ಮದುವೆಯಾಗುತ್ತೇನೆಂದ ಯುವಕ ರಿಜಿಸ್ಟ್ರಾರ್ ಕಚೇರಿಗೆ ತೆರಳುವಾಗ ಪರಾರಿ.. ಪ್ರೀತಿಸಿದಾಕೆ ಕಂಗಾಲು!!

ಎರಡು ವರ್ಷ ಪ್ರೀತಿ ಎಂದು ನಾಟಕವಾಡಿ, ಕೊನೆಗೂ ಮದುವೆಯಾಗುವುದಾಗಿ ಹೇಳಿ ಇನ್ನೇನು ನೋಂದಣಾಧಿಕಾರಿ ಕಚೇರಿಗೆ ಬರುವ ಮಾರ್ಗ ಮಧ್ಯದಲ್ಲೇ ಯುವಕ ನಾಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ರಾಮಾಪುರದಲ್ಲಿ ನಡೆದಿದೆ. 

Written by - Zee Kannada News Desk | Last Updated : May 5, 2022, 06:06 PM IST
  • ಮದುವೆಯಾಗುತ್ತೇನೆಂದ ಯುವಕ ರಿಜಿಸ್ಟ್ರಾರ್ ಕಚೇರಿಗೆ ತೆರಳುವಾಗ ಪರಾರಿ
  • ಮಾರ್ಗ ಮಧ್ಯದಲ್ಲೇ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ
  • ಹನೂರು ತಾಲೂಕಿನ ರಾಮಾಪುರದಲ್ಲಿ ನಡೆದಿದೆ
ಮದುವೆಯಾಗುತ್ತೇನೆಂದ ಯುವಕ ರಿಜಿಸ್ಟ್ರಾರ್ ಕಚೇರಿಗೆ ತೆರಳುವಾಗ ಪರಾರಿ.. ಪ್ರೀತಿಸಿದಾಕೆ ಕಂಗಾಲು!!  title=
ಚಾಮರಾಜನಗರ

ಚಾಮರಾಜನಗರ: ಎರಡು ವರ್ಷ ಪ್ರೀತಿ ಎಂದು ನಾಟಕವಾಡಿ, ಕೊನೆಗೂ ಮದುವೆಯಾಗುವುದಾಗಿ ಹೇಳಿ ಇನ್ನೇನು ನೋಂದಣಾಧಿಕಾರಿ ಕಚೇರಿಗೆ ಬರುವ ಮಾರ್ಗ ಮಧ್ಯದಲ್ಲೇ ಯುವಕ ನಾಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ರಾಮಾಪುರದಲ್ಲಿ ನಡೆದಿದೆ.

ಇದನ್ನೂ ಓದಿ:ಕೇವಲ 3 ವಾರಗಳಲ್ಲಿ 1084.37 ಕೋಟಿ ರೂ ಗಳಿಸಿದ ಕೆಜಿಎಫ್ 2..!

ಹನೂರು ತಾಲೂಕಿನ ಗ್ರಾಮವೊಂದರ 20 ವರ್ಷದ ಯುವತಿ ಮೋಸ ಹೋದಾಕೆ.  ಪೊನ್ನಾಚಿ ಗ್ರಾಮದ ಪರಂಜ್ಯೋತಿ(25) ಎಂಬ ಯುವಕ ಯುವತಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ.  ಇಬ್ಬರು ಪ್ರೇಮಿಗಳಾಗಿ ಎರಡು ವರ್ಷ ಕಾಲ ಕಳೆದಿದ್ದಾರೆ.ಮದುವೆಯಾಗು ಎಂದಾಗ ಮೊದಮೊದಲು ಯುವಕ ನಿರಾಕರಿಸಿದ್ದಾನೆ ಎನ್ನಲಾಗಿದೆ.

ಬಳಿಕ ನಡೆದ ಪಂಚಾಯಿತಿಯಲ್ಲಿ ಮದುವೆಯಾಗುವುದಾಗಿ ಒಪ್ಪಿ ವಿವಾಹ ನೋಂದಣಿಗಾಗಿ ರಾಮಾಪುರಕ್ಕೆ ತೆರಳುವ ಮಾರ್ಗ ಮಧ್ಯೆಯೇ ಪರಾರಿಯಾಗಿದ್ದಾನೆ. ಸದ್ಯ ಮೋಸ ಹೋದ ಯುವತಿ  ರಾಮಾಪುರ ಪೊಲೀಸ್​​ ಠಾಣೆಗೆ ದೂರು ನೀಡಿದ್ದಾಳೆ.

ಇದನ್ನೂ ಓದಿ:ಮೇ 20ಕ್ಕೆ ಹೊಸಬರ ಕಟ್ಟಿಂಗ್ ಶಾಪ್ ರಿಲೀಸ್... ಹೇಗಿದೆ ಟ್ರೇಲರ್ ಝಲಕ್?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News