ಬೆಳಗಾವಿ: ನಾಡದ್ರೋಹಿ ಎಂಇಎಸ್‍ನಿಂದ ಮತ್ತೆ ಗಡಿ ಕ್ಯಾತೆ ಆರಂಭವಾಗಿದೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಎಂಇಎಸ್‍ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ನಡೆಸಲು ಪ್ಲಾನ್ ಮಾಡಲಾಗಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಾಡದ್ರೋಹಿಗಳು ಕರಾಳ‌ ದಿನದ ಪೋಸ್ಟ್ ಹಾಕುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಫೇಸ್‍ಬುಕ್‍ ಪೇಜ್‍ನಲ್ಲಿ ಎಂಇಎಸ್‍  ನಾಡದ್ರೋಹಿಗಳಿಂದ ಪೋಸ್ಟ್‌ ಹಾಕಿದ್ದಾರೆ. ಚಳಿಗಾಲ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್‍ಗೆ ತೀರ್ಮಾನಿಸಲಾಗಿದೆ. ನಾಡದ್ರೋಹಿ MES ಮಹಾಮೇಳಾವ್‍ಗೆ ಈಗಿಂದಲೇ ಸಿದ್ಧತೆ ನಡೆಯುತ್ತಿದೆ.


ಇದನ್ನೂ ಓದಿ: ಹಳ್ಳಕ್ಕೆ ಇಳಿದ ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್: 25 ಮಂದಿಗೆ ಗಾಯ


ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬರುವ ಡಿಸೆಂಬರ್ ತಿಂಗಳಲ್ಲಿ 10 ದಿನಗಳ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಸಂದರ್ಭದಲ್ಲಿ ಗಡಿ ಖ್ಯಾತೆ ತೆಗೆಯಲು ಎಂಇಎಸ ಪ್ಲಾನ್ ಮಾಡಿಕೊಂಡಿದೆ. ಚುನಾವಣಾ ವರ್ಷ ಆಗಿದ್ದರಿಂದ ರಾಜಕೀಯ ಬೆಳೆ ಬೆಯಿಸಿಕೊಳ್ಳಲು ಎಂಇಎಸ್ ಹುನ್ನಾರ ನಡೆಸಿದೆ. ಎಂಇಎಸ್‍ನ ಮಾಜಿ ಶಾಸಕ ಮನೋಹರ ಕಿಣೇಕರ್ ನೇತೃತ್ವದಲ್ಲಿ ಮುಖಂಡರಿಂದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ.


ಬೆಳಗಾವಿ ಜನರು ಪ್ರಶ್ನಿಸುತ್ತಿದ್ದಾರೆ.


ಇದನ್ನೂ ಓದಿ: ಮಾದಪ್ಪನ‌ ದೀಪಾವಳಿ ತೇರು ಸಂಪನ್ನ: ಡ್ರೋಣ್ ನಲ್ಲಿ ವೈಭವ ಸೆರೆ!!


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ