ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ವ್ಯಕ್ರಿಯೊಬ್ಬ ಚಾಕುವಿನಿಂದ ಇರಿದ ಘಟನೆ ಬುಧವಾರ ಇಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಆರೋಪಿಯನ್ನು ತುಮಕೂರು ಮೂಲದ ತೇಜಸ್ ಶರ್ಮಾ ಎಂದು ಗುರುತಿಸಲಾಗಿದ್ದು, ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಬಂದಿದ್ದ ಎನ್ನಲಾಗಿದೆ. ಆದರೆ, ಈ ಘಟನೆಗೆ ಕಾರಣವೇನು ಎಂಬುದು ತಿಳಿದ ಬಂದಿಲ್ಲ. ಸದ್ಯ ಆರೋಪಿ ತೇಜಸ್'ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮ ಮೂಲಗಳು ತಿಳಿಸಿವೆ.


ಬೆಂಗಳೂರಿನ ವಿಧಾನಸೌಧದ ಸಮೀಪದಲ್ಲಿರುವ ಲೋಕಾಯುಕ್ತ ಕಚೇರಿ ಸದಾ ಜನಜಂಗುಳಿಯಲ್ಲಿರುವ ಪ್ರದೇಶವಾದರೂ ಈ ಘಟನೆ ಸಂಭವಿಸಿರುವುದು, ಅದರಲ್ಲೂ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತರಿಗೆ ಚಾಕುವಿನಿಂದ ಇರಿದಿರುವುದು ಇನ್ನಷ್ಟು ಆತಂಕ ಸೃಷ್ಟಿಸಿದೆ. 


ಗಾಯಗೊಂಡಿರುವ ವಿಶ್ವನಾಥ್ ಶೆಟ್ಟಿ ಅವರನ್ನು ಮಲ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 


ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.