ಮದುವೆ ಮಾಡಿಸುವ ನೆಪದಲ್ಲಿ ತನ್ನ ಧರ್ಮವನ್ನೇ ಬದಲು ಮಾಡಲಾಗಿದೆ ಎನ್ನುವ ಆರೋಪವನ್ನು ಯುವಕನೊಬ್ಬ ಮಾಡಿದ್ದಾನೆ. ತಾನು ತನಗೆ ಅರಿವಿಳಲ್ದೆ ಲವ್ ಜಿಹಾದ್ ಗೆ ಬಲಿಯಗಿದ್ದೇನೆ ಎಂದು ದೂರಿದ್ದಾನೆ.

ಗದಗ : ಹಿಂದೂ ಯುವತಿಯರನ್ನ ಟಾರ್ಗೆಟ್ ಮಾಡಿ ಲವ್ ಜಿಹಾದ್ ನಡೆಸಲಾಗುತ್ತಿದೆ ಎನ್ನುವ ಆರೋಪ ಇಂದು ನಿನ್ನೆಯದಲ್ಲ. ಈ ಆರೋಪಗಳನ್ನು ಹಿಂದೂ ಸಂಘಟನೆಗಳು ಮಾಡುತ್ತಲೇ ಬರುತ್ತಿವೆ. ಹಿಂದೂ ಯುವತಿಯರು ಅನ್ಯ ಧರ್ಮದ ಯುವಕರನ್ನ ಮದುವೆಯಾದಾಗ ಲವ್ ಜಿಹಾದ್ ಪ್ರಕರಣ ಎನ್ನುವ ಆರೋಪ ಕೇಳಿ ಬರುತ್ತದೆ. ಆದರೆ ಗದಗದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ನಿಖಾ ಮಾಡಿಸೋ ನೆಪದಲ್ಲಿ ಹಿಂದೂ ಯುವಕನ ಧರ್ಮವನ್ನೇ ಬದಲಾಯಿಸಲಾಗಿದೆ ಎಂದು ಸ್ವತಹ ಮದುವೆಯಾದ ಯುವಕನೇ ಆರೋಪಿಸಿದ್ದಾನೆ. ಇಲ್ಲಿ ಮದುವೆಯಾದ ಯುವತಿಯ ವಿರುದ್ಧವೇ ಬಲವಂತವಾಗಿ ಮತಾಂತರ ಮಾಡಿಸಿರುವ ಆರೋಪ ಕೇಳಿ ಬಂದಿದೆ.
ಗದಗ ಬೆಟಗೇರಿಯ ಸೆಟ್ಲ್ ಮೆಂಟ್ ಏರಿಯಾದ ವಿಶಾಲಕುಮಾರ್ ಲವ್ ಜಿಹಾದ್ ಆರೋಪ ಮಾಡಿದ್ದಾನೆ. ನಗರದ ಕುರಟ್ಟಿಪೇಟೆಯ ತಹಸೀನ್ ಹೊಸಮನಿ ಕುಟುಂಬದ ವಿರುದ್ಧ ಬಲವಂತವಾಗಿ ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದೆ.
ಅಂದ ಹಾಗೆ ವಿಶಾಲ್ ಮತ್ತು ತಹಸೀನ್ ಕಳೆದು ಮೂರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ಪ್ರೇಮದ ವಿಷಯವನ್ನ ಮನೆಯವರಿಂದ ಮುಚ್ಚಿಟ್ಟಿದ್ದ ಜೋಡಿ, 2024ರ ನವೆಂಬರ್ 26ನೇ ತಾರೀಕು ರಿಜಿಸ್ಟರ್ ಮದುವೆ ಮಾಡಿಕೊಂಡಿದ್ದಾರೆ. ಈ ಮದುವೆ ವಿಷಯ ತಹಸೀನ್ ಕುಟುಂಬಕ್ಕೆ ಗೊತ್ತಾಗಿದೆ. ವಿಷಯ ಗೊತ್ತಾಗುತ್ತಿದ್ದಂತೆ ಮುಸ್ಲಿಂ ಸಂಪ್ರದಾಯದಂತೆಯೇ ಮದುವೆಗೆ ಮಾಡಿಕೊಳ್ಳಲು ವಿಶಾಲ್ ಗೆ ತಹಸೀನ್ ಕುಟುಂಬ ಒತ್ತಾಯಿಸಿದೆ ಎನ್ನಲಾಗಿದೆ. ತಹಸೀನ್, ಕೆಯ ತಾಯಿ ಬೇಗಂ ಬಾನು, ತಹಸೀನ್ ಸೋದರ ಮಾವ ಇಬ್ರಾಹಿಂ ಖಾನ್, ದಾವಲ್ ಸಾಬ್ ಮುಸ್ಲಿಂ ಸಂಪ್ರದಾಯದಂತೆ ನಿಖಾ ಮಾಡಿಕೊಳ್ಳುವಂತೆ ಒತ್ತಡ ಹೇರಿರುವುದಾಗಿ ಆರೋಪಿಸಲಾಗಿದೆ.
ಪ್ರೀತಿಸಿದ್ದ ಯುವತಿಗಾಗಿ ಮದುವೆಗೆ ಒಪ್ಪಿಕೊಂಡಿದ್ದ ವಿಶಾಲ್ ಕುಮಾರ್, 2025ರ ಏಪ್ರಿಲ್ 25ನೇ ತಾರೀಕು ಮುಸ್ಲಿಂ ಸಂಪ್ರದಾಯದಂತೆ ನಿಖಾ ಮಾಡಿಕೊಂಡಿದ್ದ. ನಗರದ ಮುಳಗುಂದ ನಾಕಾ ಬಳಿ ಇರುವ ಉಮರಬೀನ್ ಕತ್ತಾಬ ಮಸೀದಿಯಲ್ಲಿ ನಿಖಾ ನಡೆದಿತ್ತು. ಆದರೆ, ವಿಶಾಲ್ ಗೆ ಅರಿವಿಲ್ಲದೇ ನಿಖಾ ನಾಮಾದಲ್ಲಿ ಆತನ ಹೆಸರನ್ನ ವಿರಾಜ್ ಸಾಬ್ ಅಂತಾ ದಾಲಿಸಲಾಗಿದೆಯಂತೆ. ನಿಖಾ ದಫ್ತರ್ ನಲ್ಲಿ ಅಂದರೆ ಮದುವೆಯ ರಿಜಿಸ್ಟರ್ ನಲ್ಲಿ ಬದಲಾದ ಹೆಸರನ್ನ ಉರ್ದುವಿನಲ್ಲಿ ಬರೆಯಲಾಗಿದೆ ಎನ್ನುವ ಆರೋಪ ವಿಶಾಲ್ ನದ್ದು.
ಈ ಮಧ್ಯೆ, ಮದುವೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ವಿಶಾಲ್ ಮನೆಯವರಿಗೆ ಮದುವೆ ಬಗ್ಗೆ ಮಾಹಿತಿ ಸಿಕ್ಕಿದೆ. ವಿಶಾಲ್ ನನ್ನ ಕರೆದು ವಿಚಾರಿಸಿದಾಗ ಮದುವೆಯಾಗಿರುವ ವಿಷಯ ಗೊತ್ತಾಗಿದೆ. ಆಗ ವಿಶಾಲ್ ಕುಟುಂಬದವರು ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ತಹಸೀನ್ ಕುಟುಂಬವರಿಗೆ ತಿಳಿಸಿ ಜೂನ್ 05 ಅನ್ನು ಮದುವೆಗೆ ನಿಗದಿ ಮಾಡಿದ್ದಾರೆ. ಆದರೆ ಆರಂಭದಲ್ಲಿ ಒಪ್ಪಿಗೆ ಸೂಚಿಸಿದ್ದ ತಹಸೀನ್ ಕುಟುಂಬ ಹಿಂದೂ ಸಂಪ್ರದಾಯದ ಮದುವೆಗೆ ನಂತರ ಒಪ್ಪಲಿಲ್ಲವಂತೆ. ಅಲ್ಲದೆ, ವಿಶಾಲ್ ಗೆ ಮುಸ್ಲಿಂ ಧರ್ಮ ಅನುಸರಿಸುವಂತೆ ಒತ್ತಡ ಹೇರಲಾಗುತ್ತಿದೆ ಎನ್ನಲಾಗಿದೆ. ಮತಾಂತರಕ್ಕೆ ಒಪ್ಪಿದಿರುವ ಕಾರಣದಿಂದ ತಹಸೀನ್ ದೂರವಾಗುವಂತೆ ಕುಟುಂಬ ನೋಡಿಕೊಳ್ಳುತ್ತಿದೆ ಎನ್ನುವುದು ವಿಶಾಲ್ ದೂರು. ಇಲ್ಲಿ ಯುವಕನಿಗೆ ನ್ಯಾಯ ಸಿಗಬೇಕು ಎಂದು ಹಿಂದೂ ಸಂಘಟನೆಯವರು ಒತ್ತಾಯ ಮಾಡುತ್ತಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ. ಬಲವಂತದ ಮತಾಂತರ ಮಾಡಿ, ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.