Lok Sabha Election 2024: ಟಿಕೆಟ್ ಸಿಗದೇ ರೆಬಲ್ ಆದವರು ಯಾರೂ ಎಲ್ಲೂ ಹೋಗಲ್ಲ- ಪ್ರಹ್ಲಾದ ಜೋಶಿ

ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲಾ ಪರಿಹಾರ ಕಾಣುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Written by - Prashobh Devanahalli | Edited by - Manjunath N | Last Updated : Mar 21, 2024, 07:14 PM IST
  • ಮಾಧುಸ್ವಾಮಿ ಅವರ ಜತೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಮಾತನಾಡುತ್ತಿದ್ದಾರೆ.
  • ಈಶ್ವರಪ್ಪ ಅವರೊಂದಿಗೆ ಪಕ್ಷದ ವರಿಷ್ಟರೇ ಮನವೊಲಿಕೆಗೆ ಚರ್ಚೆ ನಡೆಸಿದ್ದಾರೆ.
  • ನಾನೂ ಈ ಹಿಂದೆ ಮಾತನಾಡಿದ್ದೆ. ಭಿನ್ನಮತ ನಿಲ್ಲಲ್ಲ. ಅಂತಿಮವಾಗಿ ಎಲ್ಲಾ ಸುಖಾನಂತ್ಯ ಕಾಣಲಿದೆ
 Lok Sabha Election 2024: ಟಿಕೆಟ್ ಸಿಗದೇ ರೆಬಲ್ ಆದವರು ಯಾರೂ ಎಲ್ಲೂ ಹೋಗಲ್ಲ- ಪ್ರಹ್ಲಾದ ಜೋಶಿ title=

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲಾ ಪರಿಹಾರ ಕಾಣುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಸಂಜೆ ಪತ್ರಕರ್ತರೊಂದಿಗೆ ಮಾತನಾಡಿ,ಕೊಪ್ಪಳದ ಸಂಗಣ್ಣ ಕರಡಿ ಅವರ ಜತೆ ಖುದ್ದು ನಾನೇ ಮಾತನಾಡಿರುವೆ. ಅವರೂ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ-ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಂಡಾಯ ನಿಲ್ಲಲ್ಲ: ಸಂಗಣ್ಣ ಕರಡಿ ಅವರ, ತಾವು ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ. ಬಂಡಾಯ ಸ್ಪರ್ಧೆಯನ್ನೂ  ಮಾಡಲ್ಲ ಎಂಬ ಭರವಸೆ ಕೊಟ್ಟಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸುತ್ತಿದ್ದೇನೆ ಅಷ್ಟೇ ಎಂಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು.

ಮಾಧುಸ್ವಾಮಿ ಜತೆ ಬಿಎಸ್ ವೈ ಮಾತುಕತೆ: ಮಾಧುಸ್ವಾಮಿ ಅವರ ಜತೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಮಾತನಾಡುತ್ತಿದ್ದಾರೆ. ಈಶ್ವರಪ್ಪ ಅವರೊಂದಿಗೆ ಪಕ್ಷದ ವರಿಷ್ಟರೇ ಮನವೊಲಿಕೆಗೆ ಚರ್ಚೆ ನಡೆಸಿದ್ದಾರೆ. ನಾನೂ ಈ ಹಿಂದೆ ಮಾತನಾಡಿದ್ದೆ. ಭಿನ್ನಮತ ನಿಲ್ಲಲ್ಲ. ಅಂತಿಮವಾಗಿ ಎಲ್ಲಾ ಸುಖಾನಂತ್ಯ ಕಾಣಲಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿಸಿಲು ಜೋರು.. ದಾಹ ತಣಿಸುವ ಹಣ್ಣುಗಳ ಬೆಲೆ ತುಸು ಏರಿಕೆ

ಬೆಳಗಾವಿಗೆ ಶೆಟ್ಟರ್ ಫೈನಲ್: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರ ಹೆಸರೇ ಮುಂಚೂಣಿಯಲ್ಲಿದೆ. ದೊಡ್ಡ ಪಕ್ಷ ಎಂದಾಗ ಪರ-ವಿರೋಧಗಳು ಸಹಜ. ಎಲ್ಲದೂ ಸರಿ ಹೋಗಲಿದೆ ಎಂದು ಪ್ರಹ್ಲಾದ ಜೋಶಿ ತಿಳಿಸಿದರು.

ಮಹದಾಯಿ ಹೋರಾಟಗಾರ ಬಂಧನ: ಕೇಸ್ ಕೈಬಿಡಳು ಪ್ರಯತ್ನ:  ಮಹದಾಯಿ ಹೋರಾಟಗಾರ ಕುಜುಬುದ್ದಿನ್ ಖಾಜಿ ಅವರನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿರಬೇಕು. ಏನಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ. ಆದರೆ, ಕೇಸ್ ಕೈಬಿಡಲು ಎಲ್ಲಾ ಪ್ರಯತ್ನ ಮಾಡುತ್ತೇನೆ ಎಂದು ಸಚಿವ ಜೋಶಿ ತಿಳಿಸಿದರು.

ರಾಜ್ಯ ರೈಲ್ವೆ ಪೊಲೀಸರನ್ನು ರಾಜ್ಯ ಸರ್ಕಾರವೇ ನೇಮಕ ಮಾಡಿಕೊಂಡಿರುತ್ತದೆ. ಅವರು ಕೇಂದ್ರ ರೈಲ್ವೆ ಪೊಲೀಸರಲ್ಲ. ಬಹುಷಃ ಪ್ರಕರಣ ದಾಖಲಿಸಿ, ವಿಚಾರಣೆಗೆ ಹಾಜರಾಗದೇ ಇರಬಹುದು. ಹಾಗಾಗಿ ಬಂಧಿಸಿರಬಹುದು. ಪ್ರಕರಣ ಕೈಬಿಡಲು ಪ್ರಯತ್ನ ಮಾಡುತ್ತೇನೆ ಎಂದು ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News