ಮಳಲಿ ಮಸೀದಿ ಜಾಗದಲ್ಲಿ ಶಿವ ಸಾನಿಧ್ಯ ಗೋಚರ!

ಈ ಬಳಿಕ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌, "ನಮ್ಮ ಪೂರ್ವಜರು ಇಲ್ಲಿ ದೇವರ ಆರಾಧನೆ ಮಾಡುತ್ತಿದ್ದ ಬಗ್ಗೆ ಸ್ಪಷ್ಟನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಮಳಲಿ ಮಸೀದಿಯ ಆಡಳಿತ ಮಂಡಳಿಗೆ, ಅಲ್ಲಿರುವ ಜಾಗ ಬಿಟ್ಟುಕೊಡುವಂತೆ ಮನವಿ ಮಾಡುತ್ತೇವೆ. ಈ ಸಂಬಂಧ ನಾವು ಹೋರಾಟ ಮುಂದುವರೆಸಲಿದ್ದೇವೆ" ಎಂದು ಹೇಳಿದರು. 

Written by - Bhavishya Shetty | Last Updated : May 25, 2022, 11:56 AM IST
  • ಮಸೀದಿ ಜಾಗದಲ್ಲಿ ದೈವ ಸಾನಿಧ್ಯ ಇರೋದು ಸ್ಪಷ್ಟ
  • ಶಿವ ಸಾನಿಧ್ಯ ಇತ್ತೆಂದ ತಾಂಬೂಲ ಪ್ರಶ್ನೆ
  • ಮಳಲಿ ಮಸೀದಿ ಜಾಗದಲ್ಲಿ ದೇವಸ್ಥಾನದ ಕುರುಹು ಪತ್ತೆ
ಮಳಲಿ ಮಸೀದಿ ಜಾಗದಲ್ಲಿ ಶಿವ ಸಾನಿಧ್ಯ ಗೋಚರ!  title=
Malali Temple

ದಕ್ಷಿಣ ಕನ್ನಡ: ಮಂಗಳೂರಿನ ಮಳಲಿ ಎಂಬಲ್ಲಿನ ಮಸೀದಿಯ ಜಾಗದಲ್ಲಿ ದೈವ ಸಾನಿಧ್ಯ ಇರೋದು ಸ್ಪಷ್ಟವಾದ ಬಳಿಕ ಇದೀಗ ಮಹತ್ತರ ಮಾಹಿತಿಯೊಂದು ಜೀ ಕನ್ನಡ ನ್ಯೂಸ್‌ಗೆ ಲಭಿಸಿದೆ. ತಾಂಬೂಲ ಪ್ರಶ್ನೆಯಲ್ಲಿ ಗುರುಮಠ ಶಿವನ ಸಾನಿಧ್ಯವಿರೋದು ಗೋಚರವಾಗಿದೆ ಎಂದು ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. 

ಮಂಗಳೂರಿನ ಮಳಲಿ ಮಸೀದಿ ವಿವಾದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದು, ಮಸೀದಿ ಸ್ಥಳದಲ್ಲಿ ದೈವಸ್ಥಾನ ಇತ್ತೋ ಇಲ್ಲವೋ ಎಂಬುದರ ಬಗ್ಗೆ ಪಶ್ನೆ ಇಡಲಾಗಿದೆ. "ಪೂರ್ವಜರು ದೈವಾರಾಧನೆ ಮಾಡುತ್ತಿದ್ದ ಸ್ಥಳ ಇದಾಗಿದ್ದು, ಯಾವುದೋ ಕಾರಣಕ್ಕೆ ಇಲ್ಲಿಂದ ಅವರು ಹೋಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಅಷ್ಟಮಂಗಲ ಪ್ರಶ್ನಾ ಚಿಂತನೆ ಮೂಲಕ ಪಡೆಯಲಾಗುತ್ತದೆ" ಎಂದು ಜೀ ಕನ್ನಡ ನ್ಯೂಸ್‌ಗೆ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದರು. 

ಇದನ್ನು ಓದಿ: "ಮಸೀದಿ ಜಾಗದಲ್ಲಿ ದೈವ ಸಾನಿಧ್ಯ ಇರೋದು ಸ್ಪಷ್ಟ"

ಈ ಬಳಿಕ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌, "ನಮ್ಮ ಪೂರ್ವಜರು ಇಲ್ಲಿ ದೇವರ ಆರಾಧನೆ ಮಾಡುತ್ತಿದ್ದ ಬಗ್ಗೆ ಸ್ಪಷ್ಟನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಮಳಲಿ ಮಸೀದಿಯ ಆಡಳಿತ ಮಂಡಳಿಗೆ, ಅಲ್ಲಿರುವ ಜಾಗ ಬಿಟ್ಟುಕೊಡುವಂತೆ ಮನವಿ ಮಾಡುತ್ತೇವೆ. ಈ ಸಂಬಂಧ ನಾವು ಹೋರಾಟ ಮುಂದುವರೆಸಲಿದ್ದೇವೆ" ಎಂದು ಹೇಳಿದರು. 

ಮಂಗಳೂರು ನಗರದ ಹೊರವಲಯದ ಮಳಲಿ ಮಸೀದಿಯಲ್ಲಿ ದೇವಸ್ಥಾನ ಶೈಲಿಯ ಕಟ್ಟಡ ಪತ್ತೆಯಾಗಿತ್ತು. ಈ ವಿಚಾರದಲ್ಲಿ ಇಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರು ತಾಂಬೂಲ ಪ್ರಶ್ನೆಯನ್ನಿಟ್ಟು, ಇಲ್ಲಿ ಗುರುಸಾನಿಧ್ಯ ಇತ್ತೋ ಇಲ್ಲವೋ ಎಂಬುರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಸೀದಿ ಜಾಗದಲ್ಲಿ ದೈವ ಸಾನಿಧ್ಯ ಇರೋದು ಸ್ಪಷ್ಟವಾಗಿದೆ" ಎಂದು ಹೇಳಿದ್ದಾರೆ. 

"ಹಿಂದಿನ‌ ಕಾಲದ ವ್ಯಾಜ್ಯವೊಂದರ ಪರಿಣಾಮ ಇಲ್ಲಿ ಹಿಂದೆ ಇದ್ದ ದೈವ ಸಾನಿಧ್ಯವು ನಾಶವಾಗಿದೆ. ಹಾಗಾಗಿ ಹಿಂದೆ ಇದ್ದವರು ಅಲ್ಲಿಂದ ಸ್ಥಳಾಂತರಗೊಂಡಿದ್ದಾರೆ. ಆದರೆ ದೈವ ಸಾನಿಧ್ಯವು ಅಲ್ಲಿಂದ ಪೂರ್ತಿಯಾಗಿ ಹೋಗಿಲ್ಲ. ಆದರೆ ಯಾವ ಸ್ಥಳದಲ್ಲಿ ದೈವ ಸಾನಿಧ್ಯವಿದೆ ಎಂದು ಶೋಧಿಸಬೇಕು. ಆ ಸಾನಿಧ್ಯದಲ್ಲಿ ಜೀವ ಕಳೆಯಿದೆ" ಎಂದು ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದರು. 

ಇದನ್ನು ಓದಿ: ಮಂಗಳೂರಿನ ಮಸೀದಿಯಲ್ಲಿ ದೇವಸ್ಥಾನದ ಕುರುಹು ಪತ್ತೆ: ತಾಂಬೂಲ ಪ್ರಶ್ನೆ ಮೂಲಕ ಸಿಗಲಿದೆ ಉತ್ತರ

"ಶೈವ - ವೈಷ್ಣವ ವಿವಾದದಲ್ಲಿ ಇಲ್ಲಿ ಹಿಂದಿನ ದೈವ ಸಾನಿಧ್ಯ ನಾಶವಾಗಿದೆ‌. ಈ ಸಂದರ್ಭ ಮರಣವೊಂದು ಘಟಿಸಿದೆ. ಆ ಬಳಿಕ ಹಿಂದೆ ಅಲ್ಲಿದ್ದವರು ಈ ದೈವ ಸಾನಿಧ್ಯವನ್ನು ಬೇರೆಲ್ಲಿಯೋ ಆರಾಧನೆ ಮಾಡುತ್ತಿದ್ದಾರೆ‌. ಅದರ ಫಲವಾಗಿ ಈಗಲೂ ಈ ಮಸೀದಿಯ ಸ್ಥಳದಲ್ಲಿರುವ ದೈವಸಾನಿಧ್ಯಕ್ಕೆ ಚೈತನ್ಯ ಶಕ್ತಿ ಇದೆ. ಆದ್ದರಿಂದ ಈಗ ಅದು ಗೋಚರವಾಗಿದೆ. ಆದರೆ ಎಲ್ಲರೂ ಒಗ್ಗಟ್ಟಾಗಿ ಸಮ್ಮತದಿಂದ ಈ ವಿವಾದವನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಊರಿಗೆ ಗಂಡಾಂತರವಿದೆ. ಈ ದೈವ ಸಾನಿಧ್ಯ ಅಭಿವೃದ್ಧಿ ಆದಲ್ಲಿ ಈಗ ಅಲ್ಲಿ ಇದ್ದವರಿಗೂ ಉತ್ತಮವೇ. ಆದ್ದರಿಂದ ಎಲ್ಲರೂ ಒಟ್ಟಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ" ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

 

Trending News