ ಆಗಬಹುದು ಎಂದು ಅಂದಾಜಿಸಲಾಗಿದೆ
  • ಈ ಪೈಕಿ ಬಳ್ಳಾರಿ ಕ್ಷೇತ್ರದಿಂದ ಶಾಸಕ ತುಕಾರಾಂ, ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯ ಹೆಸರು ಅಂತಿಮವಾಗಿದೆ
  • ಚಾಮರಾಜನಗರದಿಂದ ಸುನಿಲ್ ಬೋಸ್ ಹೆಸರು ಅಂತಿಮಗೊಳ್ಳುವುದು ಬಹುತೇಕ ಖಚಿತವಾಗಿದ್ದು
Lok Sabha Election 2024: ಕಾಂಗ್ರೆಸ್ ಪರಿವಾರ್ ವಾದ:17 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ; ಮಕ್ಕಳು, ಅಳಿಯಂದಿರಿಗೆ ಮಣೆ! title=

ಬೆಂಗಳೂರು: 2024ರ ಲೋಕಸಭೆ ಚುನಾವಣೆಯ 17 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಸಚಿವರ ಮಕ್ಕಳು, ಕುಟುಂಬದವರಿಗೆ ಈ ಬಾರಿ ಸಿಕ್ಕಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೂ, ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ- Lok Sabha Election 2024: ಲೋಕಸಭೆ ಚುನಾವಣೆಗೆ 21 ರಾಜ್ಯಗಳ 102 ಸ್ಥಾನಗಳಿಗೆ  ನಾಮಪತ್ರ ಸಲ್ಲಿಕೆ ಆರಂಭ

ಕುಟುಂಬ ಮೊದಲು?

ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ, ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಲೋಕಸಭೆ ಟಿಕೆಟ್ ಪಡೆದು ಕಾರ್ಯಕರ್ತರಿಗೆ ಮಣೆ ಬದಲು ಪ್ರಭಾವಿ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ- Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ

ಶುಕ್ರವಾರ ಮತ್ತೊಂದು ಪಟ್ಟಿ ಸಾಧ್ಯತೆ :

ಇನ್ನು ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಬಹುತೇಕ ಖಚಿತವಾಗಿದ್ದು ನಾಳೆ ಮತ್ತೊಂದು ಪಟ್ಟಿ ಬಿಡುಗಡೆ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಪೈಕಿ ಬಳ್ಳಾರಿ ಕ್ಷೇತ್ರದಿಂದ ಶಾಸಕ ತುಕಾರಾಂ, ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯ ಹೆಸರು ಅಂತಿಮವಾಗಿದೆ.ಚಾಮರಾಜನಗರದಿಂದ ಸುನಿಲ್ ಬೋಸ್ ಹೆಸರು ಅಂತಿಮಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಕೋಲಾರ ವಿಚಾರದಲ್ಲಿ ಇನ್ನು ಹೈ ಕಮಾಂಡ್ ನಿರ್ಧಾರ ಕೈಗೊಳ್ಳಬೇಕಿದೆ.

ಎಲ್ಲಿಂದ ಯಾರಿಗೆ?

ಬೆಂಗಳೂರು ಉತ್ತರ : ರಾಜೀವ್ ಗೌಡ
ಬೆಂಗಳೂರು ದಕ್ಷಿಣ : ಸೌಮ್ಯಾರೆಡ್ಡಿ
ಬೆಂಗಳೂರು ಸೆಂಟ್ರಲ್ : ಮನ್ಸೂರ್ ಆಲಿಖಾನ್
ಮೈಸೂರು: ಲಕ್ಮಣ್
ರಾಯಚೂರು: ಕುಮಾರ ನಾಯಕ್
ಕೊಪ್ಪಳ: ರಾಜಶೇಖರ ಹಿಟ್ನಾಳ್
ಬೀದರ್ : ಸಾಗರ್ ಖಂಡ್ರೆ
ದಾವಣಗೆರೆ : ಪ್ರಭಾ ಮಲ್ಲಿಕಾರ್ಜುನ
ಉತ್ತರ ಕನ್ನಡ : ಅಂಜಲಿ ನಿಂಬಾಳ್ಕರ್
ದಕ್ಷಿಣ ಕನ್ನಡ : ಪದ್ಮರಾಜ್
ಚಿತ್ರದುರ್ಗ : ಚಂದ್ರಪ್ಪ
ಕಲಬುರಗಿ : ರಾಧಾಕೃಷ್ಣ
ಧಾರವಾಡ : ವಿನೋದ ಅಸೂಟಿ
ಬಾಗಲಕೋಟೆ : ಸಂಯುಕ್ತ ಪಾಟೀಲ್
ಉಡುಪಿ, ಚಿಕ್ಕಮಗಳೂರು : ಜಯಪ್ರಕಾಶ್ ಹೆಗ್ಡೆ
ಬೆಳಗಾವಿ : ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ : ಪ್ರಿಯಾಂಕ್ ಜಾರಕಿಹೊಳಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News